ಸುಸ್ಥಿರ ಅಭಿವೃದ್ಧಿಯ ಮುಖ್ಯ ಸಾಧನ ಲಿಂಗ ಸಮಾನತೆ


Team Udayavani, Apr 8, 2021, 6:30 AM IST

ಸುಸ್ಥಿರ ಅಭಿವೃದ್ಧಿಯ ಮುಖ್ಯ ಸಾಧನ ಲಿಂಗ ಸಮಾನತೆ

ಬಾಲ್ಯದಿಂದ ಮುಪ್ಪಿನವರೆಗೆ ಕುಟುಂಬದ ಆರೈಕೆಯಲ್ಲಿ ತೊಡಗಿಸಿಕೊಳ್ಳುವ ಮಹಿಳೆಯು ದೇಶದ ಆರ್ಥಿಕ ಬೆಳವಣಿಗೆಯ ಅವಿಭಾಜ್ಯ ಅಂಗವಾಗಿದ್ದರೂ ಆಕೆಗೆ ಸಮಾನ ಸ್ಥಾನಮಾನದ ಅವಕಾಶ ದೊರೆಯಲು ಇನ್ನೂ 136 ವರ್ಷ ಕಾಯಬೇಕಾಗಬಹುದು ಎಂಬ ವರದಿ ನಮ್ಮ ಪ್ರಗತಿಯ ವೇಗವನ್ನು ಪ್ರತಿಬಿಂಬಿಸುತ್ತದೆ.

ವಿಶ್ವ ಆರ್ಥಿಕ ವೇದಿಕೆಯು ಮಾರ್ಚ್‌ 30ರಂದು ಬಿಡುಗಡೆ ಮಾಡಿರುವ ಜಾಗತಿಕ ಲಿಂಗ ಅಂತರ 2021ರ ವರದಿಯ ಪ್ರಕಾರ ಮಹಿಳೆಯರು ಲಿಂಗ ಸಮಾನತೆಗಾಗಿ ಸರಿಸುಮಾರು ಒಂದೂವರೆ ಶತನಮಾನದಷ್ಟು ಕಾಯಬೇಕಾಗುತ್ತದೆ. ಜಾಗತಿಕ ಲಿಂಗ ಅಂತರ ಸೂಚ್ಯಂಕವು ಆರೋಗ್ಯದ ತುರ್ತುಸ್ಥಿತಿ ಮತ್ತು ಸಂಬಂಧಿತ ಆರ್ಥಿಕ ಕುಸಿತವು ಪುರುಷರಿಗಿಂತ ಮಹಿಳೆಯರ ಮೇಲೆ ಹೆಚ್ಚು ಪರಿಣಾಮ ಬೀರಿದೆ ಎಂದು ಪ್ರಾಥಮಿಕ ಸಾಕ್ಷ್ಯಗಳು ಸೂಚಿಸುತ್ತವೆ.

ಜಾಗತಿಕವಾಗಿ ಸಮಾನತೆಗೆ ಪೂರ್ಣಗೊಂಡ ಸರಾಸರಿ ಅಂತರವು ಶೇ.68ರಷ್ಟಾಗಿದ್ದು, ಇದು 2020ಕ್ಕೆ ಹೋಲಿಸಿದರೆ ಒಂದು ಹೆಜ್ಜೆ ಹಿಂದಿದೆ(ಶೇ. -0.6). 2020ರ ವರದಿಯು ಮುಂದಿನ 99.5 ವರ್ಷಗಳಲ್ಲಿ ಜಾಗತಿಕವಾಗಿ ಲಿಂಗ ಅಂತರವನ್ನು ತೊಡೆದುಹಾಕಬಹುದಾಗಿದೆ ಎಂದು ಉಹಿಸಲಾಗಿತ್ತು. ಆದರೆ ಪ್ರಸ್ತುತ ದರದಲ್ಲಿ ಈ ಅಂತರವನ್ನು ಮುಚ್ಚಲು 135.6 ವರ್ಷಗಳು ಅಂದರೆ ಹೆಚ್ಚುವರಿಯಾಗಿ 36 ವರ್ಷಗಳು ಬೇಕು ಎಂದು ಅಂದಾಜಿಸಲಾಗಿದೆ.

ಜಾಗತಿಕ ಲಿಂಗ ಅಂತರ ಸೂಚ್ಯಂಕ
ಜಾಗತಿಕ ಲಿಂಗ ಅಂತರ ಸೂಚ್ಯಂಕವು ಆರ್ಥಿಕ ಭಾಗವಹಿಸುವಿಕೆ ಮತ್ತು ಅವಕಾಶ, ಶೈಕ್ಷಣಿಕ ಸಾಧನೆ, ಆರೋಗ್ಯ ಮತ್ತು ಬದುಕುಳಿಯುವಿಕೆ ಮತ್ತು ರಾಜಕೀಯ ಸಶಕ್ತೀಕರಣ ಎಂಬ ನಾಲ್ಕು ಪ್ರಮುಖ ಆಯಾಮಗಳಲ್ಲಿ ಲಿಂಗ ಆಧಾರಿತ ಅಂತರಗಳ ವಿಕಾಸವನ್ನು ಮಾನದಂಡವಾಗಿ ಗುರುತಿ ಸುತ್ತದೆ ಮತ್ತು ಕಾಲಾನಂತರದಲ್ಲಿ ಈ ಅಂತರವನ್ನು ಮುಚ್ಚುವ ಪ್ರಗತಿಯನ್ನು ಪತ್ತೆ ಮಾಡುತ್ತದೆ.

ಕೋವಿಡ್‌-19 ಸಾಂಕ್ರಾಮಿಕವು ಮೊದಲೇ ಅಸ್ತಿತ್ವದಲ್ಲಿರುವ ಲಿಂಗ ಅಂತರವನ್ನು ವೃದ್ದಿಸಿ, ಒಳಗೊಳ್ಳುವ ಹಾಗೂ ಸಮೃದ್ಧ ಆರ್ಥಿಕತೆಯ ಬೆಳವಣಿಗೆಯಲ್ಲಿ ಹೊಸ ಅಡೆತಡೆಗಳನ್ನು ಹುಟ್ಟುಹಾಕಿದೆ ಎಂದು ವರದಿಯು ತಿಳಿಸಿದೆ. ಫಿನ್ಲಂಡ್‌, ನಾರ್ವೆ, ನ್ಯೂಜಿಲ್ಯಾಂಡ್‌, ರುವಾಂಡ, ಸ್ವೀಡನ್‌, ಐರ್ಲೆಂಡ್‌ ಮತ್ತು ಸ್ವಿಟ್ಸರ್‌ಲೆಂಡ್‌ ಮೊದಲ ಲಿಂಗ ಸಮಾನ ದೇಶಗಳಾಗಿದ್ದರೆ ಸಿರಿಯಾ, ಪಾಕಿಸ್ಥಾನ, ಇರಾಕ್‌, ಯಮನ್‌ ಮತ್ತು ಅಫ್ಘಾನಿಸ್ಥಾನ ಪಟ್ಟಿಯಲ್ಲಿರುವ ಕೊನೆಯ ಐದು ದೇಶಗಳು.

ಜಾಗತಿಕ ಮಟ್ಟದಲ್ಲಿ ಕುಸಿದ ಭಾರತದ ಸ್ಥಾನ
ವಿಶ್ವ ಆರ್ಥಿಕ ವೇದಿಕೆಯು ಬಿಡುಗಡೆ ಮಾಡಿದ ಜಾಗತಿಕ ಲಿಂಗ ಅಂತರ ಸೂಚ್ಯಂಕದಲ್ಲಿ 2010ಕ್ಕೆ ಹೋಲಿಸಿದರೆ ಭಾರತವು 28 ಸ್ಥಾನಗಳನ್ನು ಕಳೆದು ಕೊಂಡು 156 ದೇಶಗಳಲ್ಲಿ 140ನೇ ಸ್ಥಾನದಲ್ಲಿದೆ.

ಲಿಂಗ ಸಮಾನತೆಯು ಮೂಲಭೂತ ಮಾನವ ಹಕ್ಕು ಮಾತ್ರವಲ್ಲ, ಶಾಂತಿಯುತ, ಸಮೃದ್ಧ ಮತ್ತು ಸುಸ್ಥಿರ ಜಗತ್ತಿಗೆ ಅಗತ್ಯವಾದ ಅಡಿಪಾಯವಾಗಿದೆ. ಸ್ತ್ರೀ-ಪುರುಷ ಸಮಾನತೆಯ ವಿಚಾರದಲ್ಲಿ ಮುಖ್ಯವಾಗಿ ಆರ್ಥಿಕ ಅವಕಾಶಗಳು, ಆರೋಗ್ಯ, ಶಿಕ್ಷಣ, ರಾಜಕೀಯ ಕ್ಷೇತ್ರಗಳಲ್ಲಿ ನಮ್ಮ ಜಾಗತಿಕ ಸ್ಥಾನ ಮೇಲೇರುವ ಬದಲು ಕುಸಿಯುತ್ತಾ ಸಾಗಿರುವುದು ಕಳವಳಕಾರಿ.

ರಾಜಕೀಯ ಸಶಕ್ತೀಕರಣದಲ್ಲಿ ಹೆಚ್ಚಿನ ಕುಸಿತ ಸಂಭವಿಸಿದೆ. ಆರ್ಥಿಕ ಭಾಗವಹಿಸುವಿಕೆ ಮತ್ತು ಅವಕಾಶ ಮಾನದಂಡದಲ್ಲಿಯೂ ಕುಸಿತ ಕಂಡು ಬಂದಿದೆ. ಮಹಿಳಾ ಕಾರ್ಮಿಕ ಬಲ ಶೇ. 24.8ರಿಂದ 22.3ಕ್ಕೆ ಇಳಿಕೆ ಹಾಗೂ ಮಹಿಳೆಯರ ಅಂದಾಜು ಗಳಿಕೆ ಪುರುಷರ ಗಳಿಕೆಯ ಐದನೇ ಒಂದು ಭಾಗಕ್ಕೆ ಇಳಿದಿರುವುದು ಆಘಾತಕಾರಿ ಅಂಶ.

ಇದಕ್ಕೆ ವ್ಯತಿರಿಕ್ತವಾಗಿ ಶೈಕ್ಷಣಿಕವಾಗಿ ಪ್ರಾಥಮಿಕ, ಪ್ರೌಢ ಮತ್ತು ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಸಮಾನತೆಯನ್ನು ಸಾಧಿಸಿದರೂ ಸಾಕ್ಷರತೆಯ ದೃಷ್ಟಿಯಿಂದ ಲಿಂಗ ಅಂತರವು ಮುಂದುವರಿದಿದೆ. ಪುರುಷರಲ್ಲಿ ಶೇ. 17.6 ಅನಕ್ಷರಸ್ಥರಿದ್ದರೆ, ಮಹಿಳೆಯರಲ್ಲಿ ಶೇ. 34.2 ಅನಕ್ಷರಸ್ಥರಿದ್ದಾರೆ. ಭಾರತದಲ್ಲಿ ಮನೆಗಳು, ಕೆಲಸದ ಸ್ಥಳಗಳು ಮತ್ತು ಸಾಮಾಜಿಕ ಸ್ತರಗಳಲ್ಲಿ ಲಿಂಗ ಅಸಮಾನತೆಯನ್ನು ಕಾಣಬಹುದಾಗಿದೆ. 2011ರ ಅಂಕಿ ಅಂಶದ ಪ್ರಕಾರ, ಪರಿಣಾಮಕಾರಿ ಸಾಕ್ಷರತೆಯ ಪ್ರಮಾಣ(ವಯಸ್ಸು 7 ಮತ್ತು ಮೇಲ್ಪಟ್ಟವರು) ಪುರುಷರಲ್ಲಿ ಶೇ. 82.14 ಆಗಿದ್ದರೆ ಮಹಿಳೆಯರಲ್ಲಿ ಶೇ. 65.46 ಆಗಿರುತ್ತದೆ.

ಮುಂದಿನ ಹೆಜ್ಜೆ
“ಪಕ್ಷಿಗೆ ಹೇಗೆ ಒಂದೇ ರೆಕ್ಕೆಯಿಂದ ಹಾರುವುದು ಅಸಾಧ್ಯವೋ ಹಾಗೆ ಮಹಿಳೆಯರ ಸ್ಥಿತಿಗತಿಗಳು ಉತ್ತಮ ಗೊಳ್ಳದ ಹೊರತು ಜಗತ್ತಿನ ಕಲ್ಯಾಣದ ಬಗ್ಗೆ ಚಿಂತಿಸುವುದು ಅಸಾಧ್ಯ’ ಎಂದು ಸ್ವಾಮಿ ವಿವೇಕಾನಂದರು ಅಭಿಪ್ರಾಯಪಟ್ಟಿದ್ದರು.
ಅಸುರಕ್ಷಿತ ವಾತಾವರಣವು ಖಂಡಿತವಾಗಿಯೂ ಅವರ ಬೆಳವಣಿಗೆಗೆ ಮತ್ತು ಮುಖ್ಯವಾಗಿ ದೇಶದ ಬೆಳವಣಿಗೆಗೆ ಅವರು ನೀಡಬಹುದಾದ ಕೊಡುಗೆಗೆ ಬಹುದೊಡ್ಡ ಅಡ್ಡಿಯೇ ಹೌದು. ಲಿಂಗ ಸಮಾನತೆಯ ಸಮ ಸಮಾಜವನ್ನು ಸೃಷ್ಟಿಸುವ ವಿಚಾರದಲ್ಲಿ ಸರಕಾರಗಳ ಮೇಲೆ ಎಷ್ಟು ಜವಾಬ್ದಾರಿ ಇದೆಯೋ, ಅಷ್ಟೇ ಜವಾಬ್ದಾರಿ ಸಮಾಜದ ಮೇಲೆಯೂ ಇದೆ ಎನ್ನುವುದನ್ನು ಮನಗಾಣಬೇಕಾಗಿದೆ.

ಒಂದು ಸಲ ಮಹಿಳೆ ಪ್ರಗತಿಪಥದಲ್ಲಿ ಚಲಿಸಲು ಆರಂಭಿಸಿದರೆ ಇಡೀ ಕುಟುಂಬ, ಹಳ್ಳಿ ಮತ್ತು ಸಂಪೂರ್ಣ ದೇಶ ಪ್ರಗತಿಯಾಗುತ್ತದೆ ಎಂಬುದನ್ನು ತ್ರಿಕರಣಪೂರ್ವಕವಾಗಿ ಒಪ್ಪಿಕೊಂಡು ಮಹಿಳಾ ಸಶಕ್ತೀಕರಣದ ಹೆಜ್ಜೆಗಳನ್ನು ಬಲಗೊಳಿಸಬೇಕಾಗಿದೆ.

– ಡಾ| ಎ. ಜಯ ಕುಮಾರ ಶೆಟ್ಟಿ , ಉಜಿರೆ

ಟಾಪ್ ನ್ಯೂಸ್

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.