ಹರಿಹರ: ಸರ್ಕಾರಿ ಬಸ್ ಸಂಚಾರ ಸಂಪೂರ್ಣ ಬಂದ್
Team Udayavani, Apr 8, 2021, 5:40 PM IST
ಹರಿಹರ: ಆರನೇ ವೇತನ ಆಯೋಗದ ಅನುಸಾರ ವೇತನ ಪರಿಷ್ಕರಣೆಗೆ ಆಗ್ರಹಿಸಿ ನೌಕರರ ರಾಜ್ಯ ವ್ಯಾಪಿ ಮುಷ್ಕರದಿಂದಾಗಿ ತಾಲೂಕಿನಾದ್ಯಂತ ಬುಧವಾರ ಕೆಎಸ್ ಆರ್ಟಿಸಿ ಬಸ್ಗಳ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಬೆಳಿಗ್ಗೆ 8 ರಿಂದ ಯಾವುದೇ ಬಸ್, ನಿಲ್ದಾಣಕ್ಕೆ ಬರಲಿಲ್ಲ. ತಾಲೂಕಿನಲ್ಲಿ ಖಾಸಗಿ ಬಸ್ ಸೌಲಭ್ಯ ಕಡಿಮೆ,. ಗ್ರಾಮೀಣ ಭಾಗದಿಂದ ಹರಿಹರ, ದಾವಣಗೆರೆಗೆ ಬಂದು ಹೋಗುವ ವಿದ್ಯಾರ್ಥಿಗಳು, ನೌಕರರು, ಸಾರ್ವಜನಿಕರಿಗೆ ತೀವ್ರ ತೊಂದರೆಯಾಯಿತು. ಹಲವರು ಟೆಂಪೊ, ಆಟೋ, ಮೆಟಡಾರ್ಗಳನ್ನು ಆಶ್ರಯಿಸಿದರು.
ಖಾಸಗೀ ಬಸ್ಗಳು, ಮತ್ತಿತರೆ ವಾಹನಗಳಲ್ಲಿ ಮಿತಿ ಮೀರಿ ಪ್ರಯಾಣಿಕರನ್ನು ತುಂಬುವುದು, ಹೆಚ್ಚುವರಿ ಪ್ರಯಾಣ ದರ ವಿ ಧಿಸುವುದು ಸೇರಿದಂತೆ ವಿವಿಧ ರೀತಿಯಲ್ಲಿ ಪ್ರಯಾಣಿಕರ ಶೋಷಣೆಯಾಗುತ್ತಿರುವುದು ಕಂಡುಬಂತು. ಹರಿಹರ-ದಾವಣಗೆರೆ ಮಧ್ಯೆ ನಿಗ ದಿತ 15 ರೂ. ಬದಲು 20 ರೂ. ಪಡೆಯಲಾಗುತ್ತಿದೆ ಎಂದು ಪ್ರಯಾಣಿಕರು ಆರೋಪಿಸಿದರು.
ಹರಪನಹಳ್ಳಿ, ಶಿವಮೊಗ್ಗ, ದಾವಣಗೆರೆ, ಹುಬ್ಬಳ್ಳಿ ರಸ್ತೆಯಲ್ಲೂ ವಾಹನಗಳ ಸಂಚಾರ ಕಡಿಮೆ ಇತ್ತು. ಮುಷ್ಕರದ ಮಾಹಿತಿ ಇಲ್ಲದೆ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಪರದಾಡಿದರು. ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ರಾಜ್ಯದ ನಾಲ್ಕು ದಿಕ್ಕುಗಳಿಗೆ ಸಾಗುವ 1500 ಬಸ್ಗಳು ಬಂದು ಹೋಗುತ್ತವೆ. ಇಲ್ಲಿನ ಸಂಸ್ಥೆಯ ಡಿಪೋದಿಂದ 100ಕ್ಕೂ ಹೆಚ್ಚು ಮಾರ್ಗಗಳಿಗೆ ಬಸ್ ಸಂಚಾರವಿದೆ. ಸಮೀಪದ ಡಿಪೋದಲ್ಲೂ ಮ್ಯಾನೇಜರ್ ಹಾಗೂ ಇತರೆ ಕೆಲವು ಹಿರಿಯ ಅ ಧಿಕಾರಿಗಳನ್ನು ಹೊರತುಪಡಿಸಿದರೆ ಉಳಿದೆಲ್ಲಾ ನೌಕರರು ಕೆಲಸಕ್ಕೆ ಹಾಜರಾಗಲಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ