ಬಾಬಾಗೌಡ-ಡಿಕೆಶಿ ಸಮಾಲೋಚನೆ
Team Udayavani, Apr 9, 2021, 8:38 PM IST
ಹಿರೇಬಾಗೇವಾಡಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರೈತ ನಾಯಕ, ಕೇಂದ್ರ ಮಾಜಿ ಸಚಿವ ಬಾಬಾಗೌಡ ಪಾಟೀಲ ಅವರ ಚಿಕ್ಕಬಾಗೇವಾಡಿ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು.
ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ, ಶಿವಕುಮಾರ, ಕೇಂದ್ರ ಮಾಜಿ ಸಚಿವ, ರೈತ ಹೋರಾಟಗಾರ ಬಾಬಾಗೌಡ ಪಾಟೀಲ ಅವರನ್ನು ಭೇಟಿ ಮಾಡಲು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ವರಿಷ್ಠರು ಹೇಳಿದ್ದರು. ಹೀಗಾಗಿ ಅವರನ್ನು ಭೇಟಿ ಮಾಡಿದ್ದೇವೆ ಎಂದರು.
ರಾಷ್ಟ್ರದಲ್ಲಿ ರೈತರ ವಿರೋಧ ನೀತಿ ತಂದಿದ್ದಾರೆ. ಕೊರೊನಾ ಸಂದರ್ಭದಲ್ಲಿ ಬಿಜೆಪಿ ರೈತರ ಕೈ ಹಿಡಿದಿಲ್ಲ. ಮೂರು ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಉತ್ತರ ನೀಡಲು ಜನರು ಸಜ್ಜಾಗಿದ್ದಾರೆ. ಕಾಂಗ್ರೆಸ್ಗೆ ಬೆಂಬಲ ನೀಡುವಂತೆ ರೈತ ಹೋರಾಟಗಾರರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.
ರೈತರ ಹೋರಾಟ ವಿಫಲ ಆಗಬಾರದು. ಫಲ ಸಿಗಬೇಕು ಹೀಗಾಗಿ ಅವರ ಹೋರಾಟಕ್ಕೆ ಬೆಂಬಲ ನೀಡಿದ್ದೇವೆ. ನಮಗೂ ಬೆಂಬಲ ನೀಡಿ ಅಂತ ಕೇಳಿದ್ದೇನೆ ಎಂದರು. ಬಾಬಾಗೌಡ ಪಾಟೀಲ ಮಾತನಾಡಿ, ಬಿಜೆಪಿಯನ್ನು ಮನೆಗೆ ಕಳುಹಿಸಬೇಕು. ನಾವೆಲ್ಲರೂ ಒಂದುಗೂಡಬೇಕು. ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುವ ಕುರಿತು ರೈತರ ಜೊತೆಗೆ ಸಭೆ ಮಾಡಿ ನಿರ್ಧರಿಸಲಾಗುವುದು ಎಂದು ಹೇಳಿದರು.
ಕೇಂದ್ರದ ಮಾಜಿ ಸಚಿವ ಕೆ.ಎಚ್ ಮುನಿಯಪ್ಪ, ಕಾಂಗ್ರೆಸ್ ಕಿಸಾನ್ ಘಟಕದ ರಾಜ್ಯಾಧ್ಯಕ್ಷ ಸಚಿನ ಮೀಗಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ