ಶುಚಿ-ರುಚಿ ಆಹಾರ ನೀಡಲು ಒತ್ತಾಯ
Team Udayavani, Apr 9, 2021, 9:26 PM IST
ಕುಷ್ಟಗಿ : ಹೊರವಲಯದ ಪರಿಶಿಷ್ಟ ವರ್ಗಗಳ ಸರ್ಕಾರಿ ಮೆಟ್ರಿಕ್ ನಂತರದ ವಿದ್ಯಾರ್ಥಿ ವಸತಿ ನಿಲಯದಲ್ಲಿ ನಿತ್ಯ ಶುಚಿ-ರುಚಿ ಇಲ್ಲದ ಆಹಾರ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಗುರುವಾರ ಬೆಳಗ್ಗೆ ವಸತಿ ನಿಲಯದಲ್ಲಿ ಅವಲಕ್ಕಿ ವಗ್ಗರಣೆ ಚೆನ್ನಾಗಿ ಮಾಡಿರಲಿಲ್ಲ. ಇದರಿಂದ ಸಿಟ್ಟಿಗೆದ್ದ ವಿದ್ಯಾರ್ಥಿಗಳು ಅಡುಗೆ ಸಿಬ್ಬಂದಿ ಹಾಗೂ ವಾರ್ಡನ್ ಜೊತೆ ವಾಗ್ವಾದಕ್ಕಿಳಿದರು. ನಂತರ ಅವಲಕ್ಕಿ ವಗ್ಗರಣೆ ಪಾತ್ರೆಯೊಂದಿಗೆ ಅನ್ನದಾನೇಶ್ವರ ನಗರದ ಪರಿಶಿಷ್ಟ ವರ್ಗ ಕಲ್ಯಾಣಾಧಿಕಾರಿಗಳ ಕಚೇರಿಗೆ ದೌಡಾಯಿಸಿದರು.
ಆ ವೇಳೆ ಅಧಿಕಾರಿ ವೀರಪ್ಪ ಛತ್ರದ ಅವರು ಬಂದಿರಲಿಲ್ಲ. ಆದರೆ ಪಿಎಸ್ಐ ತಿಮ್ಮಣ್ಣ ನಾಯಕ್ ಅವರು ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ, ಮನವೊಲಿಸಿ ಪುನಃ ವಸತಿ ನಿಲಯಕ್ಕೆ ತೆರಳಲು ಸೂಚಿಸಿದರು.
ನಂತರ ಪರಿಶಿಷ್ಟ ವರ್ಗ ಕಲ್ಯಾಣಾಧಿಕಾರಿ ವೀರಪ್ಪ ಛತ್ರದ ಸಮ್ಮುಖದಲ್ಲಿ ವಸತಿ ನಿಲಯದ ಅಡುಗೆದಾರರಿಗೆ, ವಾರ್ಡನ್ ಕಾರ್ಯವೈಖರಿ ಸರಿಪಡಿಸಿಕೊಂಡು, ರುಚಿಕಟ್ಟಾದ ಗುಣಮಟ್ಟದ ಅಡುಗೆ ತಯಾರಿಸುವಂತೆ ಸೂಚ್ಯವಾಗಿ ಹೇಳಿದರು. ಇಂತಹ ಪ್ರಕರಣ ಪುನರಾವರ್ತನೆ ಆಗದಂತೆ ಎಚ್ಚರಿಸಿದರು. ಅಡುಗೆದಾರರಿಂದ ಅವಲಕ್ಕಿ ವಗ್ಗರಣೆ ತಯಾರಿಸಿ ವಿದ್ಯಾರ್ಥಿಗಳೊಟ್ಟಿಗೆ ಉಪಹಾರ ಸೇವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ