ಅನ್ಯ ಜಿಲ್ಲೆಗಳ ಬೆಳೆಗಾರರಿಗೆ ಅನ್ಯಾಯ


Team Udayavani, Apr 10, 2021, 6:40 AM IST

ಅನ್ಯ ಜಿಲ್ಲೆಗಳ ಬೆಳೆಗಾರರಿಗೆ ಅನ್ಯಾಯ

ಏಷ್ಯಾದಲ್ಲೇ ಅತೀ ಹೆಚ್ಚು ವಹಿವಾಟು ನಡೆಯುವ ರೇಷ್ಮೆ ಗೂಡು ಮಾರುಕಟ್ಟೆ ಎಂಬ ಹೆಗ್ಗಳಿಕೆ ಇರುವ ರಾಮನಗರದ ರೇಷ್ಮೆಗೂಡು ಮಾರುಕಟ್ಟೆಯ ಕರ್ಮಕಾಂಡ ದಿನನಿತ್ಯ ತೆರೆದುಕೊಳ್ಳುತ್ತಲೇ ಇದೆ. ಅಮಾನತುಗೊಂಡಿರುವ ಮಾರುಕಟ್ಟೆ ಉಪನಿರ್ದೇಶಕ ಮುನ್ಷಿ ಬಸಯ್ಯ ಅವರ ಪ್ರಕರಣದ ಅನಂತರ ಮುಗ್ದ ರೇಷ್ಮೆ ಬೆಳೆಗಾರರ ಶೋಷಣೆ ಬೆಳಕಿಗೆ ಬರುತ್ತಿದೆ.
ವಿಶೇಷವಾಗಿ ಬೆಳಗಾವಿ, ರಾಯಚೂರು, ದಾವಣಗೆರೆ ಮುಂತಾದ ಉತ್ತರ ಕರ್ನಾಟಕ ಜಿಲ್ಲೆಗಳು, ದೂರದ ಜಿಲ್ಲೆಗಳ ರೇಷ್ಮೆ ಬೆಳೆಗಾರರಿಗೆ ಅನ್ಯಾಯವಾಗುತ್ತಿದೆ ಎಂಬ ಅಂಶ ಬಯಲಾಗಿದೆ. 1 ಕೋಟಿಗೂ ಅಧಿಕ ಮೊತ್ತದ ರೇಷ್ಮೆ ಗೂಡು ಹರಾಜು ಮೊತ್ತ ರೇಷ್ಮೆ ಬೆಳೆಗಾರರಿಗೆ ಮಾರುಕಟ್ಟೆ ಬಾಕಿ ಇದೆ.

ಮೊತ್ತ ತಲುಪುವ ವ್ಯವಸ್ಥೆ ಏನು?
ರೇಷ್ಮೆ ಗೂಡು ಹರಾಜು ಅನಂತರ ಖರೀದಿಸಿದ ರೀಲರ್‌ಗಳು ಹರಾಜು ಮೊತ್ತವನ್ನು ಉಪನಿರ್ದೇಶಕರ ಖಾತೆಗೆ ಜಮೆ ಮಾಡಬೇಕು. ಹೀಗೆ ಜಮೆಯಾದ ಹರಾಜು ಮೊತ್ತವನ್ನು ಮಾರುಕಟ್ಟೆಯ ಅಧಿಕಾರಿಗಳು ರೈತರ ಬ್ಯಾಂಕ್‌ ಖಾತೆಗೆ ಜಮೆ ಮಾಡಬೇಕು.

ಗೊತ್ತಾಗಿದ್ದು ಹೇಗೆ?
1 ಕೋಟಿಗೂ ಮೀರಿದ ಹರಾಜು ಮೊತ್ತ ಬೆಳೆಗಾರರಿಗೆ ತಲುಪಿಲ್ಲ ಎಂಬ ದೂರುಗಳು ಹೆಚ್ಚಾದವು. ಪೊಲೀಸ್‌ ಠಾಣೆಗೂ ಮೌಖೀಕ ದೂರು ಸಲ್ಲಿಕೆಯಾದವು. ಬೆನ್ನಲ್ಲೆ ಹಿರಿಯ ಅಧಿಕಾರಿಗಳು ಚುರುಕುಗೊಂಡರು. ಈ ಬೆಳವಣಿಗೆಯ ಅನಂತರ ಕಳೆದ ಮಾ.19ರಂದು ಉಪನಿರ್ದೇಶಕ ಮುನ್ಷಿ ಬಸಯ್ಯ ಏಕಾಏಕಿ ನಾಪತ್ತೆಯಾದರು. ಜತೆಗೆ ಇವರ ಕಚೇರಿಯಲ್ಲಿದ್ದ ಕಂಪ್ಯೂಟರ್‌ನಲ್ಲಿ ಎಲ್ಲ ವಹಿವಾಟು ದಾಖಲೆಗಳು ಮಾಯವಾಗಿದ್ದವು. ಬೆಳೆಗಾರರಿಗೆ ಸಲ್ಲಬೇಕಾದ ಒಟ್ಟು ಮೊತ್ತವೆಷ್ಟು ಎಂದು ಮೇಲ್ನೋಟಕ್ಕೆ ಮಾಹಿತಿ ಕಲೆ ಹಾಕಿದಾಗ ದೂರದ ಜಿಲ್ಲೆಗಳ ಬೆಳೆಗಾರರೇ ಹೆಚ್ಚು ಶೋಷಣೆಗೆ ಒಳಗಾಗಿರುವ ಅಂಶ ಬಯಲಾಗಿದೆ. ವಿಷಯವೆಂದರೆ 2 ಕೋಟಿ ರೂ.ನಷ್ಟು ಮೊತ್ತಕ್ಕೆ ಇನ್ನೂ ಲೆಕ್ಕವೇ ಸಿಕ್ಕಿಲ್ಲ. ಇದಕ್ಕೆ ಮುನ್ಶಿ ಬಸಯ್ಯನವರನ್ನೇ ಹೊಣೆ ಮಾಡಲಾಗಿದೆ.

ಬೆಳೆಗಾರರೇಕೆ ಟಾರ್ಗೆಟ್‌?
ಕಳೆದ ಮಾ. 14ರಂದು ಹರಪನಹಳ್ಳಿಯಿಂದ ಗೂಡು ತಂದ ಐವರು ಬೆಳೆಗಾರರಿಗೆ ಎ.8ನೇ ತಾರೀಕಿನಂದೂ ಹರಾಜು ಮೊತ್ತ ಅವರ ಬ್ಯಾಂಕ್‌ ಖಾತೆಗಳಿಗೆ ಜಮೆಯಾಗಿಲ್ಲ. ಜನವರಿಯ ಹಣವೂ ಜಮೆಯಾಗಿಲ್ಲ. ದೂರದ ಜಿಲ್ಲೆಗಳ ಬೆಳೆಗಾರರು ಬ್ಯಾಂಕ್‌ ಖಾತೆಗೆ ಹಣ ಜಮೆ ಆಗುತ್ತದೆ ಎಂದು ಅಧಿಕಾರಿಗಳನ್ನು ನಂಬಿ ತಮ್ಮ ಊರುಗಳಿಗೆ ವಾಪಸಾಗುತ್ತಾರೆ. ಇದೇ ಹಣಕ್ಕಾಗಿ ಅವರು ಮತ್ತೆ ಮತ್ತೆ ಬರಲಾರರು ಎಂಬ ಕಾರಣಕ್ಕಾಗಿ ಶೋಷಿಸಲಾಗುತ್ತಿದೆ ಎಂಬ ಆರೋಪವಿದೆ.

– ಬಿ.ವಿ. ಸೂರ್ಯ ಪ್ರಕಾಶ್

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.