ಅಯ್ಯೋ..!: ಬೀದಿ ನಾಯಿಗೆ ಪಾಂಪ್ಲೆಟ್ ಅಂಟಿಸಿ ಚುನಾವಣಾ ಪ್ರಚಾರ


Team Udayavani, Apr 10, 2021, 4:11 PM IST

್ಹಗ್ಹಹ್ಗ

ರಾಯ್ ಬರೇಲಿ (ಉತ್ತರ ಪ್ರದೇಶ) :  ಈಗಿನ ಚುನಾವಣಾ ಅಭ್ಯರ್ಥಿಗಳು ಮತದಾರರ ಗಮನ ಸೆಳೆಯಲು ವಿಭಿನ್ನ ಐಡಿಯಾಗಳನ್ನು ಬಳಸುತ್ತಿದ್ದಾರೆ. ಹಿಂದಿನ ಕಾಲದಂತೆ ಮನೆ ಮನೆಗೆ ಹೋಗಿ ಚುನಾವಣಾ ಪ್ರಚಾರ ಮಾಡುವ ವಿಧಾನ ದಿನಗಳೆದಂತೆ ಕಡಿಮೆಯಾಗುತ್ತಿದೆ. ಆನ್ ಲೈನ್ ಮಾಧ್ಯಮಗಳ ಮೂಲಕವೂ ಅಂದ್ರೆ ಸೋಷಿಯಲ್ ಮೀಡಿಯಾಗಳಲ್ಲಿ ಮತಯಾಚನೆ ಮಾಡುವುದು ಕೂಡ ಜೋರಾಗಿದೆ. ಆದ್ರೆ ಉತ್ತರ ಪ್ರದೇಶ ಸ್ಥಳೀಯ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳು ವಿಶೇಷ ರೀತಿಯಲ್ಲಿ ಚುನಾವಣಾ ಪ್ರಚಾರ ಮಾಡಿ ಗಮನ ಸೆಳೆದಿದ್ದಾರೆ.

ಹೌದು ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಬಲ್ಲಿಯಾ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರಕ್ಕೆ ಬೀದಿ ನಾಯಿಗಳನ್ನು ಬಳಕೆ ಮಾಡಿಕೊಂಡಿದ್ದಾರೆ. ನಾಯಿ ಬೆನ್ನಿಗೆ ಅಭ್ಯರ್ಥಿಯ ಪಾಂಪ್ಲೆಟ್ ಗಳನ್ನು ಅಂಟಿಸಿ ಪ್ರಚಾರ ಮಾಡಿ ಗಮನ ಸೆಳೆಯುತ್ತಿದ್ದಾರೆ. ನಾಯಿಯು ಎಲ್ಲೆಲ್ಲಿ ಓಡಾಡುತ್ತದೆಯೋ ಅಲ್ಲಲ್ಲಿ ಚುನಾವಣಾ ಪ್ರಚಾರ ಆಗಲಿದೆ ಎಂಬುದು ಆ ಅಭ್ಯರ್ಥಿಗಳ ಐಡಿಯಾ. ಸದ್ಯ ನಾಯಿಗೆ ಪಾಂಪ್ಲೆಟ್ ಅಂಟಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಈ ಬಗ್ಗೆ ಮಾತನಾಡಿರುವ ಚುನಾವಣಾ ಅಭ್ಯರ್ಥಿ, ಪ್ರಚಾರದಲ್ಲಿ ನಾಯಿಗಳನ್ನು ಬಳಕೆ ಮಾಡಿಕೊಳ್ಳಬಾರದು ಎಂದು ಯಾವ ರೂಲ್ಸ್ ಇಲ್ಲ. ನಾವೇನು ಬೀದಿ ನಾಯಿಗಳಿಗೆ ತೊಂದರೆ ಅಥವಾ ನೋವನ್ನು ನೀಡುತ್ತಿಲ್ಲ. ನಾವು ಪ್ರತಿ ನಿತ್ಯ ಅವುಗಳಿಗೆ ಆಹಾರವನ್ನು ಹಾಕ್ತೇವೆ. ಈ ಐಡಿಯಾದಿಂದ ಜನರ ಗಮನ ನಮ್ಮ ಕಡೆ ತಿರುಗುತ್ತದೆ ಎಂದಿದ್ದಾರೆ.

ಆದ್ರೆ ಪ್ರಾಣಿ ಪ್ರಿಯರು ಈ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದು, ಇದು ಶಿಕ್ಷಾರ್ಹ ಅಪರಾಧ ಎಂದಿದ್ದಾರೆ. ಪ್ರಾಣಿ ಪರ ಹೋರಾಟಗಾರ್ತಿ ರೀನಾ ಮಿಶ್ರಾ ಈ ಬಗ್ಗೆ ಬೇಸರ ವ್ಯಕ್ತ ಪಡಿಸಿದ್ದು, ಚುನಾವಣೆ ವೇಳೆ ಒಬ್ಬ ಮನುಷ್ಯ ತನ್ನ ಮುಖಕ್ಕೆ ಪ್ರಚಾರ ಪತ್ರಗಳನ್ನು ಅಂಟಿಸಿಕೊಂಡರೆ ಹೇಗಿರುತ್ತದೆ?. ನಾಯಿಗಳಿಗೆ ಪ್ರತಿಭಟಿಸಲು ಸಾಧ್ಯವಿಲ್ಲ. ಆದ್ದರಿಂದ ಪ್ರಚಾರ ಕಾರ್ಯಗಳಿಗೆ ನಾಯಿಗಳನ್ನು ಬಳಕೆ ಮಾಡಿಕೊಳ್ಳುವ ಹಕ್ಕು ಇಲ್ಲ. ಪೊಲೀಸರು ಈ ಕೂಡಲೇ ಸಂಬಂಧ ಪಟ್ಟ ಚುನಾವಣಾ ಅಭ್ಯರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಉತ್ತರ ಪ್ರದೇಶದ ಸ್ಥಳೀಯ ಚುನಾವಣೆಗಳು ನಾಲ್ಕು ಹಂತದಲ್ಲಿ ನಡೆಯಲಿದ್ದು ಮೊದಲ ಹಂತದ ಚುನಾವಣೆ ಏಪ್ರಿಲ್ 15 ರಿಂದ ಶುರುವಾಗಲಿದೆ. ಇನ್ನು ಕೊನೆಯ ಹಂತದ ಚುನಾವಣೆ 19, 26, 20ರಂದು ನಡೆಯಲಿದ್ದು, ಫಲಿತಾಂಶ ಮೇ 2 ರಂದು ಹೊರಬೀಳಲಿದೆ.

 

 

ಟಾಪ್ ನ್ಯೂಸ್

1-KKAAD

IPL Final; ಕೆಕೆಆರ್ ಬೌಲರ್ ಗಳ ಕೇಕೆ; ಹೈದರಾಬಾದ್ ಆಟ ಮುಗಿಸಿತು 113 ಕ್ಕೆ!!

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

18

Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ

1-rrwwqewqe

I miss you, Baba; ತಂದೆಯ 25 ನೇ ಪುಣ್ಯತಿಥಿ: ತೆಂಡೂಲ್ಕರ್ ಭಾವಪೂರ್ಣ ಬರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-KKAAD

IPL Final; ಕೆಕೆಆರ್ ಬೌಲರ್ ಗಳ ಕೇಕೆ; ಹೈದರಾಬಾದ್ ಆಟ ಮುಗಿಸಿತು 113 ಕ್ಕೆ!!

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

1-qwewqe

Yadgir; ಭಾರೀ ಬಿರುಗಾಳಿ ಸಹಿತ ಮಳೆ: ಭೀತರಾದ ಜನರು

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.