ದೆಹಲಿಯಲ್ಲಿ ಲಾಕ್ ಡೌನ್ ಜಾರಿಗೊಳಿಸಲ್ಲ, ಶೀಘ್ರವೇ ಕಠಿಣ ನಿರ್ಬಂಧ ಜಾರಿ: ಕೇಜ್ರಿವಾಲ್
ಒಂದು ವೇಳೆ ನಮ್ಮಲ್ಲಿ ಲಸಿಕೆ ಪ್ರಮಾಣ ಸಾಕಷ್ಟಿದ್ದರೆ, ವಯಸ್ಸಿನ ಮಿತಿಯನ್ನು ತೆಗೆದುಹಾಕಬೇಕು.
Team Udayavani, Apr 10, 2021, 5:47 PM IST
ನವದೆಹಲಿ: ಕೋವಿಡ್ ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ನಡುವೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಲಾಕ್ ಡೌನ್ ಜಾರಿಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ(ಏ.10) ತಿಳಿಸಿದ್ದಾರೆ.
ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಇನ್ನಷ್ಟು ಹೆಚ್ಚಿನ ನಿರ್ಬಂಧಗಳನ್ನು ಘೋಷಿಸಲಾಗುವುದು ಎಂದು ಹೇಳಿದರು. ಅಷ್ಟೇ ಅಲ್ಲ ಕೋವಿಡ್ ಲಸಿಕೆಯನ್ನು ನೀಡಲು ವಿಧಿಸಿರುವ ವಯೋ ಮಿತಿಯನ್ನು ತೆಗೆದುಹಾಕಬೇಕು. ಜತೆಗೆ ಹೆಚ್ಚಳವಾಗುತ್ತಿರುವ ಕೋವಿಡ್ ಸೋಂಕು ತಡೆಗೆ ಲಸಿಕೆ ನೀಡಿಕೆ ಅಭಿಯಾನವನ್ನು ಇನ್ನಷ್ಟು ಹೆಚ್ಚಳ ಮಾಡಬೇಕು ಎಂದು ಕೇಜ್ರಿವಾಲ್ ತಿಳಿಸಿದರು.
“ಒಂದು ವೇಳೆ ನಮ್ಮಲ್ಲಿ ಲಸಿಕೆ ಪ್ರಮಾಣ ಸಾಕಷ್ಟಿದ್ದರೆ, ವಯಸ್ಸಿನ ಮಿತಿಯನ್ನು ತೆಗೆದುಹಾಕಬೇಕು. ಆಗ ನಾವು 2-3 ತಿಂಗಳಿನಲ್ಲಿ ದೆಹಲಿಯಲ್ಲಿರುವ ಎಲ್ಲರಿಗೂ ಲಸಿಕೆ ನೀಡಲು ಸಾಧ್ಯವಾಗುತ್ತದೆ. ಸದ್ಯದ ಸ್ಥಿತಿಯಲ್ಲಿ ನಮ್ಮಲ್ಲಿ 7ರಿಂದ 10 ದಿನಗಳಿಗಾಗುವಷ್ಟು ಲಸಿಕೆ ಮಾತ್ರ ಇದೆ ಎಂದು ಕೇಜ್ರಿವಾಲ್ ಹೇಳಿದರು.
ಕೋವಿಡ್ ತಡೆಗಟ್ಟಲು ಶೀಘ್ರವೇ ಹೊಸ ನಿರ್ಬಂಧಗಳನ್ನು ಜಾರಿಗೊಳಿಸುತ್ತೇವೆ. ಆದರೆ ಲಾಕ್ ಡೌನ್ ಹೇರಿಕೆ ಇಲ್ಲ ಎಂದು ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಕೋವಿಡ್ ಸೋಂಕು ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿದ್ದು, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಮುಂದಿನ ಆದೇಶದವರೆಗೆ ಬಂದ್ ಮಾಡುವಂತೆ ದೆಹಲಿ ಸರ್ಕಾರ ಶುಕ್ರವಾರ ಆದೇಶ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್