ಕೋಲಾರ ಜಿಲ್ಲೆಯಲ್ಲಿ ಕೋವಿಡ್ ಸ್ಪೋಟ : ಇಂದು 118 ಪ್ರಕರಣಗಳು
Team Udayavani, Apr 10, 2021, 6:12 PM IST
ಕೋಲಾರ ; ಕಳೆದ ಹತ್ತು ದಿನಗಳಿಂದಲೂ ನಿತ್ಯವೂ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಲೇ ಇದ್ದು, ಶನಿವಾರ 118 ದಾಖಲೆ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಪತ್ತೆಯಾಗಿವೆ. ಕಳೆದ ಹತ್ತು ದಿನಗಳ ಹಿಂದೆ ಕೇವಲ ಒಂದಂಕಿಯ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿದ್ದು, ಹತ್ತು ದಿನಗಳಿಂದಲೂ ಸರಾಸರಿ 50 ಪ್ರಕರಣಗಳು ಪತ್ತೆಯಾಗುತ್ತಿದ್ದವು. ಶನಿವಾರ ದಿಢೀರ್ ಎಂದು 118 ಪ್ರಕರಣಗಳು ಪತ್ತೆಯಾಗುವ ಮೂಲಕ ಜಿಲ್ಲೆಯ ಜನರಿಗೆ ಆತಂಕ ಹೆಚ್ಚಿಸಿದೆ.
ಶನಿವಾರ ಒಂದೇ ದಿನ ಕೋಲಾರ ತಾಲೂಕಿನಲ್ಲಿ 53, ಮಾಲೂರಿನಲ್ಲಿ 15, ಬಂಗಾರಪೇಟೆಯಲ್ಲಿ 11, ಕೆಜಿಎಫ್-ನಲ್ಲಿ 17, ಮುಳಬಾಗಿಲಿನಲ್ಲಿ 6 ಮತ್ತು ಶ್ರೀನಿವಾಸಪುರದಲ್ಲಿ 16 ಪ್ರಕರಣಗಳು ದೃಢಪಟ್ಟಿವೆ. ಇದೇ ಅವದಿಯಲ್ಲಿ ಕೋಲಾರ ತಾಲೂಕಿನಿಂದ 24, ಮಾಲೂರಿನಿಂದ 0, ಬಂಗಾರಪೇಟೆಯಿಂದ 12, ಕೆಜಿಎಫ್ ನಿಂದ 7, ಮುಳಬಾಗಿಲಿನಿಂದ 6 ಮಂದಿ ಸೇರಿದಂತೆ ಒಟ್ಟು 49 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗದ್ದಾರೆ.
ಹತ್ತು ದಿನಗಳ ಹಿಂದೆ ಕೇವಲ ಒಂದಂಕಿ ಇದ್ದ ಸಕ್ರಿಯ ಪ್ರಕರಣಗಳು ಇದೀಗ ಹತ್ತೇ ದಿನಗಳಲ್ಲಿ 352 ಸಂಖ್ಯೆಯನ್ನು ತಲುಪಿದೆ. ಕೊರೊನಾ ಸೋಂಕಿನಿಂದ ಸಾವನ್ನಪ್ಪಿದರ ಸಂಖ್ಯೆ 186ಕ್ಕೇರುವಂತಾಗಿದೆ.
ಇನ್ನು ಶಂಕಿತ 2299 ಮಂದಿಯ ಗಂಟಲು, ಮೂಗಿನ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಕೋಲಾರ ಜಿಲ್ಲೆಯಲ್ಲಿ ಪ್ರಸ್ತುತ ಸೋಂಕಿತರ ಪ್ರಥಮ ಸಂಪರ್ಕಿತ 1825 ಮಂದಿ ಮತ್ತು ದ್ವಿತೀಯ ಸಂಪರ್ಕಿತ 872 ಮಂದಿ ಸೇರಿದಂತೆ ಒಟ್ಟು 2747 ಮಂದಿಯ ಮೇಲೆ ನಿಗಾ ಇಡಲಾಗಿದೆ. ಈವರೆವಿಗೂ 4.26 ಲಕ್ಷ ಮಂದಿಯನ್ನು ತಪಾಸಣೆಗೊಳಪಡಿಸಿದ್ದು, 4.15 ಲಕ್ಷ ಮಂದಿ ವರದಿ ನೆಗೆಟಿವ್ ಬಂದಿದೆ. ಉಳಿದಂತೆ ಪಾಸಿಟಿವ್ ಬಂದವರಿಗೆ ಚಿಕಿತ್ಸೆ ನೀಡಿ ಗುಣಪಡಿಸಲಾಗಿದೆ.
ಇದರಿಂದ ಮುಂದಿನ ದಿನಗಳು ಕೊರೊನಾ ಸೋಂಕಿತರ ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗುವ ಲಕ್ಷಣಗಳು ಕಂಡು ಬರುತ್ತಿವೆ. ಇಷ್ಟಾದರೂ, ಕೋಲಾರ ಜಿಲ್ಲೆಯಲ್ಲಿ ಸಭೆ ಸಮಾರಂಭಗಳು ಧಾರ್ಮಿಕ ಕಾರ್ಯಕ್ರಮಗಳು, ಕೂಟಗಳು ಕೋವಿಡ್ ಮಾರ್ಗಸೂಚಿಯನ್ನು ಲೆಕ್ಕಿಸದೆ ನಡೆಯುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ