ಮರಳಿ ಬಿಜೆಪಿ ಸೇರಿದ ಮಾಜಿ ಶಾಸಕ ಖಂಡ್ರೆ
Team Udayavani, Apr 11, 2021, 2:47 PM IST
ಬೀದರ್ : ಭಾಲ್ಕಿ ಮಾಜಿ ಶಾಸಕ ಪ್ರಕಾಶ ಖಂಡ್ರೆ ಅವರು ಜೆಡಿಎಸ್ ತೊರೆದು ಮತ್ತೆ ಬಜೆಪಿ ಸೇರಿದ್ದು, ಪರ-ವಿರೋಧದ ನಡುವೆ ಮರಳಿ ಗೂಡಿಗೆ ಬಂದಿರುವುದು ರಾಜಕೀಯವಾಗಿ ಬಹಳ ಮಹತ್ವ ಪಡೆದಿದೆ.
ಬಸವಕಲ್ಯಾಣದಲ್ಲಿ ರವಿವಾರ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಮ್ಮುಖ ಕಮಲ ಪಾಳಯಕ್ಕೆ ಸೇರ್ಪಡೆಯಾದರು. ಅವರಿಗೆ ಪಕ್ಷದ ಧ್ವಜವನ್ನು ನೀಡಿ ಬಿಜೆಪಿಗೆ ಬರಮಾಡಿಕೊಳ್ಳಲಾಯಿತು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ವಸತಿ ಸಚಿವ ವಿ. ಸೋಮಣ್ಣ ಸೇರಿದಂತೆ ಜಿಲ್ಲೆಯ ನಾಯಕರುಗಳು ಇದ್ದರು.
ಬೀದರ್ ಜಿಲ್ಲೆಯಲ್ಲಿ 1999 ರಿಂದ 2018ರವರೆಗೆ ಬಿಜೆಪಿಯಲ್ಲಿ ಸಕ್ರೀಯರಾಗಿದ್ದ ಖಂಡ್ರೆ ಅವರು, ಪಕ್ಷದಿಂದ ಭಾಲ್ಕಿ ಕ್ಷೇತ್ರದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಕಾರ್ಯದರ್ಶಿ ಸೇರಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು. 2008, 2013ರಲ್ಲಿ ಭಾಲ್ಕಿ ಮತ್ತು 2016ರಲ್ಲಿ ಬೀದರ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು.
2018ರಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಬೇಸತ್ತು ಜೆಡಿಎಸ್ ನಿಂದ ಸ್ಪರ್ಧಿಸಿ ಸೋಲುಂಡಿದ್ದರು. ಮೂರು ವರ್ಷಗಳ ಬಳಿಕ ಈಗ ಮತ್ತೆ ತಮ್ಮ ಬೆಂಬಲಿಗರೊಂದಿಗೆ ಕೇಸರಿ ಪಡೆ ಸೇರಿದ್ದಾರೆ.
ಮಾಜಿ ಶಾಸಕ ಖಂಡ್ರೆ ಮತ್ತೆ ಬಿಜೆಪಿ ಸೇರಿರುವುದು ಭಾಲ್ಕಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಮುಂಬರುವ 2023ರ ವಿಧಾನಸಭೆ ಚುನಾವಣೆಗೆ ಇಳಿಯಬಹುದಾ ? ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದ ಸಿಎಂ ಯಡಿಯೂರಪ್ಪ ಪರಮಾಪ್ತ ಡಿ.ಕೆ ಸಿದ್ರಾಮ ಅವರಿಗೆ ಟಿಕೆಟ್ ಕೈತಪ್ಪಲಿದೆಯಾ ಎಂಬ ಚರ್ಚೆ ಶುರುವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ