ಬೈಕ್ ಅಪಘಾತ: ಶ್ರೀಶೈಲಕ್ಕೆ ಹೋಗುತ್ತಿದ್ದ ಇಬ್ಬರು ಭಕ್ತರು ಸ್ಥಳದಲ್ಲೇ ಸಾವು
Team Udayavani, Apr 11, 2021, 2:59 PM IST
ಬನಹಟ್ಟಿ (ಬಾಗಲಕೋಟೆ): ಬನಹಟ್ಟಿಯಿಂದ ಶ್ರೀಶೈಲಕ್ಕೆ ಬೈಕ್ ಮೂಲಕ ಹೋಗುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ ತಡರಾತ್ರಿ ಲಿಂಗಸೂಗೂರು ತಾಲೂಕಿನ ಮುದಗಲ್ ಸಮೀಪದ ಆಂದ್ಯಾಳ ಗ್ರಾಮದ ಪ್ರಮುಖ ರಸ್ತೆಯಲ್ಲಿ ನಡೆದಿದೆ.
ಬನಹಟ್ಟಿ ಅಶೋಕ ಕಲೋನಿಯ ನಿವಾಸಿ ಚನಮಲ್ಲಯ್ಯ ಗುರುಪಾದಯ್ಯ ಹುಣಶ್ಯಾಳಮಠ (40)ಮೃತಪಟ್ಟ ಬೈಕ್ ಸವಾರ. ಬೈಕ್ ಹಿಂದೆ ಕುಳಿದ ಇನ್ನೋರ್ವ ವ್ಯಕ್ತಿ ಯಾರೆಂದು ತಿಳಿದು ಬಂದಿಲ್ಲ.
ಇದನ್ನೂ ಓದಿ:ವಜಾಗೊಂಡ ಸಾರಿಗೆ ನೌಕರರು ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಲಿ: ಸಚಿವ ಶಿವರಾಮ ಹೆಬ್ಬಾರ್
ಇವರು ಶನಿವಾರ ಮಧ್ಯಾಹ್ನ ಬೈಕ್ ನಲ್ಲಿ ಶ್ರೀಶೈಲಕ್ಕೆ ಹೊರಟಿದ್ದರು. ಆಂದ್ಯಾಳ ಗ್ರಾಮದ ಪ್ರಮುಖ ರಸ್ತೆಯಲ್ಲಿ ಲಾರಿ ಗಾಲಿಗೆ ಬೈಕ್ ಸಮೇತ ಸಿಲುಕಿ ಸ್ಥಳದಲ್ಲಿಯೇ ಇಬ್ಬರೂ ಸಾವನ್ನಪ್ಪಿದ್ದಾರೆ.
ಮೃತ ಚನಮಲ್ಲಯ್ಯ ನ ಶರ್ಟ್ ನ ಜೇಬಿನಲ್ಲಿ ಲೈಸನ್ಸ್ ಮತ್ತು ಗುರುತಿನ ಪತ್ರ ಹಾಗೂ ಮೋಬಾಯಿಲ ಮೂಲಕ ವಿಳಾಸ ಗೊತ್ತಾಗಿ ಮುದಗಲ್ ಪೊಲೀಸ್ ಠಾಣೆಯಿಂದ ಬನಹಟ್ಟಿಯ ಅವರ ಕುಟುಂಬಕ್ಕೆ ಮಾಹಿತಿ ತಿಳಿಸಿದ್ದಾರೆ.
ಮೃತ ಚನಮಲ್ಲಯ್ಯ ನೇಕಾರಿಕೆ ವೃತ್ತಿ ಮಾಡುತ್ತಿದ್ದ, ಪತ್ನಿ, ಓರ್ವ ಪುತ್ರ, ಪುತ್ರಿ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ