ಲಸಿಕೆ ವಿತರಣೆ: ರಾಜ್ಯದಲ್ಲೇ ಮೈಸೂರು ನಂ.2


Team Udayavani, Apr 11, 2021, 3:25 PM IST

ಲಸಿಕೆ ವಿತರಣೆ: ರಾಜ್ಯದಲ್ಲೇ ಮೈಸೂರು ನಂ.2

ಮೈಸೂರು: ಲಸಿಕೆ ನೀಡುವುದರಲ್ಲಿ ಮೈಸೂರು ಮುಂದೆಇದೆ. ಬೃಹತ್‌ ಬೆಂಗಳೂರಿನಲ್ಲಿ ಶುಕ್ರವಾರ ಸುಮಾರು 40 ಸಾವಿರ ಲಸಿಕೆ ಹಾಕಿದ್ದರೆ, ಮೈಸೂರಿನಲ್ಲಿ 30 ಸಾವಿರಮಂದಿಗೆ ಹಾಕಲಾಗಿದೆ. ಹೀಗಾಗಿ ರಾಜ್ಯದಲ್ಲೇ ಈ ನಿಟ್ಟಿನಲ್ಲಿ ಮೈಸೂರು 2ನೇ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಂತಸ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೋವಿಡ್ ಸೋಂಕಿನಿಂದಾಗಿ ಸಾವಿಗೀಡಾಗುವವರಲ್ಲಿ 45 ವರ್ಷ ಮೀರಿದವರೇ ಹೆಚ್ಚಾಗಿದ್ದಾರೆ. ಹೀಗಾಗಿಇದನ್ನು ತಪ್ಪಿಸಲು ಅರ್ಹರಿರುವ ಎಲ್ಲರೂ ಲಸಿಕೆಹಾಕಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಅಂತಹ 8.5 ಲಕ್ಷಮಂದಿಯಿದ್ದು, ಈಗಾಗಲೇ ಸುಮಾರು 3 ಲಕ್ಷ ಮಂದಿಗೆಲಸಿಕೆ ಹಾಕಲಾಗಿದೆ. ಆದರೂ ಬಹಳಷ್ಟು ಮಂದಿ ತಪ್ಪುತಿಳಿವಳಿಕೆಯಿಂದ ಮುಂದೆ ಬರುತ್ತಿಲ್ಲ. ಅಂತಹವರಮನವೊಲಿಕೆ ಪ್ರಯತ್ನ ನಡೆಯುತ್ತಿದೆ ಎಂದರು. ಲಸಿಕೆ ಹಾಕಿಸಿಕೊಂಡವರಿಗೆ ಸೋಂಕು ತಗುಲುವುದಿಲ್ಲ. ಲಸಿಕೆ ಪಡೆದರೂ ಸೋಂಕು ಹರಡುತ್ತಿದೆ ಎಂದೆಲ್ಲಾ ತಪ್ಪು ಮಾಹಿತಿಗಳು ಹರಿದಾಡುತ್ತಿದೆ. 2 ಬಾರಿಲಸಿಕೆ ಪಡೆದ 25 ದಿನಗಳ ನಂತರ ವ್ಯಕ್ತಿಯ ದೇಹದಲ್ಲಿರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಇದರಿಂದ ಸಾವುಹಾಗೂ ಗಂಭೀರ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವುದಿಲ್ಲ ಎಂದು ಹೇಳಿದರು.

ಇಡೀ ದೇಶದಲ್ಲಿಯೇ ವಿರಳ ಎಂಬಂತೆ ಜಿಲ್ಲೆಯಲ್ಲಿ 45 ವರ್ಷ ಮೀರಿದ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ. ಸರ್ಕಾರಿ ಆಸ್ಪತ್ರೆ ಹಾಗೂ ಲಸಿಕಾ ಕೇಂದ್ರಗಳಲ್ಲಿ ಉಚಿತ ಲಸಿಕೆ ನೀಡಿದರೂ ಬಹಳಷ್ಟು ಮಂದಿ ಖಾಸಗಿ ಆಸ್ಪತ್ರೆಗಳಿಗೆ ಹೋಗುತ್ತಿದ್ದರು. ಆದ್ದರಿಂದಾಗಿ ಜಿಲ್ಲಾಡಳಿತ ಅಂತಹವುಗಳಿಗೆ ತಾನೇಉಚಿತವಾಗಿ ಲಸಿಕೆ ನೀಡಿ, ಅಲ್ಲಿಯೂ ಉಚಿತವಾಗಿ ಲಸಿಕೆ ನೀಡುವ ಕಾರ್ಯ ನಡೆಸಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ಕಳೆದ ವರ್ಷದ ರೀತಿಯಲ್ಲಿಲ್ಲ. ಮೊದಲು ಮೂಲಸೌಕರ್ಯ ಕೊರತೆಯಿತ್ತು. ಲಸಿಕೆ ಇರಲಿಲ್ಲ, ಸಾಕಷ್ಟು ಪ್ರಮಾಣದಲ್ಲಿಪರೀಕ್ಷೆ ನಡೆಯುತ್ತಿರಲಿಲ್ಲ. ಪ್ರತಿ ಪರೀಕ್ಷಾ ವರದಿಗೂಬೆಂಗಳೂರನ್ನೇ ನಂಬಿಕೊಳ್ಳಬೇಕಾಗಿತ್ತು. ಆದರೆ ಈಗಪರಿಸ್ಥಿತಿ ಬದಲಾಗಿದೆ. ಹೀಗಾಗಿ ಪ್ರವಾಸಿ ಸ್ಥಳಮೊದಲಾದವನ್ನು ಬಂದ್‌ ಮಾಡಬೇಕಿಲ್ಲ. ಜತೆಗೆ, ಇಡೀ ಪ್ರದೇಶ ಕಂಟೈನ್ಮೆಂಟ್‌ ಎಂದು ಘೋಷಿಸುವ ಬದಲು ಸೀಮಿತಗೊಳಿಸಲಾಗಿದೆ ಎಂದು ವಿವರಿಸಿದರು.

ದಸರಾದಲ್ಲಿ ಆದಿವಾಸಿ ಮಹೋತ್ಸವ: ಮೈಸೂರೆಂದರೆಕೇವಲ ಅರಮನೆ, ಮೃಗಾಲಯ, ವಸ್ತು ಪ್ರದರ್ಶನವಲ್ಲ.ಪ್ರವಾಸಿಗರನ್ನು ಆಕರ್ಷಿಸಲು ಹತ್ತಾರು ಸ್ಥಳಗಳಿವೆ. ದಸರಾ ಮಹೋತ್ಸವ ವಿಶ್ವದ ಗಮನ ಸೆಳೆದಿದ್ದು, ಈ ಬಾರಿ ಕೋವಿಡ್ ಇಲ್ಲದಿದ್ದರೆ ಮತ್ತಷ್ಟು ಆಕರ್ಷಕವಾಗಿಸುವ ಯೋಜನೆ ಇದೆ. ದೆಹಲಿಯಲ್ಲಿ ನಡೆಯುವ ಆದಿವಾಸಿಗಳ ಉತ್ಸವದಂತೆ ದಸರಾದಲ್ಲೂಆದಿವಾಸಿ ಮಹೋತ್ಸವ ಮಾಡುವ ಚಿಂತನೆಯಿದೆ. ಕೋವಿಡ್ ಇಲ್ಲದೆ ಎಂದಿನಂತೆ ದಸರಾ ನಡೆದರೆ ಆ ಮಹೋತ್ಸವ ಹೊಸ ಕಾರ್ಯಕ್ರಮವಾಗಿಸೇರ್ಪಡೆಗೊಳ್ಳಲಿದೆ. ಇದರಿಂದಾಗಿ ಆದಿವಾಸಿಗಳ ಸಂಸ್ಕೃತಿ, ಸಂಪ್ರದಾಯ ತಿಳಿಯಲಿದೆ ಎಂದರು.

ಸಂವಾದದಲ್ಲಿ ಸಂಘದ ಅಧ್ಯಕ್ಷ ಎಸ್‌.ಟಿ.ರವಿಕುಮಾರ್‌, ಸುಬ್ರಹ್ಮಣ್ಯ, ಎಂ.ಎಸ್‌. ಬಸವಣ್ಣ, ರಂಗಸ್ವಾಮಿ ಹಾಜರಿದ್ದರು.

ನಿರಂಕುಶಾಧಿಕಾರದಿಂದ ಆದೇಶಿಸುತ್ತಿಲ್ಲ: ಸಿಂಧೂರಿ :

ಕೋವಿಡ್  ಮಾರ್ಗಸೂಚಿ ಹಿನ್ನೆಲೆಯಲ್ಲಿ ನಗರದ ಮಾರುಕಟ್ಟೆ ಕೇಂದ್ರಗಳನ್ನು ಮೂರು ಭಾಗಗಳಾಗಿ ವಿಭಜಿಸುವ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ, ಜಾತ್ರೆನಿರ್ಬಂಧ ವೇಳೆ ತಾವು ದೈವ ವಿರೋಧಿ ಎಂದುಹಲವರು ಟೀಕಿಸಿದರು. ನಂಜನಗೂಡು ಜಾತ್ರೆವೇಳೆಯೂ ಇದೇ ಆಯಿತು. ದೊಡ್ಡ ರಥ ಎಳೆಯಲುಸಾವಿರಾರು ಜನ ಬೇಕಾಗುತ್ತಾರೆ. ಹೀಗಾಗಿ ಚಿಕ್ಕರಥಎಳೆಯುವಂತೆ ಸೂಚಿಸಲಾಯಿತು. ಹೀಗಾಗಿ ತಾವುನಿರಂಕುಶಾಧಿಕಾರದಿಂದ ಈ ರೀತಿಯ ಆದೇಶಮಾಡುತ್ತಿಲ್ಲ. ಕೇವಲ ಜನರ ಹಿತಾಸಕ್ತಿಯಷ್ಟೇ ಅದರ ಹಿಂದಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದರು.

ಕೋವಿಡ್‌ ಲಸಿಕೆ ಜಾಗೃತಿಗೆ ಮೌಲ್ವಿಗಳ ಬಳಕೆ: ಡೀಸಿ :

ನಗರದ ಎನ್‌.ಆರ್‌. ಮೊಹಲ್ಲಾ ಮತ್ತು ಮಂಡಿ ಪ್ರದೇಶಗಳಲ್ಲಿ ಜನರು ಲಸಿಕೆ ಪಡೆಯಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ಮೌಲ್ವಿಗಳನ್ನೇ ಬಳಸಿ ಕೊಂಡು ಅವರಲ್ಲಿನ ಹಿಂಜರಿಕೆ ಹೋಗಲಾಡಿಸುವ ಯತ್ನ ನಡೆಸಲಾಗಿದೆ. ಲಸಿಕೆ ಹಾಕಿಸಿಕೊಂಡಲ್ಲಿಮುಂದೇನಾಗುತ್ತದೋ ಎಂಬ ಆತಂಕ ಅವಲ್ಲಿದೆ. ಕೆಲವರು ಲಸಿಕೆ ಹಾಕಿಸಿಕೊಂಡ ಬಳಿಕ ಮದ್ಯ, ಮಾಂಸಸೇವಿಸಬಾರದೆಂದು ಹೆದರಿದ್ದಾರೆ. ಹೀಗಾಗಿ ಲಸಿಕೆ ಹಾಕಿಸಿಕೊಂಡ ಮದ್ಯ ವ್ಯಸನಿಗಳಿಂದಲೇ ತಿಳಿಹೇಳಿಸುವ ಯತ್ನ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

ಕೇರಳ ಮಾದರಿ ಪಾರಂಪರಿಕ ಕಟ್ಟಡಗಳ ಬೈನಾಲೆ ಯೋಜನೆ :

ಮೈಸೂರು ಪ್ರಮುಖ ಪ್ರವಾಸಿ ತಾಣವಾಗಿರುವುದರಿಂದ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚು ನೀಡಲಾಗುತ್ತಿದೆ. ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಕೇರಳದ ಕೊಚ್ಚಿನ್‌ನಲ್ಲಿ ಶಿಪ್‌ಗ್ಳನ್ನೇ ಬಳಸಿಕೊಂಡು ಪ್ರವಾಸಿ ತಾಣವಾಗಿ ಮಾಡಿರುವಂತೆ ಮೈಸೂರಿನಲ್ಲೂ ಅದೇ ಮಾದರಿಯಲ್ಲಿ ಪಾರಂಪರಿಕ ಕಟ್ಟಡಗಳ ಬೈನಾಲೆ ಯೋಜನೆ ಜಾರಿಗೆ ಚಿಂತನೆ ನಡೆಸಲಾಗಿದೆ. ಪಾರಂಪರಿಕ ಕಟ್ಟಡಗಳ ಹಿನ್ನೆಲೆ ಸೇರಿದಂತೆ ಕಲೆ, ಸಂಸ್ಕೃತಿಯನ್ನು ಬಿಂಬಿಸುವ ಮೈಸೂರಿನಲ್ಲಿರುವ ಎಲ್ಲ ಪಾರಂಪರಿಕ ಕಟ್ಟಡಗಳ ಮಾಹಿತಿ ಒಂದೆಡೆ ಸಿಗುವಂತೆ ಮಾಡುವ ಉದ್ದೇಶದಿಂದ ಪಾರಂಪರಿಕ ಕಟ್ಟಡಗಳ ಬೈನಾಲೆ ಯೋಜನೆ ಸಿದ್ಧವಾಗುತ್ತಿದೆ. ಯೋಜನೆ ಪ್ರಗತಿಯಲ್ಲಿದ್ದು, ಸಲಹೆಗಳನ್ನು ಪಡೆದುಕೊಳ್ಳುತ್ತಿದ್ದೇವೆ. ಜತೆಗೆ ಚಾಮುಂಡಿಬೆಟ್ಟದ ತಪ್ಪಿಲಿನಲ್ಲಿ ಮೈಸೂರು ವಿವಿಗೆ ಸೇರಿದ 22 ಎಕರೆ ಜಾಗವಿದ್ದು, 3 ಎಕರೆಯಲ್ಲಿ ಪ್ಲಾನಿಟೇರಿಯಂ ನಿರ್ಮಾಣವಾಗಲಿದೆ. ಕೇಂದ್ರ ಚುನಾವಣಾ ಆಯೋಗ ಪ್ರಜಾಪ್ರಭುತ್ವ ಕಟ್ಟಡ ನಿರ್ಮಿಸಲು ಜಾಗ ಕೇಳಿದ್ದು, 2 ಎಕರೆ ಪ್ರದೇಶದಲ್ಲಿ ಕಟ್ಟಡ ನಿರ್ಮಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.