ಶೌರ್ಯಕ್ಕೆ ಹೆಸರೇ ಸಂಜಯ ಕುಮಾರ್‌


Team Udayavani, Apr 11, 2021, 8:12 PM IST

Indian-Army-4-696×392

ದೇಶಕ್ಕೆ ಉತ್ತಮ ಸೇಬು ಹಣ್ಣುಗಳನ್ನು ನೀಡುವುದು ಮಾತ್ರವಲ್ಲದೆ ವೀರ ಯೋಧರನ್ನು ದೇಶಕ್ಕೆ ಕೊಡುಗೆಯಾಗಿ ನೀಡುವ ಒಂದು ರಾಜ್ಯ ಹಿಮಾಚಲ ಪ್ರದೇಶ.  4 ಪರಮ ವೀರ ಚಕ್ರ ಪುರಸ್ಕೃತರು ಇಲ್ಲಿದ್ದಾರೆ. ಅವರಲ್ಲಿ ಸಂಜಯ್‌ ಕುಮಾರ್‌ ಕೂಡ ಒಬ್ಬರು.

ಆಪರೇಷನ್‌ ವಿಜಯ್‌ ಎಂಬ ಹೆಸರು ಕೇಳಿದರೆ ಭಾರತೀಯರ ಮೈ ರೋಮಾಂಚನಗೊಳ್ಳುತ್ತದೆ. 1999 ಮೇ ತಿಂಗಳಲ್ಲಿ ಕಾರ್ಗಿಲ್‌ ಯುದ್ಧ ಆರಂಭವಾಯಿತು. ಪಾಕಿಸ್ತಾನದ ಸೈನಿಕರು ಮತ್ತು ಉಗ್ರರು ಕಾರ್ಗಿಲ್‌ ಜಿಲ್ಲೆಯಲ್ಲಿ ಲೈನ್‌ ಆಫ್ ಕಂಟ್ರೋಲ್‌ (LOC) ಮೂಲಕ ನುಸುಳಿದ್ದು ಗೊತ್ತಾದ ತತ್‌ಕ್ಷಣ ಭಾರತೀಯ ಸೇನೆ ತನ್ನ ದಾಳಿಯನ್ನು ತೀವ್ರಗೊಳಿಸಿತು. ಪಾಕಿಸ್ಥಾನದ ಈ ನಡೆ ಭಾರತಕ್ಕೆ ಸಂಪೂರ್ಣವಾಗಿ ಆಶ್ಚರ್ಯವನ್ನುಂಟು ಮಾಡಿತು. ಯುದ್ಧದಲ್ಲಿ ಭಾರತ ವಿಜಯ ಸಾಧಿಸಲು ಕಾರಣ ಸಂಜಯ್‌ ಕುಮಾರ್‌ ಕೂಡ ಒಬ್ಬರು.  ಕಾರ್ಗಿಲ್‌ ಯುದ್ಧದಲ್ಲಿ ಅವರು ತೋರಿಸಿದ ಸಾಧನೆಗೆ   ಪರಮವೀರಚಕ್ರ ಪುರಸ್ಕಾರವನ್ನು ಮುಡಿಗೇರಿಸಿಕೊಂಡಿದ್ದಾರೆ.

1999 ಜುಲೈ 4 ಭಾರತೀಯ ಇತಿಹಾಸದಲ್ಲೇ ಮಹತ್ವದ ದಿನ. ಏಕೆಂದರೆ ಭಾರತೀಯ ಪಡೆಗಳು ಅಂದು ಪಾಯಿಂಟ್‌ 4,875 ಅನ್ನು ವಶಪಡಿಸಿಕೊಳ್ಳಲು ಹೊರಟಿದ್ದವು. ಕಾರ್ಗಿಲ್‌ ಯುದ್ಧ ಪ್ರಾರಂಭವಾದಾಗ ಅಂದರೆ 1999ರಲ್ಲಿ 13 ಜೆಕ್‌ ರೈಫ‌ಲ್ಸ್‌ ಬೆಟಾಲಿಯನ್‌ಗೆ ದರಾಜ್‌ ಬಳಿಯ ಗುಮರಿ ಬೇಸ್‌ ಕ್ಯಾಂಪ್‌ ರಕ್ಷಿಸುವ ಹೊಣೆ ಸಂಜಯ್‌ ಕುಮಾರ್‌ ಅವರಿಗೆ ನೀಡಲಾಗಿತ್ತು. 70 ಡಿಗ್ರಿಯನ್ನು ಹೋಲುವ ಬೆಟ್ಟವನ್ನು ಭಾರತೀಯ ಪಡೆಗಳು ಏರಬೇಕಿತ್ತು. ಕೊರೆಯುವ ಚಳಿ ಮತ್ತು ಇತರ ಹಲವು ಅಡೆತಡೆಗಳೊಂದಿಗೆ ಅದನ್ನು ಏರಬೇಕಿತ್ತು.  ಶತ್ರುಗಳೊಡನೆ ಮುಖಾಮುಖೀಯಾಗುವ ಅರಿವಿದ್ದರೂ ಸೇನಾಪಡೆಗಳು ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದ್ದವು. ಶತ್ರು ಸಂಖ್ಯೆಯ ಬಲದ ಅರಿವಿಲ್ಲದೇನೆ ಯುದ್ಧಕ್ಕೆ ನಮ್ಮ ಯೋಧರು ತಯಾರಾಗಿದ್ದರು.

ಆ ತಂಡದಲ್ಲಿದ್ದ ಸಂಜಯ್‌ ಕುಮಾರ್‌ ನಿದ್ರೆ ಮಾಡದೆ ಬರೋಬ್ಬರಿ 30 ಗಂಟೆಗಳಾಗಿತ್ತು. ಯುದ್ಧದಲ್ಲಿ ಎಡೆಬಿಡದೆ ಗುಂಡು ಹಾರಿಸುತ್ತಿದ್ದ ಸಂಜಯ್‌ ಕುಮಾರ್‌ ಎದೆಗೆ ಅದಾಗಲೇ ಐದು ಗುಂಡುಗಳು ಹೊಕ್ಕಿದ್ದವು. ಆದರೂ ಸಂಜಯ್‌ ಕುಮಾರ್‌ ಗುಂಡಿನ ದಾಳಿಯನ್ನು ನಿಲ್ಲಿಸಲಿಲ್ಲ. ನೋಡು ನೋಡುತ್ತಿದ್ದಂತೆ ಶತ್ರುಗಳ ಬಂಕರ್‌ ಸ್ಫೋಟಗೊಂಡು  ಅದರಲ್ಲಿದ್ದ ಪಾಕ್‌ ಸೈನಿಕರು ಹತರಾಗಿದ್ದರು. ಕೊನೆಗೆ ಅಧಿಕಾರಿಗಳಿಂದ ಶತ್ರು ಸೈನಿಕರು ಉಳಿದಿಲ್ಲ ಎಂದು ಮನವರಿಕೆ ಆಗುವವರೆಗೆ ಗುಂಡು ಹಾರಿಸುತ್ತಲೇ ಇದ್ದರು.

ಸಂಜಯ್‌ ಕುಮಾರ್‌ ಅವರು ಮುಷ್ಕಿ ಕಣಿವೆಯ 4,875 ಮೀಟರ್‌ ಎತ್ತರದ ಬೆಟ್ಟವನ್ನು ವಶಕ್ಕೆ ತೆಗೆದುಕೊಳ್ಳುವ, ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ಸ್ವಯಂ ಪ್ರೇರಿತರಾಗಿ ತೆಗೆದುಕೊಂಡಿದ್ದರು. ದಿಢೀರನೆ ಎದುರಾದ ದಾಳಿಯನ್ನು ಎದುರಿಸಿದ ಸಂಜಯ್, ತಮ್ಮ ರಕ್ಷಣೆಯನ್ನು ಲೆಕ್ಕಿಸದೆ ವೈರಿಗಳ ಮೇಲೆ ನೇರಾನೇರ ಯುದ್ಧಕ್ಕಿಳಿದರು. ಮೂವರು ಸೈನಿಕರನ್ನು ಹತ್ಯೆ ಮಾಡುವ ವೇಳೆ ತಾವು ಗಾಯಗೊಂಡರು. ಗಾಯ ಲೆಕ್ಕಿಸದೆ ಮುಂದುವರಿದು ಮತ್ತೂಂದು ಸುತ್ತು ದಾಳಿ ನಡೆಸಿದಾಗ ವೈರಿಪಡೆಯ ಸೈನಿಕನ ಮೆಷಿನ್‌ ಗನ್‌ ಕೈ ಜಾರಿ ಬಿದ್ದು,ಆತ ಓಡತೊಡಗಿದ. ಗನ್‌ ಕೈಗೆ  ತೆಗೆದುಕೊಂಡ ಸಂಜಯ್‌ ಕುಮಾರ್‌  ಸೈನಿಕನಿಗೆ ಗುಂಡುಹಾರಿಸಿದರು.

ಗಾಯಗೊಂಡಿದ್ದರೂ  ಕಣದಿಂದ ಹಿಂದೆ ಸರಿಯಲು ನಿರಾಕರಿಸಿದ ಅವರ ಶೌರ್ಯ ಇತರರನ್ನು ಹುರಿದುಂಬಿಸಿತು. ಅದಕ್ಕಾಗಿ ಭಾರತ ಸರಕಾರ ಅವರಿಗೆ ಭಾರತದ ಅತ್ಯುನ್ನತ ಪರಮವೀರಚಕ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿತು.

ರೈಫ‌ಲ್ಸ್‌  ಮ್ಯಾನ್‌ ಸಂಜಯ್‌ ಕುಮಾರ್‌ ಹಿಮಾಚಲ ಪ್ರದೇಶದ ಬಿಲಾಸ್ಪುರ್‌ ಜಿಲ್ಲೆಯ ಬೈಕಣ ಗ್ರಾಮದಲ್ಲಿ ಜನಿಸಿದರು. ಸಂಜಯ್‌ ಅವರ ಚಿಕ್ಕಪ್ಪ ಕೂಡ ಭಾರತೀಯ ಸೇನೆಯಲ್ಲಿದ್ದು, 1965 ಇಂಡೋ- ಚೀನಾ ಯುದ್ಧದಲ್ಲಿ ಭಾಗವಹಿಸಿದ್ದರು. 1996 ರಲ್ಲಿ ಎಸೆಸೆಲ್ಸಿ ಪರೀಕ್ಷೆ ಪಾಸಾದ ಸಂಜಯ್‌ ಕುಮಾರ್‌ ಮುಂದೆ ಸೈನ್ಯ ಸೇರಿದರು. ಸೈನ್ಯಕ್ಕೆ ಸೇರುವ ಮೊದಲು ಅವರು ನವದೆಹಲಿಯಲ್ಲಿ ಟ್ಯಾಕ್ಸಿ ಡ್ರೈವರ್‌  ಆಗಿ ಕೆಲಸ ಮಾಡುತ್ತಿದ್ದರು. ಆಗ ಅವರಿಗೆ ಕೇವಲ 23 ವರ್ಷ. ಸೈನ್ಯ   ಸೇರಿದ 13 ಜೆಕ್‌ ರೆಪೈಲ್ಸ…ನಲ್ಲಿ ಸಿಪಾಯಿಯಾಗಿ ನಿಯುಕ್ತಿಗೊಂಡರು.

ಪ್ರಸ್ತುತ ಅವರು ಡೆಹ್ರಾಡೂನ್‌ನ ಭಾರತೀಯ ಮಿಲಿಟರಿ ಅಕಾಡೆಮಿಯಲ್ಲಿ  ಶಸ್ತ್ರಾಸ್ತ್ರ ತರಬೇತಿ ಭೋದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.


ವಿದ್ಯಾಧರ ಶಾನು ಮಧುಕರ, ಶ್ರೀ ಮಾರಿಕಾಂಬಾ ಪ.ಪೂ. ಕಾಲೇಜು, ಶಿರಸಿ

ಟಾಪ್ ನ್ಯೂಸ್

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.