ಕೊರೊನಾ ನಿಯಮ ಉಲ್ಲಂಘಿಸುವವರ ಮೇಲೆ ನಿಗಾ


Team Udayavani, Apr 12, 2021, 2:30 AM IST

ಕೊರೊನಾ ನಿಯಮ ಉಲ್ಲಂಘಿಸುವವರ ಮೇಲೆ ನಿಗಾ

ಮಹಾನಗರ: ಕೊರೊನಾ ನಿಯ ಮಗಳ ಪಾಲನೆಯನ್ನು ಖಾತರಿ ಪಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಮಾರ್ಷಲ್‌ಗ‌ಳು ಫೀಲ್ಡಿಗಿಳಿದಿದ್ದಾರೆ.

ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾ ಗೃಹ ರಕ್ಷಕ ದಳದ 125 ಸಿಬಂದಿಯನ್ನು ಕೋವಿಡ್‌ ಮಾರ್ಷಲ್‌ಗ‌ಳ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದ್ದು, ಎ. 10ರಿಂದ ಅವರು ಕಾರ್ಯ ನಿರ್ವಹಣೆ ಮಾಡು ತ್ತಿದ್ದಾರೆ. ಮಂಗಳೂರು ನಗರದಲ್ಲಿ 60 ಮಂದಿ ಮಾರ್ಷಲ್‌ಗ‌ಳು ಬಸ್‌, ಬಸ್‌ ನಿಲ್ದಾಣ, ಮಾಲ್‌, ಮಾರ್ಕೆಟ್‌ ಇತ್ಯಾದಿ ಸಾರ್ವಜನಿಕ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ 60, ಉಳ್ಳಾಲ ಮತ್ತು ಪುತ್ತೂರು ಪುರಸಭೆ ವ್ಯಾಪ್ತಿಗಳಲ್ಲಿ ತಲಾ 10 ಮಂದಿ, ಬಂಟ್ವಾಳ, ಮೂಡುಬಿದಿರೆ, ಸೋಮೇಶ್ವರ ಪುರಸಭೆ ಮತ್ತು ಕೋಟೆಕಾರು, ಮೂಲ್ಕಿ, ವಿಟ್ಲ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ಪಟ್ಟಣ ಪಂಚಾಯತ್‌ ವ್ಯಾಪ್ತಿಗಳಲ್ಲಿ ತಲಾ 5ರಂತೆ ಒಟ್ಟು 45 ಮಂದಿ ಗೃಹ ರಕ್ಷಕರನ್ನು ಕೋವಿಡ್‌ ಮಾರ್ಷಲ್‌ಗ‌ಳನ್ನಾಗಿ ನಿಯೋಜನೆ ಮಾಡಲಾಗಿದೆ.

ಈ ಮಾರ್ಷಲ್‌ಗ‌ಳು ಕೊರೊನಾ ಮಾರ್ಗ ಸೂಚಿಗಳ ಕಟ್ಟುನಿಟ್ಟಿನ ಪಾಲನೆಯಲ್ಲಿ ಪೊಲೀಸರು ಮತ್ತು ಜಿಲ್ಲಾಡಳಿತಕ್ಕೆ ಸಹಕಾರ ನೀಡುತ್ತಿದ್ದಾರೆ.

ಕೊರೊನಾ ವೈರಸ್‌ ಸೋಂಕು ಪ್ರಸರಣ ತಡೆಯಲು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ವತ್ಛತೆಯ ಪಾಲನೆ ಯನ್ನು ಸಾರ್ವಜನಿಕರು ಅನುಸರಿಸುವಂತೆ ನೋಡಿಕೊಳ್ಳುವುದು, ಅನಾವಶ್ಯಕ ಸಂಚಾರವನ್ನು ನಿಯಂತ್ರಿಸುವುದು- ಇದು ಈ ಮಾರ್ಷಲ್‌ಗ‌ಳ ಕರ್ತವ್ಯ.

ದಂಡ ವಿಧಿಸುವ ಅಧಿಕಾರವಿಲ್ಲ
ಕೋವಿಡ್‌ ಮಾರ್ಷಲ್‌ಗ‌ಳಿಗೆ ದಂಡ ವಿಧಿಸುವ ಅಧಿಕಾರವಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ನಿಯಮ ಪಾಲನೆಯನ್ನು ಖಾತರಿ ಪಡಿಸಲು ತೆರಳುವ ಆರೋಗ್ಯ ಕಾರ್ಯಕರ್ತರು ಅಥವಾ ಬಿಲ್‌ ಕಲೆಕ್ಟರ್‌ಗಳ ಜತೆ ತೆರಳಿ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದ್ದಾರೆ. ನಿಯಮ ಉಲ್ಲಂಘನೆಗೆ ಸಂಬಂಧಿಸಿ ಫೋಟೋ, ವೀಡಿಯೋ ಮಾಡುವುದು, ಅಗತ್ಯ ಬಿದ್ದರೆ ರಕ್ಷಣೆ ಒದಗಿಸುವುದು ಇತ್ಯಾದಿ ಕರ್ತವ್ಯಗಳನ್ನು ಅವರು ನಿರ್ವಹಿಸುತ್ತಾರೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್‌ ಶ್ರೀಧರ್‌ ಉದಯವಾಣಿಗೆ ತಿಳಿಸಿದ್ದಾರೆ.

ಜಾಗೃತಿ ಕಾರ್ಯ
ಕೊರೊನಾ ಸಾಂಕ್ರಾಮಿಕ ರೋಗದ 2ನೇ ಅಲೆ ಪ್ರಸರಣ ಆಗುವುದನ್ನು ತಡೆಗಟ್ಟಲು ಜಿಲ್ಲಾಡಳಿತ ಕಠಿನ ಕ್ರಮಗಳನ್ನು ಅನುಸರಿಸುತ್ತಿದ್ದು, ಜನರು ನಿಯಮಗಳ ಪಾಲನೆ ಮಾಡುವುದನ್ನು ಖಾತರಿ ಪಡಿಸಲು ಜಿಲ್ಲಾಡಳಿತವು ಗೃಹ ರಕ್ಷಕರನ್ನು ಕೋವಿಡ್‌ ಮಾರ್ಷಲ್‌ಗ‌ಳನ್ನು ನಿಯೋಜಿಸಿದೆ. ಜನ ಸಂದಣಿ ಇರುವ ಸಾರ್ವಜನಿಕ ಸ್ಥಳಗಳಾದ ಬಸ್‌ ನಿಲ್ದಾಣ, ಬಸ್‌ಗಳು, ರೈಲು ನಿಲ್ದಾಣ, ಮಾಲ್‌ಗ‌ಳು, ಕಲ್ಯಾಣ ಮಂಟಪ ಮತ್ತಿತರ ಸಭಾಂಗಣಗಳಿಗೆ ಆರೋಗ್ಯ ಕಾರ್ಯಕರ್ತರ ಜತೆ ಈ ಮಾರ್ಷಲ್‌ಗ‌ಳು ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ. ನಿಯಮ ಪಾಲಿಸುವಂತೆ ಮನ ಒಲಿಸುವ ಕೆಲಸ ಮಾಡುತ್ತಿದ್ದಾರೆ. -ಡಾ| ಮುರಲಿ ಮೋಹನ್‌ ಚೂಂತಾರು, ಗೃಹ ರಕ್ಷಕ ದಳದ ಜಿಲ್ಲಾ ಕಮಾಂಡೆಂಟ್

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.