ಕೊರೊನಾ ನಿಯಮ ಉಲ್ಲಂಘಿಸುವವರ ಮೇಲೆ ನಿಗಾ
Team Udayavani, Apr 12, 2021, 2:30 AM IST
ಮಹಾನಗರ: ಕೊರೊನಾ ನಿಯ ಮಗಳ ಪಾಲನೆಯನ್ನು ಖಾತರಿ ಪಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಮಾರ್ಷಲ್ಗಳು ಫೀಲ್ಡಿಗಿಳಿದಿದ್ದಾರೆ.
ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾ ಗೃಹ ರಕ್ಷಕ ದಳದ 125 ಸಿಬಂದಿಯನ್ನು ಕೋವಿಡ್ ಮಾರ್ಷಲ್ಗಳ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದ್ದು, ಎ. 10ರಿಂದ ಅವರು ಕಾರ್ಯ ನಿರ್ವಹಣೆ ಮಾಡು ತ್ತಿದ್ದಾರೆ. ಮಂಗಳೂರು ನಗರದಲ್ಲಿ 60 ಮಂದಿ ಮಾರ್ಷಲ್ಗಳು ಬಸ್, ಬಸ್ ನಿಲ್ದಾಣ, ಮಾಲ್, ಮಾರ್ಕೆಟ್ ಇತ್ಯಾದಿ ಸಾರ್ವಜನಿಕ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ 60, ಉಳ್ಳಾಲ ಮತ್ತು ಪುತ್ತೂರು ಪುರಸಭೆ ವ್ಯಾಪ್ತಿಗಳಲ್ಲಿ ತಲಾ 10 ಮಂದಿ, ಬಂಟ್ವಾಳ, ಮೂಡುಬಿದಿರೆ, ಸೋಮೇಶ್ವರ ಪುರಸಭೆ ಮತ್ತು ಕೋಟೆಕಾರು, ಮೂಲ್ಕಿ, ವಿಟ್ಲ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಗಳಲ್ಲಿ ತಲಾ 5ರಂತೆ ಒಟ್ಟು 45 ಮಂದಿ ಗೃಹ ರಕ್ಷಕರನ್ನು ಕೋವಿಡ್ ಮಾರ್ಷಲ್ಗಳನ್ನಾಗಿ ನಿಯೋಜನೆ ಮಾಡಲಾಗಿದೆ.
ಈ ಮಾರ್ಷಲ್ಗಳು ಕೊರೊನಾ ಮಾರ್ಗ ಸೂಚಿಗಳ ಕಟ್ಟುನಿಟ್ಟಿನ ಪಾಲನೆಯಲ್ಲಿ ಪೊಲೀಸರು ಮತ್ತು ಜಿಲ್ಲಾಡಳಿತಕ್ಕೆ ಸಹಕಾರ ನೀಡುತ್ತಿದ್ದಾರೆ.
ಕೊರೊನಾ ವೈರಸ್ ಸೋಂಕು ಪ್ರಸರಣ ತಡೆಯಲು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ವತ್ಛತೆಯ ಪಾಲನೆ ಯನ್ನು ಸಾರ್ವಜನಿಕರು ಅನುಸರಿಸುವಂತೆ ನೋಡಿಕೊಳ್ಳುವುದು, ಅನಾವಶ್ಯಕ ಸಂಚಾರವನ್ನು ನಿಯಂತ್ರಿಸುವುದು- ಇದು ಈ ಮಾರ್ಷಲ್ಗಳ ಕರ್ತವ್ಯ.
ದಂಡ ವಿಧಿಸುವ ಅಧಿಕಾರವಿಲ್ಲ
ಕೋವಿಡ್ ಮಾರ್ಷಲ್ಗಳಿಗೆ ದಂಡ ವಿಧಿಸುವ ಅಧಿಕಾರವಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ನಿಯಮ ಪಾಲನೆಯನ್ನು ಖಾತರಿ ಪಡಿಸಲು ತೆರಳುವ ಆರೋಗ್ಯ ಕಾರ್ಯಕರ್ತರು ಅಥವಾ ಬಿಲ್ ಕಲೆಕ್ಟರ್ಗಳ ಜತೆ ತೆರಳಿ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದ್ದಾರೆ. ನಿಯಮ ಉಲ್ಲಂಘನೆಗೆ ಸಂಬಂಧಿಸಿ ಫೋಟೋ, ವೀಡಿಯೋ ಮಾಡುವುದು, ಅಗತ್ಯ ಬಿದ್ದರೆ ರಕ್ಷಣೆ ಒದಗಿಸುವುದು ಇತ್ಯಾದಿ ಕರ್ತವ್ಯಗಳನ್ನು ಅವರು ನಿರ್ವಹಿಸುತ್ತಾರೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಉದಯವಾಣಿಗೆ ತಿಳಿಸಿದ್ದಾರೆ.
ಜಾಗೃತಿ ಕಾರ್ಯ
ಕೊರೊನಾ ಸಾಂಕ್ರಾಮಿಕ ರೋಗದ 2ನೇ ಅಲೆ ಪ್ರಸರಣ ಆಗುವುದನ್ನು ತಡೆಗಟ್ಟಲು ಜಿಲ್ಲಾಡಳಿತ ಕಠಿನ ಕ್ರಮಗಳನ್ನು ಅನುಸರಿಸುತ್ತಿದ್ದು, ಜನರು ನಿಯಮಗಳ ಪಾಲನೆ ಮಾಡುವುದನ್ನು ಖಾತರಿ ಪಡಿಸಲು ಜಿಲ್ಲಾಡಳಿತವು ಗೃಹ ರಕ್ಷಕರನ್ನು ಕೋವಿಡ್ ಮಾರ್ಷಲ್ಗಳನ್ನು ನಿಯೋಜಿಸಿದೆ. ಜನ ಸಂದಣಿ ಇರುವ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ಬಸ್ಗಳು, ರೈಲು ನಿಲ್ದಾಣ, ಮಾಲ್ಗಳು, ಕಲ್ಯಾಣ ಮಂಟಪ ಮತ್ತಿತರ ಸಭಾಂಗಣಗಳಿಗೆ ಆರೋಗ್ಯ ಕಾರ್ಯಕರ್ತರ ಜತೆ ಈ ಮಾರ್ಷಲ್ಗಳು ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ. ನಿಯಮ ಪಾಲಿಸುವಂತೆ ಮನ ಒಲಿಸುವ ಕೆಲಸ ಮಾಡುತ್ತಿದ್ದಾರೆ. -ಡಾ| ಮುರಲಿ ಮೋಹನ್ ಚೂಂತಾರು, ಗೃಹ ರಕ್ಷಕ ದಳದ ಜಿಲ್ಲಾ ಕಮಾಂಡೆಂಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್