‘ಕಿರುಕುಳ ನೀಡುವವರಿಗೆ ರಕ್ಷಣೆ ಬೇಡ’ ಗೂಗಲ್ ಸಿಇಒ ಗೆ 500 ಮಂದಿ ನೌಕರರ ಬಹಿರಂಗ ಪತ್ರ


Team Udayavani, Apr 12, 2021, 10:51 AM IST

stop-protecting-harassers-demand-500-google-employees-in-open-letter-to-sundar-pichai

ನವ ದೆಹಲಿ : ಟೆಕ್ ದೈತ್ಯ ಕಂಪೆನಿ ಗೂಗಲ್ ಹಾಗೂ ಅಲ್ಫಾಬೆಟ್ ನ ಸಿಇಒ ಆಗಿರುವ ಸುಂದರ್ ಪಿಚೈ ಅವರಿಗೆ ಕಂಪೆನಿಯ ಸುಮಾರು 500 ಮಂದಿ ನೌಕರರು ತಮ್ಮ ಕಚೇರಿಯಲ್ಲಿ ಆಗುತ್ತಿರುವ ಲೈಂಗಿಕ ಕಿರುಕುಳದ ವಿರುದ್ಧವಾಗಿ ಸಹಿ ಹಾಕಿ  ಪತ್ರದ ಮೂಲಕ ದೂರು ನೀಡಿದ್ದಾರೆ ಎನ್ನುವ ವಿಚಾರ ಈಗ ದೊಡ್ಡ ಸುದ್ದಿಯಾಗಿದ್ದು, ಗೂಗಲ್ ಸಂಸ್ಥೆ ತಲೆ ಕೆಳಗೆ ಮಾಡುವಂತೆ ಮಾಡಿದೆ.

ಗೂಗಲ್ ನ ಕಚೇರಿಯಲ್ಲಿ ಪ್ರತಿಕೂಲ ವಾತಾವರಣವನ್ನು ಸೃಷ್ಟಿಸುವಂತೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಗೂಗಲ್  ಸಂಸ್ಥೆಯಲ್ಲಿ ಈ ಮೊದಲು ಇಂಜಿನೀರ್ ಆಗಿ ಕಾರ್ಯನಿರ್ವಹಿಸಿದ್ದ  ಏಮಿ ನೆಟ್ ಫೀಲ್ಡ್  ‘ದಿ ನ್ಯೂಯಾರ್ಕ್ ಟೈಮ್ಸ್’  ಗೆ ಬರೆದ ತನ್ನ ಓಪಿನಿಯನ್ ಪೀಸ್ ನಲ್ಲಿ ‘ತನಗೆ ಆ ವ್ಯಕ್ತಿಯ ಜೊತೆಗೆ ಒಂದಾದ ಮೇಲೊಂದರಂತೆ ಮೀಟಿಂಗ್ ನಡೆಸಲು ಕಂಪೆನಿಯಿಂದ ಒತ್ತಾಯಿಸಲಾಗುತ್ತಿತ್ತು ಮತ್ತು ಆ ವ್ಯಕ್ತಿ ತನಗೆ ಕಿರುಕುಳ ನೀಡುತ್ತಿದ್ದ’ ಎಂದು ಉಲ್ಲೇಖಿಸಿದ್ದಾರೆ.

ಓದಿ : ಮುಂಬಯಿ : ಆಸ್ಪತ್ರೆಗಳಲ್ಲಿ ಕೋವಿಡ್ ಪೀಡಿತರು: ಆಮ್ಲಜನಕ ಸಿಲಿಂಡರ್‌ಗಳ ಕೊರತೆ

ಇನ್ನು, ತಮಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಗೆ ಯಾವುದೇ ರೀತಿಯ ಕ್ರಮವನ್ನು ಸಂಸ್ಥೆ ತೆಗೆದುಕೊಂಡಿಲ್ಲ.

ಆದರೆ, ಕಂಪನಿಯ ಹೆಚ್ ಆರ್, ಆತನ ಹುದ್ದೆಯನ್ನು ಬದಲಾಯಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ತಮ್ಮ ಮ್ಯಾನೇಜರ್ ಮೂಲಕ ತಮಗೆ ತಲುಪಿಸಲಾಗಿದ್ದು, ರಜೆಯ ಮೇಲೆ ಹೋಗಿ ಇಲ್ಲವಾದರೇ, ಮನೆಯಿಂದ ಕಾರ್ಯನಿರ್ವಹಿಸಿ ಎಂದು ತಮಗೆ ಸೂಚಿಸಿದ್ದರು ಎಂದು ಏಮಿ ತಮ್ಮ ಓಪಿನಿಯನ್ ಪೀಸ್ ನಲ್ಲಿ ಹೇಳಿಕೊಂಡಿರುವುದು ವರದಿಯಾಗಿದೆ.

ಇಂತಹ ಕಿರುಕುಳದ ಆರೋಪಗಳು ಈ ಹಿಂದೆ ಕೂಡ ಗೂಗಲ್‌ ಸಂಸ್ಥೆಯನ್ನು ಬೆಂಬಿಡದೆ ಕಾಡಿತ್ತು. ಕಚೇರಿಯಲ್ಲಿ ಆಗುತ್ತಿರುವ ಲೈಂಗಿಕ ಕಿರುಕುಳವನ್ನು ವಿರೋಧಿಸಿ ಸುಮಾರು 20,000 ಗೂಗಲ್ ಸಂಸ್ಥೆಯ ಉದ್ಯೋಗಿಗಳು ಪ್ರತಿಭಟಿಸಿದ್ದರು ಹಾಗೂ ಹೊರ ಬಂದಿದ್ದರು ಎಂಬ ಆಶ್ಚರ್ಯಕರವಾದ ಸುದ್ದಿಯೊಂದನ್ನು ವರದಿ ಮಾಡಿದೆ ಅಂತರಾಷ್ಟ್ರೀಯ ಸುದ್ದಿ ಸಂಸ್ಥೆ ದಿ ವರ್ಜ್.

ಕಿರುಕುಳ ನೀಡಲಾಗಿರುವ ಕುರಿತು ದೂರು ನೀಡಿದ ವ್ಯಕ್ತಿಗೆ ಒತ್ತಡ ಸಹಿಸಲು ಬಲವಂತಪಡಿಸಲಾಗಿದೆ. ಬಳಿಕ ಕಿರುಕುಳಕ್ಕೆ ಒಳಗಾದ ವ್ಯಕ್ತಿ ಕಛೇರಿಯನ್ನೇ ತೊರೆಯುವಂತಾಗುತ್ತದೆ ಹಾಗೂ ಕಿರುಕುಳ ನೀಡಿದ ವ್ಯಕ್ತಿ ಮಾತ್ರ ಅಲ್ಲಿ ಯಾವುದೇ ಚಿಂತೆಯಿಲ್ಲದೆ ಕಾರ್ಯ ನಿರ್ವಹಿಸುತ್ತಾನೆ  ಮತ್ತು ಆತ ಮಾಡಿದ ಕಿರುಕುಳಕ್ಕೆ ಸಂಸ್ಥೆ ಆತನಿಗೆ ಗೌರವಿಸುತ್ತದೆ. ಎಫ್ಲೇವೇಟ್ ನೌಕರರು ಕಿರುಕುಳ ಮುಕ್ತ ವಾತಾವರಣದಲ್ಲಿ ಕಾರ್ಯನಿರ್ವಹಿಸಲು ಬಯಸುತ್ತಾರೆ . ಕಿರುಕುಳಕ್ಕೆ ಒಳಗಾದವರ ಚಿಂತೆಗೆ ಆದ್ಯತೆ ನೀಡಿ, ಕಂಪನಿ ತನ್ನ ನೌಕರರಿಗೆ ಸಂರಕ್ಷಣೆ ಒದಗಿಸುವತ್ತ ಗಮನಹರಿಸಬೇಕು  ಎಂದು ಗಂಭೀರ ಆರೋಪಗಳನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ಕಂಪನಿಯು ಈ ಹಿಂದಿನಿಂದಲೂ ಲೈಂಗಿಕ ಕಿರುಕುಳ ಆರೋಪಗಳನ್ನು ಕೇಳುತ್ತಲೆ ಬಂದಿದೆ. ಅದಕ್ಕೆ ಸೂಕ್ತ ಕ್ರಮಗಳನ್ನು ತೆಗೆದುಕೊಂಡಿದೆ. ನೌಕರರ ಬಗ್ಗೆ ಎಂದಿಗೂ ಗೂಗಲ್ ಸಂಸ್ಥೆ ಕಾಳಜಿಯನ್ನು ವಹಿಸುತ್ತದೆ.  ಎಂದು , ದಿ ವರ್ಜ್ ಜೊತೆ ಮಾತನಾಡಿದ, ಗೂಗಲ್ ಸಂಸ್ಥೆಯ ವಕ್ತಾರರೊಬ್ಬರು ಹೇಳಿದ್ದಾರೆ.

ಆದರೇ, ಇದುವರೆಗೆ ಸಂಸ್ಥೆಯಿಂದ ಈ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡಿರುವುದು ಅಧಿಕೃತವಾಗಿ ತಿಳಿದುಬಂದಿಲ್ಲ ಎಂಬ ವರದಿಯಾಗಿದೆ.

ಓದಿ : ಡಿಪೋದಿಂದ ಹೊರಬಂದ ಬಸ್ ತಡೆದು ಪ್ರತಿಭಟಿಸಿದ ಮಹಿಳೆಯರು, ಮಕ್ಕಳು

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.