ಕುಂದಾಣ ರಾಜಸ್ವ ನಿರೀಕ್ಷಕರ ಅಮಾನತಿಗೆ ಆಗ್ರಹ


Team Udayavani, Apr 12, 2021, 11:47 AM IST

ಕುಂದಾಣ ರಾಜಸ್ವ ನಿರೀಕ್ಷಕರ ಅಮಾನತಿಗೆ ಆಗ್ರಹ

ದೇವನಹಳ್ಳಿ: ತಾಲೂಕಿನ ಕುಂದಾಣ ಹೋಬಳಿಯ ತೈಲಗೆರೆ ಗ್ರಾಮದ ಸರ್ವೆ ನಂ. 110ರಲ್ಲಿ 80 ಎಕರೆ 20 ಗುಂಟೆ ಜಾಗವನ್ನು 20 ಜನರ ಹೆಸರಿಗೆ ಅಕ್ರಮವಾಗಿ ನಮೂದು ಮಾಡಿರುವ ಆರೋಪದ ಮೇಲೆ ರಾಜಸ್ವ ನಿರೀಕ್ಷಕ ಟಿ.ಎನ್‌.ಮಂಜುನಾಥ್‌ ಅವರನ್ನು ಅಮಾನತು ಮಾಡಬೇಕು ಎಂದು ಆರ್‌ ಟಿಐ ಕಾರ್ಯಕರ್ತರಾದ ಬೀರಸಂದ್ರ ರವಿ, ಕೊಯಿರಾ ಚಿಕ್ಕೇಗೌಡ ಆಗ್ರಹಿಸಿದ್ದಾರೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಾಖಲೆ ಪ್ರದರ್ಶಿಸಿ ಮಾತನಾಡಿದ ಅವರು, ಕುಂದಾಣನಾಡಕಚೇರಿಯಲ್ಲಿ ಅಭಿಲೇಖಾಲಯದ ವಿಷಯ ನಿರ್ವಾಹಕಿ ಲಾವಣ್ಯಾರಿಂದ ಬಲವಂತವಾಗಿಬೀರುವಿನ ಬೀಗದ ಕೀ ತೆಗೆದುಕೊಂಡು ಯಾರಗಮನಕ್ಕೂ ತಾರದೆ ಕಾರಹಳ್ಳಿ, ಮೂಡಿಗಾನಹಳ್ಳಿ, ತೈಲಗೆರೆ ಮತ್ತು ಮೀಸಗಾನಹಳ್ಳಿ ಗ್ರಾಮದ 1993-94ರ ಕೈಬರಹದ ಪಹಣಿ ಪುಸ್ತಕ ತೆಗೆದುಕೊಂಡು ಹೋಗಿದ್ದಾರೆ ಎಂದು ದೂರಿದ್ದಾರೆ.

ಇಲ್ಲ ಎಂದು ಸಮಜಾಯಿಸಿ: ಈ ಬಗ್ಗೆ ಕಚೇರಿಯಲ್ಲಿ ಅಟಲ್‌ ಜನಸ್ನೇಹಿ ಕೇಂದ್ರದ ಕಂಪ್ಯೂಟರ್‌ಆಪರೇಟರ್‌ ವಿಜಯಕುಮಾರ್‌ ಅವರನ್ನುವಿಚಾರಿಸಿದಾಗ ಅಲ್ಮೇರಾದಲ್ಲಿದ್ದಂತಹ ಕೈಬರಹದ ಪಹಣಿಗಳನ್ನು ರಾಜಸ್ವ ನಿರೀಕ್ಷಕರು ತೆಗೆದುಕೊಂಡು ಹೋಗಿದ್ದಾರೆಂದು ಮಾಹಿತಿ ನೀಡಿದ್ದಾರೆ. ಮತ್ತೆರಾಜ್ಯಸ್ವ ನಿರೀಕ್ಷಕರನ್ನು ಕೇಳಿದ್ರೆ, ನನ್ನ ಬಳಿಯಲ್ಲಿ ಯಾವುದೇ ಕೈಬರಹದ ಪಹಣಿ ಪುಸ್ತಕಗಳು ಇಲ್ಲ ಎಂದು ಸಮಜಾಯಿಸಿ ನೀಡಿದ್ದಾರೆ ಎಂದು ಕಾರ್ಯಕರ್ತರು ತಿಳಿಸಿದ್ದಾರೆ.

ಅನುಮತಿ ಇಲ್ಲದೆ ತಿದ್ದುಪಡಿ?: ಸರ್ವೆ ನಂ. 110 ಗೋಮಾಳವಾಗಿದ್ದು, ಅಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ತೈಲಗೆರೆ ಗ್ರಾಮದ ರಾಜಸ್ವ ನಿರೀಕ್ಷಕ ಅವರ ಕುಟುಂಬಸ್ಥರ ಹೆಸರಿನಲ್ಲಿ ಹಾಗೂ 20 ಅನಾಮಧೇಯ ಹೆಸರಿನಲ್ಲಿ ಉಪತಹಶೀಲ್ದಾರ್‌ ಅವರ ಅನುಮತಿ ಇಲ್ಲದೆ, ತಹಶೀಲ್ದಾರ್‌ ಗಮನಕ್ಕೂ ತಾರದೆ ಪಹಣಿಗಳಲ್ಲಿ ತಿದ್ದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇಷ್ಟೆಲ್ಲಾ ಅವ್ಯವಹಾರ ಆಗಿರುವುದರಿಂದ ಕೂಡಲೇ ಅವರನ್ನು ಅಮಾನತ್‌ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇವರು ದೊಡ್ಡಬಳ್ಳಾಪುರ, ಹೊಸಕೋಟೆ ತಾಲೂಕಿನ ರಾಜಸ್ವ ನಿರೀಕ್ಷಕರಾಗಿದ್ದಾಗ ಅಮಾನತು ಗೊಂಡಿದ್ದರು. ಇವರಿಗೆ ತಹಶೀಲ್ದಾರ್‌ ಕೂಡ ನೋಟಿಸ್‌ ನೀಡಿದ್ದು, ಜಿಲ್ಲಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕುಂದಾಣ ರಾಜಸ್ವ ನಿರೀಕ್ಷಕ ಪಹಣಿ ಪುಸ್ತಕದಲ್ಲಿ ಅನಧಿಕೃತ ಹೆಸರು ನಮೂದು ಮಾಡಿರುವ ಆರೋಪ ನನ್ನಗಮನಕ್ಕೆ ಬಂದಿದೆ. ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ಇನ್ನೆರಡು-ಮೂರು ದಿನಗಳಲ್ಲಿ ಕ್ರಮ ಜರುಗಿಸಲಾಗುವುದು. -ಕೆ.ಶ್ರೀನಿವಾಸ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.