ಜನರಿಗೆ ಕಲುಷಿತ ಕೆರೆ ನೀರೇ ಗತಿ, ರೋಗ ಬಂದರೆ ಯಾರು ಹೊಣೆ?


Team Udayavani, Apr 12, 2021, 12:23 PM IST

ಜನರಿಗೆ ಕಲುಷಿತ ಕೆರೆ ನೀರೇ ಗತಿ, ರೋಗ ಬಂದರೆ ಯಾರು ಹೊಣೆ?

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪಿಯ ಕುಂದಕೆರೆ ವಲಯಕ್ಕೆಸೇರಿದ ಕಾಡಂಚಿನ ಗ್ರಾಮವಾದ ‘ಉಪಕಾರ ಕಾಲೋನಿ’ಯಲ್ಲಿ ನೀರಿಗೆ ಹಾಹಾಕಾರಉಂಟಾಗಿದ್ದು, ಇಲ್ಲಿನ ಜನರು ಕೆರೆ-ಕಟ್ಟೆಗಳಿಂದಕಲುಷಿತ ನೀರು ತಂದು ಕುಡಿಯುವ ಪರಿಸ್ಥಿತಿತಲೆದೋರಿದೆ. ಕಲುಷಿತ ನೀರು ಸೇವನೆಯಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಕಾಡುತ್ತಿದೆ.ಆದರೆ, ಇದೇ ನೀರೇ ಜನರು ವಿಧಿಯಲ್ಲದೇ ಬಳಸುವಂತಾಗಿದೆ.

ಬಂಡೀಪುರ ವ್ಯಾಪ್ತಿಯ ಕುಂದಕೆರೆ ವಲಯಕ್ಕೆಸೇರಿದ ಕೊನೆಯ ಕಾಡಂಚಿನ ಗ್ರಾಮ ಇದಾಗಿದ್ದು,ಸುಮಾರು 70 ರಿಂದ 80 ಜೇನು ಕುರುಬರಮನೆಗಳಿವೆ. 200 ರಿಂದ 250 ಜನಸಂಖ್ಯೆಹೊಂದಿದ್ದರೂ ಇಲ್ಲಿಗೆ ನೀರು ಪೂರೈಸಲು ಒಂದುಕೊಳವೆ ಬಾವಿ ಇಲ್ಲ. ಇದರ ಬಗ್ಗೆ ಅರಿತಿದ್ದರೂಕ್ಷೇತ್ರದ ಶಾಸಕ ನಿರಂಜನಕುಮಾರ್‌,ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ.

ಒಂದೂವರೆ ಕಿ.ಮೀ. ದೂರದಿಂದ ನೀರು:ಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆಉಪಕಾರ ಕಾಲೋನಿ ಒಳಪಡಲಿದ್ದು, ಇಲ್ಲಿನಜನರು ಕುಡಿಯುವ ನೀರಿಗಾಗಿ ಒಂದೂವರೆಕಿ.ಮೀ. ದೂರದಿಂದ ಹೊತ್ತು ತರಬೇಕಿದೆ.ಗ್ರಾಮಕ್ಕೆ ಟ್ಯಾಂಕರ್‌ ಮೂಲಕ ನೀರು ಪೂರೈಕೆಮಾಡುವುದು ಅನಿವಾರ್ಯವಾಗಿದ್ದರೂ ಸಹಪಂಚಾಯಿತಿಯಲ್ಲಿ ಹಣದ ಸಮಸ್ಯೆಯಿಂದಟ್ಯಾಂಕರ್‌ ನೀರು ಸರಬರಾಜು ಆಗದೆ ಜನರು ಪರದಾಡುವಂತಾಗಿದೆ.

ಕೆರೆ-ಕಟ್ಟೆ ನೀರು ಬಳಕೆ: ಗ್ರಾಮದಲ್ಲಿ ಈಗಾಗಲೇ ಅಳವಡಿಸಿರುವ ಪೈಪ್‌ಲೈನ್‌ ನಲ್ಲಿಗಳು,ತೊಂಬೆಗಳಲ್ಲಿ ನೀರು ಬಾರದ ಕಾರಣ ಜನರು ಕಾಡು ಪ್ರಾಣಿಗಳು ಕುಡಿಯುವ ನೀರನ್ನು ಕೆರೆ-ಕಟ್ಟೆಗಳಿಂದ ತಂದು ಕುಡಿಯುವ ಪರಿಸ್ಥಿತಿನಿರ್ಮಾಣವಾಗಿದೆ. ಈ ಬಗ್ಗೆ ಪಿಡಿಒ ರವಿಚಂದ್ರಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದುಸ್ಥಳೀಯರು ಅಳಲು ತೋಡಿಕೊಂಡರು.

ಕಾಲೋನಿಗೆ ಟ್ಯಾಂಕರ್‌ ಮೂಲಕ ತರುವ ನೀರು ಸ್ಥಗಿತವಾದರೆ ಅಕ್ಕಪಕ್ಕದ ಜಮೀನುಮಾಲಿಕರಿಂದ ಕಾಡಿಬೇಡಿ ನೀರು ತರಬೇಕಿದೆ.ಹಗಲಿನ ವೇಳೆ ನೀರು ತರಲು ಹೋದರೆ ಕೂಲಿಇಲ್ಲ, ಕೂಲಿಗೆ ಹೋದರೆ ನೀರಿಲ್ಲ ಎನ್ನುವಂತಾಗಿದೆ.ಇನ್ನು ತ್ರಿಫೇಸ್‌ ಕರೆಂಟ್‌ ಮಧ್ಯರಾತ್ರಿ ಇದ್ದಾಗವಿಷ ಜಂತು, ಕಾಡುಪ್ರಾಣಿಗಳ ಭಯದಲ್ಲಿ ನಲುಗುವಂತಾಗಿದೆ. ಬೇಸಿಗೆ ಆರಂಭದ ದಿನಗಳಲ್ಲೇ ಸಮಸ್ಯೆ ಮಿತಿಮೀರಿದ್ದು, ಮುಂದಿನ ದಿನಗಳನ್ನು ಹೇಗೆಎದುರಿಸುವುದು ಎನ್ನುವ ಆತಂಕ ಇಲ್ಲಿನ ನಿವಾಸಿಗಳಲ್ಲಿ ಮನೆ ಮಾಡಿದೆ.

ಉಪಕಾರ ಕಾಲೋನಿಯಲ್ಲಿ ನೀರಿನಸಮಸ್ಯೆ ಕುರಿತು ಅಧಿಕಾರಿಗಳಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ಜನಪ್ರತಿನಿಧಿಗಳು ಆಗಮಿಸಿ ಮತ ಕೇಳುತ್ತಾರೆ.ನಂತರ ಇತ್ತ ಸುಳಿಯುವುದು ಇಲ್ಲ. ನಮ್ಮಸಮಸ್ಯೆ ಆಲಿಸುವುದಿಲ್ಲ. ಇಷ್ಟೆಲ್ಲ ಮಾಡುವಬದಲು ವಿಷ ಕೊಟ್ಟು ಬಿಡಿ ಎಲ್ಲರೂ ಸತ್ತು ಹೋಗುತ್ತೇವೆ. – ದೇವಮ್ಮ, ಉಪಕಾರ ಕಾಲೋನಿ ನಿವಾಸಿ

ಬಹುಗ್ರಾಮ ಕುಡಿಯುವ ನೀರುಯೋಜನೆಯಡಿ ಉಪಕಾರಕಾಲೋನಿಯಲ್ಲಿ ಸೇರಿದ್ದರೂ ಸಹ ನೀರಿನ ಸಮಸ್ಯೆ ತಲೆದೊರಿದೆ. ಈ ಬಗ್ಗೆ ಶೀಘ್ರಪರಿಶೀಲಿಸಿ, ಅಧಿಕಾರಿಗಳ ಸಭೆ ನಡೆಸಿ ಕುಡಿಯುವ ನೀರು ಪೂರೈಕೆಗೆ ಕ್ರಮ ವಹಸಿಲಾಗುವುದು. – ಶ್ರೀಕಂಠರಾಜೇ ಅರಸ್‌, ತಾಪಂ ಇಒ

 

– ಬಸವರಾಜು ಎಸ್‌.ಹಂಗಳೆ

ಟಾಪ್ ನ್ಯೂಸ್

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.