ಲಾಕ್ ಡೌನ್ ಭೀತಿ: ಮುಂಬೈನಿಂದ ಮತ್ತೆ ಸಾವಿರಾರು ಮಂದಿ ಗುಳೆ ಹೊರಟ ವಲಸೆ ಕಾರ್ಮಿಕರು!

ಮಹಾರಾಷ್ಟ್ರ ಸರ್ಕಾರ ವೀಕೆಂಡ್ ಲಾಕ್ ಡೌನ್ ಹಾಗೂ ನೈಟ್ ಕರ್ಪ್ಯೂ ಜಾರಿಗೊಳಿಸಿದೆ.

Team Udayavani, Apr 12, 2021, 1:52 PM IST

12-4

ಇಂದೋರ್ : ಕೋವಿಡ್ ಇಡಿ ಪ್ರಪಂಚದಲ್ಲಿ ಮತ್ತೆ ಭೀತಿಯನ್ನು ಮೂಡಿಸಿದೆ ಎನ್ನುವುದಕ್ಕೆ ಅನುಮಾನ ಬೇಕಾಗಿಲ್ಲ. ಕೋವಿಡ್ ಸೋಂಕಿನ ಮೊದಲ ಅಲೆಯಲ್ಲಿ ದೇಶದ ನಾಗರಿಕ ವ್ಯವಸ್ಥೆ ತತ್ತರಿಸಿ ಹೋಗಿದೆ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಈಗ ದೇಶದಲ್ಲಿ ಮತ್ತೆ ಕೋವಿಡ್ ನ ರೂಪಾಂತರಿ ಸೋಂಕು ದೇಶವ್ಯಾಪಿ ಆತಂಕ ಸೃಷ್ಟಿಸಿದೆ.

ಕಳೆದ ಬಾರಿ ಇದೇ ಸಮಯಕ್ಕೆ ದೇಶದ ಮಹಾ ನಗರಗಳಿಂದ ಸಾವಿರಾರು ಮಂದಿ ವಲಸೆ ಕಾರ್ಮಿಕರು ತಮ್ಮ ಊರಿಗೆ ಗುಳೆ ಹೊರಟಿದ್ದನ್ನು ಕಂಡಿದ್ದೇವೆ. ಈ ಬಾರಿ ಮತ್ತೆ ಆ ಸನ್ನಿವೇಶ ಎದುರಾಗಿದೆ. ವಾಣಿಜ್ಯ ನಗರ ಮುಂಬೈನಲ್ಲಿ ಕೋವಿಡ್ ನ ಭೀತಿ ಹೆಚ್ಚಾಗಿದೆ. ಮತ್ತೆ ಲಾಕ್ ಡೌನ್ ಬಗ್ಗೆ ಸರ್ಕಾರ ಪದೇ, ಪದೇ ಮಾತನಾಡುತ್ತಿದ್ದು, ಜನರಲ್ಲಿ, ಅದರಲ್ಲೂ ವಲಸೆ ಕಾರ್ಮಿಕರಲ್ಲಿ ಆತಂಕ ಹೆಚ್ಚಾಗಿದೆ.

ಈ ಹಿನ್ನಲೆಯಲ್ಲಿ ಮತ್ತೆ ವಲಸೆ ಕಾರ್ಮಿಕರು ಮಹಾನಗರಗಳಿಂದ ಊರಿಗೆ ಗುಳೆ ಹೊರಟಿರುವ ದೃಶ್ಯಗಳು ಕಂಡು ಬಂದಿರುವುದನ್ನು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಮುಂಬೈ-ಆಗ್ರಾ ಮಾರ್ಗಕ್ಕೆ ಸಂಪರ್ಕ ಹೊಂದಿದ ಬೈಪಾಸ್ ರಸ್ತೆಯಲ್ಲಿ ಕಳೆದ ಕೆಲವು ದಿನಗಳಿಂದ ವಲಸೆ ಕಾರ್ಮಿಕರ ಮೋಟಾರ್ ಸೈಕಲ್‌ ಗಳು, ಕಪ್ಪು-ಹಳದಿ ಮಿನಿ ಟ್ರಕ್‌ ಗಳು ಮತ್ತು ಆಟೋರಿಕ್ಷಾಗಳ ಸಂಖ್ಯೆ ಹೆಚ್ಚುತ್ತಿವೆ ಎಂದು ರಾಷ್ಟ್ರೀಯ ಸುದ್ದಿ ಸಂಸ‍್ಥೆಗಳು ವರದಿ ಮಾಡಿವೆ.

ಮುಂಬೈನಲ್ಲಿ ವೈರಸ್ ಏಕಾಏಕಿ ಮತ್ತೊಮ್ಮೆ ತೀವ್ರ ಮಟ್ಟಕ್ಕೆ ತಿರುಗಿದೆ. ಲಾಕ್‌ ಡೌನ್ ಮತ್ತೆ ಆಗಬಹುದು ಮತ್ತು ಅದು ಕಳೆದ ವರ್ಷದಂತೆ ನಿರುದ್ಯೋಗ ಸೃಷ್ಟಿಯಾಗಬಹುದು ಎಂಬ ಭೀತಿ ಹುಟ್ಟುತ್ತಿದೆ. ಆದ್ದರಿಂದ ನಾವು ಮನೆಗೆ ಮರಳಲು ನಿರ್ಧರಿಸಿದ್ದೇವೆ” ಎಂದು ರಾಮ್‌ ಶರಣ್ ಸಿಂಗ್ ಎಂಬ 40 ರ ಪ್ರಾಯದ ವಲಸೆ ಕಾರ್ಮಿಕರೊಬ್ಬರು, ಆಟೋರಿಕ್ಷಾದಲ್ಲಿ ಉತ್ತರ ಪ್ರದೇಶದ ಬಲ್ಲಿಯಾಕ್ಕೆ ಹಿಂತಿರುಗುವಾಗ ಸುದ್ದಿ ಸಂಸ್ಥೆ ಜೀ ನ್ಯೂಸ್(ZEE News)ಗೆ ಪ್ರತಿಕ್ರಿಯಿಸಿದ್ದಾರೆ.

ಇದೇ ರೀತಿ, ಬಿಹಾರದ ಭೋಜ್‌ ಪುರ ಜಿಲ್ಲೆಯಲ್ಲಿನ ಹಳ್ಳಿಗೆ ಮರಳುತ್ತಿದ್ದ ಮತ್ತೊಬ್ಬ ವಲಸೆ ಕಾರ್ಮಿಕ   ಮೊಹಮ್ಮದ್ ಶಾದಾಬ್, ನಾನೊಂದು ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡುತ್ತಿದ್ದೆ. ಪರಿಸ್ಥಿತಿ ಸಹಜವಾದರೇ ಮತ್ತೆ ಇಲ್ಲಿಗೆ ಬರುತ್ತೇನೆ. ಇಲ್ಲವಾದರೇ, ನನ್ನ ಊರಿನಲ್ಲಿಯೇ ಕೆಲಸ ಮಾಡುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಇನ್ನು, ಕಳೆದ ವರ್ಷ, ಮುಂಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ  ಕೋವಿಡ್ ನ ಕಾರಣದಿಂದಾಗಿ ಲಾಕ್‌ ಡೌನ್‌ ನಿಂದ ಜನರು ತಮ್ಮ ಊರಿಗೆ ಮರಳಿ ಹೋಗುವುದಕ್ಕೆ ಹರ ಸಾಹಸ ಪಟ್ಟಿರುವುದಕ್ಕೆ ಈ ಮಾರ್ಗ ಸಾಕ್ಷಿಯಾಗಿತ್ತು.  ಪೂರ್ವ ಮತ್ತು ಉತ್ತರ ರಾಜ್ಯಗಳಿಗೆ ಅಸಹಾಯಕ ಸ್ಥಿತಿಯಲ್ಲಿ ವಲಸೆ ಕಾರ್ಮಿಕರು ಗುಳೆ ಹೊರಟಿರುವುದನ್ನು ಇಡೀ ಭಾರತ ಕಂಡಿತ್ತು.

ಮಹಾರಾಷ್ಟ್ರದಲ್ಲಿ ಕೆಲವು ದಿನಗಳಿಂದ ನಿತ್ಯ ನಿರಂತರವಾಗಿ ಸೋಂಕಿನ ಪ್ರಕರಣಗಳು ಹೆಚ್ಚು ದಾಖಲಾಗುತ್ತಿರುವ ಕಾರಣದಿಂದಾಗಿ ಈಗಾಗಲೇ ಮಹಾರಾಷ್ಟ್ರ ಸರ್ಕಾರ ವೀಕೆಂಡ್ ಲಾಕ್ ಡೌನ್ ಹಾಗೂ ನೈಟ್ ಕರ್ಪ್ಯೂ ಜಾರಿಗೊಳಿಸಿದೆ. ಇನ್ನು, ಇತ್ತೀಚೆಗಷ್ಟೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಲಾಕ್ ಡೌನ್ ಮಾಡದಿದ್ದರೇ, ಸೋಂಕು ನಿವಾರಣೆ ಮಾಡಲು ಸಾಧ್ಯವಿಲ್ಲ ಎಂದಿರುವುದು ಜನರಲ್ಲಿ ಭವಿಷ್ಯದ ಬಗ್ಗೆ ಚಿಂತೆ ಹುಟ್ಟಿಸಿದೆ.

ಒಟ್ಟಿನಲ್ಲಿ, ಕಳೆದ ವರ್ಷದಂತೆಯೇ, ಈ ಬಾರಿಯೂ ಲಾಕ್ ಡೌನ್ ಹಾಗೂ ನಿರುದ್ಯೋಗದ ಭಯದಿಂದ ಮಧ್ಯ ಪ್ರದೇಶ, ಬಿಹಾರ್, ಉತ್ತರ ಪ್ರದೇಶದ ಕೆಲವು ವಲಸೆ ಕಾರ್ಮಿಕರು ಗುಳೆ ಹೊರಟಿರುವುದು ಮತ್ತೆ ಕಂಡು ಬಂದಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.