ಜೀವ-ಜೀವನ ಬೇಕಾದರೆ ಕೋವಿಡ್ ಜಾಗೃತಿ ವಹಿಸಿ
Team Udayavani, Apr 12, 2021, 3:50 PM IST
ರಟ್ಟೀಹಳ್ಳಿ: ಇಂದಿನ ಆಧುನಿಕ ಜೀವನ ಶೈಲಿಯಲ್ಲಿಅಜಾಗರೂಕತೆಯಿಂದ ಎಷ್ಟೋ ಜನರು ನಮ್ಮಎದುರು ಮಣ್ಣು ಪಾಲಾಗಿದ್ದು, ಇಂತಹಪರಿಸ್ಥಿತಿಯಲ್ಲಿ ನಮಗೆ ಜೀವ ಮತ್ತು ಜೀವನಬೇಕಾದರೆ ಜಾಗ್ರತೆ ವಹಿಸಬೇಕೆಂದು ರಟ್ಟೀಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಕೃಷ್ಣಪ್ಪ ತೋಪಿನ ಹೇಳಿದರು.
ರಟ್ಟೀಹಳ್ಳಿ ಪೊಲೀಸ್ ಠಾಣೆ, ತಾಲೂಕುಆಡಳಿತ ಹಾಗೂ ಪಟ್ಟಣ ಪಂಚಾಯತಿ ವತಿಯಿಂದ ಹಮ್ಮಿಕೊಂಡಿದ್ದ ಕೋವಿಡ್ ಜಾಗೃತಿ ಜಾಥಾಗೆ ಚಾಲನೆ ನೀಡಿ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು.
ರಾಜ್ಯ ಮತ್ತು ದೇಶದಲ್ಲಿ ಕೋವಿಡ್ ವೈರಸ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ನಮ್ಮ ಜೀವ ನಮ್ಮ ಕೈಯಲ್ಲಿದೆ. ಹಾಗಾಗಿ, ಸಾರ್ವಜನಿಕರುಎಷ್ಟು ಜಾಗ್ರತೆಯಿಂದ ಇರುತ್ತಾರೆ ಅಷ್ಟು ಒಳ್ಳೆಯದು.ನಾವು ಚೆನ್ನಾಗಿದ್ದು, ನಮ್ಮ ಸುತ್ತಮುತ್ತಲಿನ ಜನರುಚೆನ್ನಾಗಿರಬೇಕಾದರೆ ಕಡ್ಡಾಯವಾಗಿ ಮಾಸ್ಕ್ಧರಿಸಬೇಕು. ಸಾಮಾಜಿಕ ಅಂತರದೊಂದಿಗೆಕಾರ್ಯನಿರ್ವಹಿಸಬೇಕು. ಕಡ್ಡಾಯವಾಗಿ ಸ್ಯಾನಿಟೈಸರ್ ಬಳಸಬೇಕು ಎಂದರು.
ಪಪಂ ಮುಖ್ಯಾಧಿಕಾರಿ ಉಮೇಶ ಗುಡ್ಡದ ಮಾತನಾಡಿ, ಪ್ರತಿ ಶುಕ್ರವಾರ ರಟ್ಟೀಹಳ್ಳಿಯಲ್ಲಿಸಂತೆ ನಡೆಸಲಾಗುತ್ತಿದ್ದು, ಅಂಗಡಿ ಹಾಕಿದಸ್ಥಳದ ಎದುರು ಸಾಮಾಜಿಕ ಅಂತರದ ಬಾಕ್ಸ್ಹಾಕಲಾಗಿದೆ. ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಹೊರಗಡೆ ಬರಬೇಕು. ಈ ಬಗ್ಗೆ ಅರಿತು ವರ್ತಿಸಿದರೆ ಎಲ್ಲರಿಗೂ ಒಳ್ಳೆಯದು.ಇಲ್ಲದಿದ್ದರೆ ದಂಡ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಕೋವಿಡ್ ವೈರಸ್ ತೊಂದರೆಮತ್ತು ಅದರ ಜಾಗೃತಿ ಕ್ರಮಗಳ ಬಗ್ಗೆ ತಹಶೀಲ್ದಾರ್ ಕೆ.ಗುರುಬಸವರಾಜ ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ
ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ