ವರ್ಷದ ಹಿಂದೆ ಬೆಚ್ಚಿ ಬಿದ್ದಿತ್ತು ಗುಮ್ಮಟ ನಗರಿ


Team Udayavani, Apr 12, 2021, 8:15 PM IST

nhjfgjgbvc

ವಿಜಯಪುರ: ಜಗತ್ತನ್ನೇ ತಲ್ಲಣಗೊಳಿಸಿದ್ದ ಕೋವಿಡ್‌ -19 ಕೊರೊನಾ ಸೋಂಕು ರೋಗ ಐತಿಹಾಸಿಕ ವಿಜಯಪುರ ನಗರದಲ್ಲಿ ಒಂದೇ ದಿನ 6 ಸೋಂಕಿತರ ಮೂಲಕ ಜಿಲ್ಲೆಗೂ ಕಾಲಿಟ್ಟಿದ್ದ ದಿನವಿದು. ಇದೀಗ ಕೋವಿಡ್‌ ಎರಡನೇ ಅಲೆಯ ಆತಂಕ ಹೆಚ್ಚಿಸಿದ್ದರೂ ಮೊದಲ ಸೋಂಕಿತರ ಮೂಲಕ ಜಿಲ್ಲೆಯ ಜನರ ನೆಮ್ಮದಿಗೆ ಕುತ್ತು ತಂದಿಟ್ಟ ವರ್ಷದ ಹಿಂದಿನ ಈ ರವಿವಾರಕ್ಕೆ ಇದೀಗ ವರ್ಷದ ಕಹಿ ನೆನಪು. ಜೊತೆಗೆ ಜಿಲ್ಲೆಯಲ್ಲಿ ಮೊದಲ ಬಾರಿಗೆ ಸೀಲ್‌ಡೌನ್‌ ಶಬ್ದ ಜಿಲ್ಲೆಯ ಜನರ ನಾಲಿಗೆಯಲ್ಲಿ ಕೇಳತೊಡಗಿತ್ತು.

ಕಲಬುರಗಿ ಜಿಲ್ಲೆಯಲ್ಲಿ ಸೋಂಕಿತರಲ್ಲಿ ಮೊದಲ ವ್ಯಕ್ತಿ ಮೃತಪಟ್ಟಿದ್ದ ಘಟನೆ, ಬಾಗಲಕೋಟೆ ಜಿಲೆಯಲ್ಲಿ ಸೋಂಕಿತರು ಪತ್ತೆಯಾದಾಗ ಇವರು ವಿಜಯಪುರ ಜಿಲ್ಲೆಯಲ್ಲಿ ನಡುಕ ಹೆಚ್ಚಿತ್ತು. ಏಕೆಂದರೆ ಈ ಎರಡೂ ಜಿಲ್ಲೆಗಳು ವಿಜಯಪುರ ಜಿಲ್ಲೆಗೆ ಹೊಂದಿಕೊಂಡು ಗಡಿಯಲ್ಲೇ ಇದ್ದು, ಅಲ್ಲಿನ ಸೋಂಕಿತರು ಬಸವನಾಡಿನಲ್ಲಿ ಪ್ರಯಾಣ ಮಾಡಿದ್ದಾರೆ ಎಂಬ ಮಾಹಿತಿ ಬಂದಿತ್ತು.

ಈ ಅಲ್ಲಿನ ಸೋಂಕಿತರ ಪ್ರಯಾಣದ ಜಾಡು ಪತ್ತೆ ಹಚ್ಚುವ ಧಾವಂತವೂ ಆರಂಭಗೊಂಡಿತ್ತು. ಇದರ ಬೆನ್ನಲ್ಲೇ ವಿಜಯಪುರ ಜಿಲ್ಲಾಡಳಿತ ಇಡಿ ಜಿಲ್ಲೆಯ ಗಡಿಯಲ್ಲಿ ಹೊರಗಿನವರು ಪ್ರವೇಶಿಸದಂತೆ ಏನೆಲ್ಲ ಸಾಧ್ಯವೋ ಅದೆಲ್ಲ ನಿರ್ಬಂಧದ ಸಹಿತ ತೀವ್ರ ನಿಗಾ ಇರಿಸಿತ್ತು. ಜಿಲ್ಲಾ ಧಿಕಾರಿ ವೈ.ಎಸ್‌. ಪಾಟೀಲ ನೇತೃತ್ವದ ಎಸ್ಪಿ ಅನುಪಮ್‌ ಅಗವಾಲ್‌ ಅವರ ತಂಡ ಏನೆಲ್ಲ ನಿರ್ಬಂಧ, ಧಾವಂತದ ಮಧ್ಯೆಯೇ ಸರಿಯಾಗಿ 365 ದಿನಗಳ ಹಿಂದಿನ (ಏ. 12) ರವಿವಾರ ಮುಂಗೋಳಿ ಕೂಗಿನೊಂದಿಗೆ ವಿಜಯಪುರ ಜಿಲ್ಲೆಯಲ್ಲೂ ಕೋವಿಡ್‌-19 ಸೋಂಕೂ ಚೀತ್ಕಾರ ಮಾಡಿತ್ತು. ಅಂದು ಬೆಳಗ್ಗೆ ಓರ್ವ ವೃದ್ಧೆಯಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದ ಜಿಲ್ಲಾಡಳಿತ ಸಂಜೆ ವೇಳೆಗೆ ಮತ್ತೆ ಐವರಲ್ಲಿ ಸೋಂಕು ದೃಢಪಟ್ಟಿದ್ದನ್ನು ಅಧಿಕೃತಗೊಳಿಸಿತ್ತು.

ಇದಕ್ಕೂ ಮೊದಲು ಗೋಲಗುಮ್ಮಟ-ಬಡಿಕಮಾನ್‌ ಭಾಗದ ಇಡಿ ಪ್ರದೇಶವನ್ನು ಸೀಲ್‌ಡೌನ್‌ ಮಾಡಿ, ಗಲ್ಲಿ ಗಲ್ಲಿಗಳನ್ನೂ ಕಲ್ಲು-ಮುಳ್ಳು ಬೇಲಿ ಹಾಕಿ ನಿರ್ಬಂಧಿಸಲಾಗಿತ್ತು. ಅಂದಿನ ರವಿವಾರ ಬೆಳಗ್ಗೆ ಮನೆಯಿಂದ ಯಾರೂ ಹೊರ ಬರದಂತೆ ಧ್ವನಿವರ್ಧಕದ ಮೂಲಕ ಜನರಿಗೆ ಮಾಹಿತಿ ನೀಡಿದಾಗಲೇ ವಿಜಯಪುರ ನಗರಕ್ಕೂ ಕೋವಿಡ್‌ ಸೋಂಕು ಪ್ರವೇಶ ಮಾಡಿದ್ದು ಸಾರ್ವಜನಿಕರಿಗೆ ಮುನ್ನೆಚ್ಚರಿಕೆಯಾಗಿ ಮಾಹಿತಿ ನೀಡಿತ್ತು.

ಲಾಕ್‌ಡೌನ್‌ ಪರಿಣಾಮ ಎರಡು ವಾರಗಳಿಂದ ಮನೆಗಳಲ್ಲಿ ಬಂಧಿ ಯಾಗಿದ್ದ ಜಿಲ್ಲೆಯ ಜನರು ಕಂಗಾಲಾಗಿದ್ದ ದಿನಕ್ಕೆ ಇದೀಗ ವರ್ಷ. ಐತಿಹಾಸಿಕ ಗೋಲಗುಮ್ಮಟ ಪ್ರದೇಶದ ಛಪ್ಪರಬಂದ್‌ ಗಲ್ಲಿಯ ನಿವಾಸಿ 60 ವರ್ಷದ ವೃದ್ಧೆಯಲ್ಲಿ ಸೋಂಕು ದೃಢಪಟ್ಟು, ಪಿ-221 ಸಂಖ್ಯೆ ಮೂಲಕ ಜಿಲ್ಲೆಯ ಕೊರೊನಾ ಮೊದಲ ಸೋಂಕಿತರು ಪತ್ತೆಯಾಗಿದ್ದರು.

ಇದರ ಬೆನ್ನಲ್ಲೇ ಅದೇ ಕುಟುಂಬ ಹಾಗೂ ನೆರೆ ಮನೆಯವರೂ ಸೇರಿದಂತೆ ಇನ್ನೂ ಐವರಲ್ಲೂ ಸೋಂಕು ಪತ್ತೆಯಾಗಿ 13 ವರ್ಷದ ಮಗು ಪಿ-228, 12 ವರ್ಷದ ಹೆಣ್ಣುಮಗು ಪಿ-229, 10 ವರ್ಷದ ಗಂಡು ಮಗು ಪಿ-230, 49 ವರ್ಷದ ವ್ಯಕ್ತಿ ಪಿ-231 ಹಾಗೂ 20 ವರ್ಷದ ಮಹಿಳೆ ಪಿ.232 ಎಂದು ಗುರುತಿಸಿದ್ದೇ ತಡ ಇಡಿ ಜಿಲ್ಲೆ ತಲ್ಲಣಗೊಂಡಿತ್ತು. ಮತ್ತೂಂದೆಡೆ ಜಿಲ್ಲಾಡಳಿತ ಜಿಲ್ಲೆಯಲ್ಲಿ ಪತ್ತೆಯಾದ ಮೊದಲ ಸೋಂಕಿತೆ ಹಾಗೂ ಆಕೆಯ ಪತಿ ಇಬ್ಬರೂ ಮಹಾರಾಷ್ಟ್ರದ ಈಚಲಕರಂಜಿ ಪಟ್ಟಣಕ್ಕೆ ಪ್ರಯಾಣ ಬೆಳೆಸಿದ ಜಾಡು ಹುಡುಕಲು ಮುಂದಾಗಿತ್ತು. ನಂತರ ಕೆಮ್ಮಿನ ಸಮಸ್ಯೆಯಿಂದ ನಗರದ ಹಲವು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಅಲೆದಿದ್ದ ಜಿಲ್ಲೆಯ ಮೊದಲ ಸೋಂಕಿತೆ ತೀವ್ರ ಉಸಿರಾಟದ ಸಮಸ್ಯೆಯಿಂದ ಕೊನೆಗೆ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು.

ಸೋಂಕಿನ ಲಕ್ಷಣಗಳಿದ್ದ ಕಾರಣಕ್ಕೆ ಗಂಟಲು ದ್ರವ ಪರೀಕ್ಷೆಯಲ್ಲಿ ವೃದ್ಧೆಗೆ ಸೋಂಕು ಇರುವುದು ದೃಢಪಟ್ಟಿತ್ತು. ನಂತರ ಆಕೆಯ ಸಂರ್ಕದಲ್ಲಿದ್ದವರ ಗಂಟಲು ದ್ರವ ಪರೀಕ್ಷೆ ನಡೆಸಿತ್ತು. ಸೋಂಕು ದೃಢಪಡುತ್ತಲೇ ಜಿಲ್ಲಾಡಳಿತ ನಗರದಲ್ಲಿರುವ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿದ್ದ ಎಲ್ಲ ರೋಗಿಗಳನ್ನು ನಗರದ ವಿವಿಧ ಖಾಸಗಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು.

ಮತ್ತೂಂದೆಡೆ ಸರ್ಕಾರಿ ಜಿಲ್ಲಾ ಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಕೋವಿಡ್‌ ಆಸ್ಪತ್ರೆಯಾಗಿ ಪರಿವರ್ತನೆ ಮಾಡಿತ್ತು. ಸೋಂಕಿತೆಯ ಕುಟುಂಬದ 23 ಸದಸ್ಯರನ್ನು ನಗರದ ಟಕ್ಕೆ ಪ್ರದೇಶದಲ್ಲಿ ಕೋವಿಡ್‌-19 ಕ್ವಾರಂಟೈನ್‌ ಘಟಕಕ್ಕೆ ದಾಖಲಿಸಿತ್ತು. ಸೀಲ್‌ಡೌನ್‌ ಪ್ರದೇಶದಲ್ಲಿ ಪೊಲೀಸರ ರಕ್ಷಣೆಯಲ್ಲಿ ಆರೋಗ್ಯ ಹಾಗೂ ಆಶಾ ಕಾರ್ಯಕರ್ತೆಯರು 2 ಸಾವಿರಕ್ಕೂ ಹೆಚ್ಚು ಮನೆಗಳಿಗೆ ತೆರಳಿ ಸಮೀಕ್ಷೆ ನಡೆಸಿದ್ದರು. ಮತ್ತೂಂದೆಡೆ ಸೀಲ್‌ಡೌನ್‌ ಪ್ರದೇಶದಲ್ಲಿ ಜನರು ಮನೆಯಿಂದ ಹೊರ ಬರದಂತೆ ಕಣ್ಗಾವಲು ಇರಿಸಲು ಎಸ್ಪಿ ಅನುಪಮ್‌ ಅಗರವಾಲ್‌ ನೇತೃತ್ವದಲ್ಲಿ ಡ್ರೋಣ್‌ ಕ್ಯಾಮರಾ ಹಾರಾಟ ನಡೆಸಿತ್ತು. ಸೀಲ್‌ ಮಾಡಿದ ಗಲ್ಲಿಗಳ ಪ್ರವೇಶ ಭಾಗದಲ್ಲಿ ಎಲ್ಲೆಡೆ ಪೊಲೀಸ್‌ ಕಾವಲು ಹಾಕಿ ಅಲ್ಲಲ್ಲಿ ಪೊಲೀಸ್‌ ವಾಹನಗಳನ್ನೂ ನಿಲ್ಲಿಸಲಾಗಿತ್ತು.

ಟಾಪ್ ನ್ಯೂಸ್

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.