ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಮೀಸಲು: ಸಚಿವ ಡಾ.ಕೆ.ಸುಧಾಕರ್


Team Udayavani, Apr 13, 2021, 1:44 PM IST

k-sudhakar

ಬೆಂಗಳೂರು: ಕಳೆದ ಬಾರಿ ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಕೋವಿಡ್ ಗೆ ಮೀಸಲಿಡಲಾಗಿತ್ತು. ಇದೇ ರೀತಿ ಈಗ ಹಾಸಿಗೆ ಮೀಸಲಿಡಬೇಕು ಎಂದು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್ ಗಳ ಸಂಘಟನೆ (ಫನಾ) ಸಂಘಟನೆ ಜೊತೆ ವೀಡಿಯೋ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಕೋವಿಡ್ ಅಲ್ಲದ ರೋಗಿಗಳಿಗೆ ದಾಖಲಾತಿ ಅವಶ್ಯಕತೆ ಇಲ್ಲದಿದ್ದಲ್ಲಿ ಅಂತಹ ರೋಗಿಗಳಿಗೆ ಮನವಿ ಮಾಡಿ, ಬಿಡುಗಡೆ ಮಾಡಬೇಕು. ಅವನ್ನು ಕೋವಿಡ್ ಗೆ ಮೀಸಲಿಡಬೇಕು ಎಂದು ಹೇಳಲಾಗಿದೆ. ಒಂದು ವಾರದೊಳಗೆ 50% ರಷ್ಟು ಹಾಸಿಗೆ ನೀಡಲು ಖಾಸಗಿ ಆಸ್ಪತ್ರೆಗಳವರು ಒಪ್ಪಿಕೊಂಡಿದ್ದಾರೆ. ಅಲ್ಪ ರೋಗಲಕ್ಷಣ ಹಾಗೂ ಲಕ್ಷಣರಹಿತ ರೋಗಿಗಳಿಗೆ ಹೋಟೆಲ್ ಗಳಲ್ಲಿ, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ವ್ಯವಸ್ಥೆ ಮಾಡಬೇಕೆಂದು ಸೂಚಿಸಲಾಗಿದೆ. ಆಸ್ಪತ್ರೆಗಳ ಹಾಸಿಗೆಗಳಲ್ಲಿ ಅನಿವಾರ್ಯ ಇರುವವರಿಗೆ ಚಿಕಿತ್ಸೆ ನೀಡಬೇಕೆಂದು ಸೂಚಿಸಲಾಗಿದೆ ಎಂದರು.

ಇದನ್ನೂ ಓದಿ:ಮಸ್ಕಿಯಲ್ಲಿ ಲಂಬಾಣಿ ಮತ ಸೆಳೆಯಲು ತೆಲುಗು ಸಿಂಗರ್‌ ಮಂಗ್ಲಿ ಮೋಡಿ!

ರೆಮಿಡಿಸಿವಿರ್ ಔಷಧಿ ತಯಾರಿಕೆ, ಪೂರೈಕೆಯನ್ನು ಕಂಪನಿಗಳು ಸ್ಥಗಿತಗೊಳಿಸಿವೆ. ರಾಜ್ಯಕ್ಕೆ ಇದರ ಅಗತ್ಯ ಇದೆ. ಕೆಲ ಖಾಸಗಿ ಆಸ್ಪತ್ರೆಗಳು ಔಷಧಿ ಲಭ್ಯವಾಗುತ್ತಿಲ್ಲ ಎಂದು ದೂರಿದ್ದಾರೆ. ಡ್ರಗ್ ಕಂಟ್ರೋಲರ್ ಜೊತೆ ಚರ್ಚಿಸಿ, ಅಗತ್ಯವಿರುವ ಔಷಧ ಪ್ರಮಾಣ ಗುರುತು ಮಾಡಿ, ಸರ್ಕಾರದಿಂದಲೇ ನಿರ್ದಿಷ್ಟ ದರದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಪೂರೈಸುವ ಕ್ರಮ ವಹಿಸಲಾಗುವುದು. ಆಕ್ಸಿಜನ್, ಆಕ್ಸಿಜನ್ ಜನರೇಟರ್ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ. ಕೊರತೆಯ ಸಂಭವ ಬಂದರೆ ಕೈಗಾರಿಕಾ ಆಕ್ಸಿಜನ್ ಬಳಸಲು ಕ್ರಮ ವಹಿಸಲಾಗುವುದು ಎಂದರು.

ತಾಂತ್ರಿಕ ಸಲಹಾ ಸಮಿತಿಯು ಮುಂದಿನ ಎರಡು ತಿಂಗಳ ಕೋವಿಡ್ ಸ್ಥಿತಿಗತಿಯನ್ನು ಅಂದಾಜಿಸಿದ್ದು, ಸರ್ಕಾರ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಲಹೆ ನೀಡಿದೆ. ಈ ಒಂದು ವರ್ಷದ ಅನುಭವದಲ್ಲಿ ಕೊರೊನಾ ಬಗ್ಗೆ ಗೊತ್ತಾಗಿದೆ. ಕೋವಿಡ್ ನಿಂದಾಗಿ ಆರ್ಥಿಕ ನಷ್ಟ ಉಂಟಾಗಿದ್ದು, ಜನರು ಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಲಾಕ್ ಡೌನ್ ನಂತಹ ಕಠಿಣ ಕ್ರಮಕ್ಕೆ ಮುಂದಾಗುವುದು ಕಷ್ಟ ಎಂದರು.

ಇದನ್ನೂ ಓದಿ: ಮಂಗಳೂರು ಆಳಸಮುದ್ರದಲ್ಲಿ ಮೀನುಗಾರಿಕಾ ಬೋಟ್ ದುರಂತ: ಮೂವರು ಸಾವು, 6 ಮಂದಿ ನಾಪತ್ತೆ

ಕೋವಿಡ್ ಪರೀಕ್ಷೆಯಲ್ಲಿ ತಪ್ಪೆಸಗಿದ ನೌಕರರನ್ನು ವಜಾಗೊಳಿಸಲಾಗಿದೆ. ಇದೊಂದು ತಪ್ಪಿಗಾಗಿ ಸರ್ಕಾರ ಮಾಡಿದ ಉತ್ತಮ ಕೆಲಸಗಳನ್ನು ಮರೆ ಮಾಚುವುದು ಬೇಡ. ಈವರೆಗೆ 2.2 ಕೋಟಿಗೂ ಅಧಿಕ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 85% ನಷ್ಟು ಆರ್ ಟಿಪಿಸಿಆರ್ ಪರೀಕ್ಷೆಯಾಗಿದೆ ಎಂದರು.

ಕೋವಿಡ್ ತಡೆಗೆ ಜನರ ಸಹಕಾರ ಅಗತ್ಯ. ಲಾಕ್ ಡೌನ್ ಮಾಡುತ್ತೇವೆ ಎಂದು ಎಲ್ಲೂ ಹೇಳಿಲ್ಲ. ಆದರೆ ಅಂತಹ ಅನಿವಾರ್ಯ ತರಬೇಡಿ ಎಂದು ಮನವಿ ಮಾಡುತ್ತಿದ್ದೇವೆ. ಲಾಕ್ ಡೌನ್ ನಿಂದ ಎಷ್ಟು ನಷ್ಟವಾಗುತ್ತದೆ ಎಂಬ ಅರಿವಿದೆ ಎಂದರು.

ಬೇವು ಕೋವಿಡ್, ಬೆಲ್ಲ ಲಸಿಕೆ: ಯುಗಾದಿ ಬೆಲ್ಲವೇ ಲಸಿಕೆ. ಬೇವು ಕೋವಿಡ್ ಸೋಂಕು. ಎಲ್ಲರೂ ಬೆಲ್ಲದಂತಿರುವ ಲಸಿಕೆಯನ್ನು ಪಡೆದು ಕೊರೊನಾ ನಿಯಂತ್ರಿಸಿ ಎಂದು ಸಚಿವ ಡಾ.ಕೆ.ಸುಧಾಕರ್ ಕೋರಿದ್ದಾರೆ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.