ಸೆಲ್ಫಿ ತೆಗೆಯಲು ಹೋಗಿ ಕಾಳಿ ನದಿಗೆ ಬಿದ್ದಿದ್ದ ಯುವಕ-ಯುವತಿಯ ಶವ ಪತ್ತೆ
Team Udayavani, Apr 13, 2021, 4:01 PM IST
ಜೋಯಿಡಾ (ಉತ್ತರ ಕನ್ನಡ): ಜೋಯಿಡಾ ತಾಲೂಕಿನ ಗಣೇಶಗುಡಿ ಬಳಿಯ ಕಾಳಿ ಸೇತುವೆಯಲ್ಲಿ ಸೆಲ್ಫಿ ತೆಗೆಯುತ್ತಿದ್ದಾಗ ಕಾಲುಜಾರಿ ನದಿಗೆ ಬಿದ್ದು ಮೃತಪಟ್ಟಿದ್ದ ಯುವಕ ಮತ್ತು ಯುವತಿಯ ಶವ ಮಂಗಳವಾರ ಪತ್ತೆಯಾಗಿದೆ.
ಮೃತಪಟ್ಟ ಯುವತಿಯನ್ನು ಧಾರವಾಡದಲ್ಲಿ ಕಲಿಯುತ್ತಿರುವ ಬೀದರ್ ಮೂಲದ ರಕ್ಷಿತಾ ಮತ್ತು ಯುವಕನನ್ನು ಬೀದರ್ ಮೂಲದ ಪುರುಷೋತ್ತಮ ಪಾಟೀಲ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಪೊಲೀಸ್ ಠಾಣೆ ಮೆಟ್ಟಿಲೇರಿದ ಸಂಜನಾ ಸಹೋದರಿ ನಿಕ್ಕಿ ಗಲ್ರಾನಿ
ಸೋಮವಾರ ಸಂಜೆ ಸೆಲ್ಫಿ ತೆಗೆಯುವಾಗ ಯುವತಿ ಕಾಲು ಜಾರಿ ಕಾಳಿ ನದಿಗೆ ಬಿದ್ದಿದ್ದರು. ಬಳಿಕ ಆಕೆಯನ್ನು ರಕ್ಷಿಸಲು ಜಿಗಿದಿದ್ದ ಯುವಕ ಕೂಡಾ ನೀರುಪಾಲಾಗಿದ್ದ.
ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳ, ಪೊಲೀಸರು ಮತ್ತು ಸ್ಥಳೀಯರು ಮಂಗಳವಾರ ಇಬ್ಬರ ಶವವನ್ನು ಮೇಲಕ್ಕೆತ್ತಿದ್ದಾರೆ.
ಇದನ್ನೂ ಓದಿ: ‘ಐಸಿಸಿ ಪ್ಲೇಯರ್ ಆಫ್ ದಿ ಮಂತ್’ನಲ್ಲಿ ಭಾರತೀಯರ ಪಾರಮ್ಯ: ಈ ಬಾರಿ ಭುವನೇಶ್ವರ್ ಗೆ ಗೌರವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ