ಪಶ್ಚಿಮ ಬಂಗಾಳದಲ್ಲಿ 70 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲುವುದಿಲ್ಲ : ಮಮತಾ ಬ್ಯಾನರ್ಜಿ
Team Udayavani, Apr 14, 2021, 4:31 PM IST
ಕೊಲ್ಕತ್ತಾ : ಬಿಜೆಪಿ ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ 70 ಕ್ಷೇತ್ರಗಳಲ್ಲಿಯೂ ಕೂಡ ಗೆಲುವು ಸಾಧಿಸುವುದಿಲ್ಲವೆಂದು ತೃಣ ಮೂಲ ಕಾಂಗ್ರೆಸ್ ನ ನಾಯಕಿ, ಪ.ಬಂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೆ ಕಿಡಿಕಾರಿದ್ದಾರೆ.
ಜಲ್ಪೈಗುರಿ ಜಿಲ್ಲೆಯ ಡಬ್ಗ್ರಾಮ್ ಫುಲ್ಬಾರಿಯಲ್ಲಿ ಚುನಾವಣಾ ಪ್ರಚಾರವನ್ನು ಉದ್ದೇಶಿಸಿ ಮಾತನಾಡಿದ ಮಮತಾ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.
ಓದಿ : ಭ್ರಷ್ಟಾಚಾರದ ವಿರುದ್ಧ ಸಮರ ಅಸಹಾಯಕ ಹೆಣ್ಣಿನ ಚಿತ್ರ ಸಾರ ಆ್ಯಕ್ಟ್ 1978
ಕೇಸರಿ ಪಕ್ಷ ಈಗಾಗಲೇ ನಡೆದ 4 ಹಂತಗಳ ಚುನಾವಣೆಯಲ್ಲಿನ 135 ಕ್ಷೇತ್ರಗಳಲ್ಲಿ 100 ಕ್ಷೇತ್ರಗಳನ್ನು ಗೆದ್ದಾಗಿದೆ ಎಂದು ಮೋದಿ ಹೇಳಿದ್ದಾರೆ. ಆದರೇ, ನಾನು ಹೇಳುತ್ತೆನೆ, ಚುನಾವಣೆಯ ಎಲ್ಲಾ ಹಂತಗಳು ಮುಗಿದ ಮೇಲೆ 294 ಕ್ಷೇತ್ರಗಳ ಪೈಕಿಯಲ್ಲಿ 70 ಕ್ಷೇತ್ರಗಳಲ್ಲಿಯೂ ಕೂಡ ಬಿಜೆಪಿ ಜಯ ಸಾಧಿಸುವುದಿಲ್ಲವೆಂದು ಅವರು ಕಿಡಿ ಕಾರಿದ್ದಾರೆ.
ಒಂದೇ ವಿಷಯದ ಬಗ್ಗೆ ವಿವಿಧ ಸ್ಥಳಗಳಲ್ಲಿ ವಿಭಿನ್ನ ವಿಷಯಗಳನ್ನು ಹೇಳುವ ಮೂಲಕ ಬಿಜೆಪಿ ಸುಳ್ಳನ್ನು ಹರಡುತ್ತಿದೆ. ಎನ್ ಆರ್ ಸಿ ಇರುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಡಾರ್ಜಿಲಿಂಗ್ ನ ಲೆಬಾಂಗ್ ನಲ್ಲಿ ಹೇಳಿದ್ದಾರೆ. ಆದರೆ ರಾಷ್ಟ್ರೀಯ ನಾಗರಿಕ ನೋಂದಣಿ ಅಡಿಯಲ್ಲಿ ಅಕ್ರಮ ವಲಸಿಗರನ್ನು ಹುಡುಕುವ ಪ್ರಕ್ರಿಯೆಯ ಆಧಾರದ ಮೇಲೆ 14 ಲಕ್ಷ ಜನರನ್ನು ಗುರುತಿಸಿ ಬಂಧನ ಶಿಬಿರಗಳಿಗೆ ಕಳುಹಿಸಲಾಗಿದೆ ಎಂದು ಅವರು ಆರೋಪಿಸದ್ದಾರೆ.
ಟಿಎಂಸಿ ಗೆ ನೀವು ಮತ್ತೊಮ್ಮೆ ಅಧಿಕಾರ ಕೊಟ್ಟರೇ, ವಿವಾದಾತ್ಮಕ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್ ಆರ್ ಸಿ) ಯನ್ನು ಪಶ್ಚಿಮ ಬಂಗಾಳದಲ್ಲಿ ಜಾರಿಗೆ ತರಲು ನಾವು ಅನುಮತಿಸುವುದಿಲ್ಲ. ನೀವೆಲ್ಲರೂ ನಾಗರಿಕರು, ನೀವು ಟಿಎಂಸಿ ಗೆ ಮತ ಚಲಾಯಿಸ ನಾವು ಅಧಿಕಾರ ಪಡೆಯುವ ಹಾಗೆ ಮಾಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!
Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ