ಸೆಲ್ಫಿ ತೆಗೆಯಲು ಹೋಗಿ ದುರಂತ : ರೈಲ್ವೆ ವಿದ್ಯುತ್ ತಂತಿ ತಗುಲಿ ಬಾಲಕನಿಗೆ ಗಂಭೀರ ಗಾಯ
Team Udayavani, Apr 14, 2021, 8:22 PM IST
ಸುರತ್ಕಲ್ : ಇಲ್ಲಿನ ಕೆಂಜಾರು ಬಳಿ ನಿಲ್ಲಿಸಿದ್ದ ಗೂಡ್ಸ್ ವ್ಯಾಗನ್(ಎಲ್ಪಿಜಿ ಟ್ಯಾಂಕರ್) ಮೇಲೆ ಹತ್ತಿ ಸೆಲ್ಫಿ ತೆಗೆಯುತ್ತಿದ್ದ ವೇಳೆ ರೈಲ್ವೆ ವಿದ್ಯುತ್ ತಂತಿ ತಗುಲಿ ಬಾಲಕನಿಗೆ ಗಂಭೀರ ಸುಟ್ಟ ಗಾಯವಾದ ಘಟನೆ ಬುಧವಾರ ನಡೆದಿದೆ.
ಜೋಕಟ್ಟೆ ಎಚ್ಪಿಸಿಎಲ್ ಕಾಲನಿ ನಿವಾಸಿ ಮಹಮ್ಮದ್ ದಿಶಾನ್(15)ವಿದ್ಯುತ್ ಅಘಾತಕ್ಕೊಳಗಾದ ಬಾಲಕ.ಇತರ ಸ್ನೇಹಿತರೊಂದಿಗೆ ರೈಲ್ವೆ ವ್ಯಾಗನ್ ಬಳಿ ಆಟವಾಡುತ್ತಿದ್ದಾಗ ದಿಶಾನ್ ಸೆಲ್ಫಿ ತೆಗೆಯಲು ಮೇಲೆ ಹೋಗಿದ್ದ ಎನ್ನಲಾಗಿದೆ. ಈ ಸಂದರ್ಭ ವಿದ್ಯುತ್ ತಂತಿ ಗಮನಿಸದೆ ಆಕಸ್ಮಿಕವಾಗಿ ಹಿಂಭಾಗದಲ್ಲಿದ್ದ ವಿದ್ಯುತ್ ತಂತಿ ತಗುಲಿದೆ. ವಿದ್ಯುತ್ ಶಾಕ್ಗೆ ದಿಶಾನ್ನ ದೇಹ ಭಾಗಶಃ ಸುಟ್ಟು ಹೋಗಿದ್ದು, ವ್ಯಾಗನ್ ಮೇಲಿಂದ ಕೆಳಗೆ ಬಿದ್ದು ಗಾಯಗೊಂಡಿದ್ದು ಇತರ ಮಕ್ಕಳು ನೆರವಿವಾಗಿ ಕೂಗಿದಾಗ ಸ್ಥಳೀಯರು ಆಗಮಿಸಿ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾದರು.
ಇದನ್ನೂ ಓದಿ :ಕುಂಭ ಮೇಳ ಅರ್ಧಕ್ಕೆ ಮೊಟಕುಗೊಳಿಸುವ ಚರ್ಚೆ ನಡೆದಿಲ್ಲ ಎಂದ ಅಧಿಕಾರಿಗಳು
ಎಂಆರ್ಪಿಎಲ್ನಿಂದ ಅನಿಲ ತುಂಬಿಸಲು ಎ.13ರಂದು ಬಂದಿದ್ದ ವ್ಯಾಗನ್ ಎ.14ರಂದು 3.30ಕ್ಕೆ ಹೊರಡಲು ಅನುಮತಿ ಲಭಿಸಿತ್ತು.ರೈಲ್ವೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!
Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
MUST WATCH
ಹೊಸ ಸೇರ್ಪಡೆ
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!
Mumbai: 45 ದಿನದಲ್ಲಿ 300 ಐಸ್ಕ್ರೀಂ ಆರ್ಡರ್ ಮಾಡಿದ!
Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ