ತಾಳುವಿಕೆಗಿಂತನ್ಯ ತಪವು ಇಲ್ಲ


Team Udayavani, Apr 15, 2021, 6:40 AM IST

ತಾಳುವಿಕೆಗಿಂತನ್ಯ ತಪವು ಇಲ್ಲ

ಮಾತು ಮಾತಿಗೂ ತಾಳ್ಮೆ ಕೆಟ್ಟು ಸಿಟ್ಟಿನಿಂದ ವರ್ತಿಸಿ ಮನೆಯ ವರೊಡನೆ ಜಗಳವಾಡಿ ಕಂಡ ಕಂಡ ವಸ್ತುಗಳನ್ನೆಲ್ಲ ಅಲ್ಲಲ್ಲಿ ಎಸೆಯುತ್ತಿದ್ದ ಮಗನಿಗೆ ತಂದೆ ತಾಳ್ಮೆಯಿಂದ ಕಬ್ಬಿಣದ ಮೊಳೆ ತುಂಬಿದ ಚೀಲವೊಂದನ್ನು ಕೊಟ್ಟು ಸಿಟ್ಟು ಬಂದಾಗಲೆಲ್ಲ ಅದನ್ನು ಮನೆಯ ಹಿಂಭಾಗದ ಗೋಡೆಗೆ ಒಂದೊಂದನ್ನೇ ಹೊಡೆಯಲು ಹೇಳಿದ.

ಬಾಲಕ ಮರುದಿನದಿಂದಲೇ ತಂದೆಯ ಸಲಹೆಯನ್ನು ಅನುಸರಿಸಿದ. ಸಿಟ್ಟು ಬಂದಾ ಗಲೆಲ್ಲ ತನ್ನವರೊಂದಿಗೆ ಕಿರುಚಾಡು ವು ದನ್ನು ಬಿಟ್ಟು ಗೋಡೆಯ ಬಳಿ ಹೋಗಿ ಮೊಳೆ ಹೊಡೆಯಲು ಆರಂಭಿಸಿದ. ಮೊದಲ ದಿನ ಇಪ್ಪತ್ತು ಆಣಿಗಳನ್ನು ಗೋಡೆಯಲ್ಲಿ ಹೊಡೆದು ಬಂದ. ಮಾರನೆಯ ದಿನ ಹದಿನೆಂಟು, ಮತ್ತೆ ಹದಿನಾರು.. ಹೀಗೆ ದಿನ ಹೋದಂತೆಲ್ಲ ಗೋಡೆಗೆ ಹೊಡೆಯುವ ಆಣಿಗಳ ಸಂಖ್ಯೆ ಕಡಿಮೆಯಾಗುತ್ತ ಬಂತು. ಗಟ್ಟಿಯಾದ ಗೋಡೆಯಲ್ಲಿ ಕಬ್ಬಿಣದ ಆಣಿಗಳನ್ನು ಹೊಡೆದು ಕೂರಿಸುವ ಕಷ್ಟಕ್ಕಿಂತ ಸಿಟ್ಟನ್ನು ನಿಯಂತ್ರಿಸಿಕೊಳ್ಳುವುದೇ ಸುಲಭ ಅಂತ ಬಾಲಕನಿಗೆ ಅನಿಸಿಬಿಟ್ಟಿತು. ಈ ಕಷ್ಟದ ಕೆಲಸದಿಂದ ತಪ್ಪಿಸಿಕೊಳ್ಳುವ ನಿರ್ಧಾರ ಮಾಡಿ ಸಿಟ್ಟನ್ನು ನಿಯಂತ್ರಿಸತೊಡಗಿದ. ಕ್ರಮೇಣ ಸಿಟ್ಟು ಕಡಿಮೆಯಾಗಿ ಗೋಡೆಯಲ್ಲಿ ಒಂದು ಮೊಳೆಯನ್ನೂ ಹೊಡೆಯದ ದಿನವೊಂದು ಬಂದು ಬಿಟ್ಟಿತು. ಖುಷಿಯಿಂದ ತಂದೆಯ ಬಳಿ ಬಂದು ಇದನ್ನು ತಿಳಿಸಿದ.

ಪ್ರೀತಿಯಿಂದ ತಂದೆ ಮತ್ತೆ ಹೇಳಿದ, ಇನ್ನೂ ಕೆಲವು ಕಾಲ ಈ ಸಿಟ್ಟನ್ನು ನಿಯಂತ್ರ ಣದಲ್ಲಿ ಇರಿಸಿಕೊಳ್ಳಲು ಆ ಮೊಳೆಗಳನ್ನೆಲ್ಲ ನಿಧಾನವಾಗಿ ದಿನಕ್ಕೊಂದರಂತೆ ಜಾಗರೂ ಕತೆಯಿಂದ ತೆಗೆದು ಬಿಡು ಅಂತ. ಸಹನೆ ಯಿಂದ ಮಗ ಅದನ್ನೆಲ್ಲ ತೆಗೆಯಲು ಆರಂಭಿಸಿದ. ಗೋಡೆಯಲ್ಲಿ ಇದ್ದ ಮೊಳೆ ಯೆಲ್ಲ ಖಾಲಿಯಾಯಿತು. ಮತ್ತೆ ತಂದೆ ಯ ಬಳಿ ತೆರಳಿ ಈ ವಿಷಯ ತಿಳಿಸಿದ.

ಮಗನನ್ನು ತಂದೆ ಗೋಡೆಯ ಬಳಿ ಕರೆದು “ಒಳ್ಳೆಯ ಕೆಲಸವನ್ನೇ ಮಾಡಿದೆ ಮಗೂ. ಆದರೆ ಅಲ್ಲಿ ಉಳಿದ ಕಲೆಗಳನ್ನು ತೋರಿಸುತ್ತ ಗೋಡೆ ಮತ್ತೆ ಮೊದಲಿನ ಹಾಗೆಯೇ ಉಳಿದಿಲ್ಲ ನೋಡು’ ಎಂದ. ತೂತಿನಿಂದಾದ ಕಲೆಗಳು ಗೋಡೆಯನ್ನು ಹಾಳು ಮಾಡಿ ಬಿಟ್ಟಿವೆ.ಆ ಕಲೆಗಳು ತತ್‌ಕ್ಷಣ ಮಾಸಿ ಹೋಗಿಲ್ಲ. ಹಾಗೆಯೇ ಸಿಟ್ಟಿನಿಂದ ಆಡಿದ ಮಾತುಗಳು ಎಷ್ಟೇ ಕ್ಷಮೆ ಕೇಳಿದರೂ ಮನದಿಂದ ಮಾಸಿಹೋಗದು. ಅವುಗಳು ಸಣ್ಣದೊಂದು ಕಹಿಯನ್ನು ಉಳಿಸಿಯೇ ಬಿಡುತ್ತದೆ. ಆದುದರಿಂದ ತಾಳ್ಮೆ ಕಳೆದುಕೊಂಡು ಸಿಟ್ಟಿನ ಭರದಲ್ಲಿ ಮಾತನಾಡುವ ಮೊದಲು ಅದರ ಪರಿ ಣಾಮವನ್ನು ಯೋಚಿಸಬೇಕು. ರಕ್ತ ಬರುವಂತೆ ಚೂರಿಯಿಂದ ಚುಚ್ಚಿದ ಗಾಯ ಮಾಸಿ ಹೋದರೂ ಗಾಯದ ಕಲೆ ಮಾತ್ರ ಉಳಿದೇ ಬಿಡುತ್ತದೆ. ಹಾಗಾಗಿ ಕೋಪವನ್ನು ನಿಯಂತ್ರಣದಲ್ಲಿ ಇರಿಸಿ ಕೊಳ್ಳಲು ಪ್ರಯತ್ನಿಸಬೇಕು’ ಎಂದ.

ಈ ಕಥೆ ಆ ಬಾಲಕನಿಗೆ ಮಾತ್ರವಲ್ಲ, ನಮ್ಮೆಲ್ಲರ ಬದುಕಿಗೂ ಅನ್ವಯಿಸುತ್ತದೆ ಅಲ್ಲವೆ? ಕೆಲವೊಮ್ಮೆ ತಾಳ್ಮೆ ಕಳೆದುಕೊಂಡು ನಿಯಂತ್ರಣ ತಪ್ಪಿ ಬರುವ ಮಾತುಗಳು ಅಚ್ಚಳಿ ಯದ ನೋವನ್ನು ಉಳಿಸಿ ಹೋಗುತ್ತದೆ. ಅದೆಷ್ಟೋ ಬಾರಿ ಸಣ್ಣ ಪುಟ್ಟ ಮುಳ್ಳನ್ನು ತೆಗೆಯಲು ಬಟ್ಟೆ ಹೊಲಿಯುವ ಸೂಜಿಯ ಬದಲು ಗೋಣಿ ಹೊಲಿಯುವ ದಬ್ಬಣವನ್ನೇ ಉಪಯೋಗಿಸುತ್ತೇವೆ. ಮುಳ್ಳು ಹೋಗುವ ಬದಲು ಅದು ಒಂದಿಷ್ಟು ಗಾಯವನ್ನು ಉಂಟು ಮಾಡಬಹುದೆಂಬ ಅಪಾಯವನ್ನು ಮರೆತು ಬಿಡುತ್ತೇವೆ. ಸಿಟ್ಟಿನಲ್ಲಿ ಕಿರುಚಾಡುತ್ತೇವೆ. ಮಾತು, ಕೃತಿ ಎರಡೂ ನಿಯಂತ್ರಣ ತಪ್ಪುತ್ತದೆ. ಅನಾಹುತವಾಗುತ್ತದೆ.

ಬದುಕು ಸುಂದರವಾಗಿರಬೇಕೆಂದರೆ ಸಿಟ್ಟನ್ನು ನಿಯಂತ್ರಿಸಿಕೊಳ್ಳಲು ಪ್ರಯತ್ನಿಸ ಬೇಕು. ಸಿಟ್ಟಿನಲ್ಲಿರುವಾಗ ಯಾವ ಮಾತುಗಳನ್ನೂ ಆಡದೆ ಆದಷ್ಟು ಸುಮ್ಮನಿ ರಬೇಕು. ಆಡಿದ ಮಾತನ್ನು ಮರಳಿ ಪಡೆಯಲಾಗದು. ಗೋಡೆಯಲ್ಲಿ ಕಲೆಗಳು ಉಳಿದುಬಿಟ್ಟ ಹಾಗೆ ಸಿಟ್ಟಿನಿಂದ ಹೊರಬಿದ್ದ ಮಾತುಗಳು ಮನದ ಗೋಡೆಯಲ್ಲಿ ಕಲೆಗಳಾಗಿ ಅಚ್ಚೊತ್ತಿ ಬಿಡಬಹುದು. ಸಿಟ್ಟನ್ನು ತಣ್ಣಗಾಗಿಸುವ ದಾರಿ ಹುಡುಕಿ ಪ್ರಶಾಂತವಾಗಿರಲು ಕಲಿಯೋಣ.

– ವಿದ್ಯಾ ಅಮ್ಮಣ್ಣಾಯ, ಕಾಪು

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.