ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಅಣ್ಣಾವ್ರು ಕುಮಾರರಾಮ ಚಿತ್ರ ಮಾಡಬೇಕಿತ್ತು, ಆದ್ರೆ..!


Team Udayavani, Apr 15, 2021, 7:56 AM IST

ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಅಣ್ಣಾವ್ರು ಕುಮಾರರಾಮ ಚಿತ್ರ ಮಾಡಬೇಕಿತ್ತು, ಆದ್ರೆ..!

ಕನ್ನಡ ಚಿತ್ರರಂಗದ ಮಟ್ಟಿಗೆ ವರನಟ ಡಾ. ರಾಜಕುಮಾರ್‌ ಮಾಡದ ಪಾತ್ರಗಳಿಲ್ಲ ಅಂದ್ರೆ, ಅದು ಖಂಡಿತ ಅತಿಶಯೋಕ್ತಿ ಅಲ್ಲ. ಅದಕ್ಕೆ ಕಾರಣ ರಾಜಕುಮಾರ್‌, ಪೌರಾಣಿಕ ಪಾತ್ರಗಳಿಂದ ಹಿಡಿದು ಬಾಂಡ್‌ ಶೈಲಿಯ ಆ್ಯಕ್ಷನ್‌ ಪಾತ್ರಗಳವರೆಗೆ ಎಲ್ಲ ಪಾತ್ರಗಳನ್ನೂ ಲೀಲಾಜಾಲವಾಗಿ ನಿರ್ವಹಿಸಿರುವುದು.  ಆದರೆ, ಅಣ್ಣಾವ್ರ ಸಿನಿಜರ್ನಿಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಅವರಿಂದ ಸಿನಿಮಾ ಮಾಡಿಸಬೇಕು ಎಂದು ಪ್ರಯತ್ನಿಸಿ ಕೈಬಿಟ್ಟಿರುವ ಅನೇಕ ಪ್ರಾಜೆಕ್ಟ್ಗಳು ಅಲ್ಲಲ್ಲಿ ಸಾಕಷ್ಟು ಕಾಣಸಿಗುತ್ತವೆ. ಅಂಥ ಸಿನಿಮಾಗಳಲ್ಲಿ ಕುಮಾರ ರಾಮನ ಕಥೆ ಕೂಡ ಒಂದು.

ಹೌದು, ವಿಜಯನಗರ ಸಾಮ್ರಾಜ್ಯದ ನಂಟು ಹೊಂದಿದ್ದ, ಕಂಪ್ಲಿ ರಾಜ್ಯದ ರಾಜಕುಮಾರನಾದ ಕುಮಾರರಾಮನ ಕಥೆಯನ್ನು ಅಣ್ಣಾವ್ರ ಸಿನಿಮಾ ಮಾಡಬೇಕು ಎಂದು ನಿರ್ಧರಿಸಿ, ಈ ಸಿನಿಮಾಕ್ಕೆ ಬೇಕಾದ ಎಲ್ಲ ತಯಾರಿಯನ್ನೂ ಶುರು ಮಾಡಲಾಗಿತ್ತು. ಸ್ಕ್ರಿಪ್ಟ್ ಕೂಡ ರೆಡಿಯಾಗಿ, ಪೂಜೆಯೂ ಆಗಿತ್ತು. ಆದರೆ, ಆಮೇಲೆ ಕೆಲವು ಕಾರಣಗಳಿಂದ ಈ ಸಿನಿಮಾ ಮಾಡೋದು ಬೇಡ ಎಂದು ನಿಲ್ಲಿಸಲಾಯಿತು.

ಅದಕ್ಕೆ ಕಾರಣ ಈ ಚಿತ್ರದ ಕಥೆಯ ಎಳೆಯಲ್ಲಿ ಬರುವ ಸೂಕ್ಷ್ಮ ವಿಚಾರ. ಕುಮಾರರಾಮ ಮತ್ತು ರತ್ನಾಜಿ ಪ್ರೀತಿಸುತ್ತಾರೆ. ಆದರೆ, ಕುಮಾರರಾಮನ ತಂದೆ ರತ್ನಾಜಿಯನ್ನು ಮದುವೆ ಆಗಿಬಿಡುತ್ತಾರೆ. ಈ ಮದುವೆ ಬಳಿಕ ವರಸೆಯಲ್ಲಿ ಕುಮಾರರಾಮ ರತ್ನಾಜಿಗೆ ಮಗ ಆಗುತ್ತಾನೆ. ಪರನಾರಿ ಸಹೋದರನೆಂಬ ಖ್ಯಾತಿ ಹೊಂದಿದ್ದ ಕುಮಾರರಾಮ ರತ್ನಾಜಿಯನ್ನು ಚಿಕ್ಕಮ್ಮನಂತೆ ಕಾಣುತ್ತಾನೆ. ಮದುವೆ ನಂತರವೂ ರತ್ನಾಜಿ, ಕುಮಾರರಾಮನನ್ನು ಪೀಡಿಸುತ್ತಾಳೆ. ಚಿಕ್ಕಮ್ಮನೇ ಮಗನನ್ನು ಪ್ರೀತಿಸುವ, ವ್ಯಾಮೋಹಿಸುವ ಸನ್ನಿವೇಶಗಳು ಈ ಚಿತ್ರದಲ್ಲಿತ್ತು. ಹೀಗಾಗಿ ಚಿಕ್ಕಮ್ಮನನ್ನು ಪ್ರೀತಿಸುವ ಕುಮಾರರಾಮನ ಪಾತ್ರದಲ್ಲಿ ರಾಜಕುಮಾರ್‌ ಅವರನ್ನು ನೋಡಲು ಅಭಿಮಾನಿಗಳು ಒಪ್ಪುತ್ತಾರಾ ಎಂಬ ಚರ್ಚೆ ಜೋರಾಗಿ ಶುರುವಾಯ್ತು.

ಅಲ್ಲದೆ ದೆಹಲಿ ಸುಲ್ತಾನ ಮತ್ತು ಕುಮಾರರಾಮನ ನಡುವಿನ ಸನ್ನಿವೇಶಗಳಲ್ಲಿ ಸುಲ್ತಾನರಿಗೆ ಅಗೌರವ ತೋರಿಸುವ ದೃಶ್ಯಗಳಿದ್ದವು. ಆ ಸಮಯಕ್ಕೆ ಅದು ಸೂಕ್ಷ್ಮ ವಿಷಯವಾಗಿದ್ದರಿಂದ, ಹಿಂದೂ-ಮುಸ್ಲಿಂ ನಡುವೆ ವಿವಾದಕ್ಕೆ ಕಾರಣವಾಗಬಹುದು ಎಂಬ ಅಭಿಪ್ರಾಯವನ್ನು ಅನೇಕರು ವ್ಯಕ್ತಪಡಿಸಿದ್ದರು. ಇಂಥ ಪಾತ್ರವನ್ನು ಅಣ್ಣಾವ್ರ ಅಭಿಮಾನಿಗಳು ಹೇಗೆ ಸ್ವೀಕರಿಸಬಹುದು ಎಂಬ ಆತಂಕ ಶುರುವಾಯ್ತು. ಕೊನೆಗೆ ಈ ಸಿನಿಮಾವನ್ನು ಅಷ್ಟಕ್ಕೆ ನಿಲ್ಲಿಸಲಾಯಿತು.

ಅಂದಹಾಗೆ, ಇದೇ ಕಥೆಯನ್ನು ಇಟ್ಟುಕೊಂಡು, 2006ರಲ್ಲಿ ರಾಜಕುಮಾರ್‌ ಪುತ್ರ ಶಿವರಾಜಕುಮಾರ್‌ “ಗಂಡುಗಲಿ ಕುಮಾರರಾಮ’ ಎಂಬ ಹೆಸರಿನಲ್ಲಿ ಸಿನಿಮಾ ಮಾಡಿದರು. ಕುಮಾರ ರಾಮನ ಪಾತ್ರದಲ್ಲಿ ನಟ ಶಿವಣ್ಣ ಕಾಣಿಸಿಕೊಂಡರು. ಸಿನಿಮಾಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾದರೂ, ಸಿನಿಮಾ ಬಾಕ್ಸಾಫೀಸ್‌ನಲ್ಲಿ ಅಂದುಕೊಂಡ ಮಟ್ಟಿಗೆ ಸಕ್ಸಸ್‌ ಆಗಲಿಲ್ಲ. ಒಟ್ಟಾರೆ ರಾಜಕುಮಾರ್‌ ಸಿನಿಕೆರಿಯರ್‌ನಲ್ಲಿ ಇಂಥ ಅನೇಕ ಉದಾಹರಣೆಗಳು ಅಲ್ಲಲ್ಲಿ ಕಾಣಸಿಗುತ್ತದೆ.

ಟಾಪ್ ನ್ಯೂಸ್

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.