ಲಾರಿ-ಬೈಕ್ ಕಳ್ಳರ ಬೇಟೆಯಾಡಿದ ವಿಜಯಪುರ ಪೊಲೀಸರು 2 ಲಾರಿ, 13 ಬೈಕ್ ವಶ
Team Udayavani, Apr 15, 2021, 1:04 PM IST
ವಿಜಯಪುರ: ಜಿಲ್ಲೆಯ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು 2 ಲಾರಿ ಹಾಗೂ 13 ಬೈಕ್ ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಗುರುವಾರ ನಗರದ ಗೋಲಗುಂಬಜ ಪೊಲೀಸ್ ಠಾಣೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಎಸ್.ಪಿ. ಅನುಪಮ್ ಅಗರವಾಲ್, ನಗರದ ಅಸಾರಗಲ್ಲಿ ನಿವಾಸಿ ಮಹಿಬೂಬ್ ಹುಸೇನ್ ಹವಾಲ್ದಾರ್ ಹಾಗೂ ಕಲಬುರಗಿ ಜಿಲ್ಲೆಯ ಬಸವೇಶ್ವರ ಕಾಲೋನಿ ನಿವಾಸಿ ಮೊಹಮ್ಮದ್ ಆಸೀಫ್ ಶೇಖ್ ಲಾರಿ ಕಳ್ಳತನ ಆರೋಪದಲ್ಲಿ ಬಂಧಿತರು.
ಬಂಧಿತ ಆರೋಪಿಗಳಿಂದ 7.25 ಲಕ್ಷ ರೂ. ಮೌಲ್ಯದ 2 ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ವಿವರಿಸಿದರು.
ಇದನ್ನೂ ಓದಿ : ತಿಹಾರ್ ಜೈಲಿನಿಂದ ಕೋವಿಡ್ ಪೆರೋಲ್ ಮೇಲೆ ಹೊರ ಹೋದ ಸಾವಿರಾರು ಕೈದಿಗಳು ನಾಪತ್ತೆ!
ಇದಲ್ಲದೇ ಜಿಲ್ಲಾದ್ಯಂತ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ 7.50 ಲಕ್ಷ ರೂ. ಮೌಲ್ಯದ 13 ಬೈಕ್ ಗಳನ್ನು ಗೋಳಗುಂಬಜ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣಗಳಲ್ಲಿ ಗಾಂಧಿ ಸದಾಶಿವ ಎಮ್ಮೆ ಹಾಗೂ ಗಂಗಾಧರ ತುಕಾರಾಮ್ ಬಗಲಿ ಬಂಧಿಸಲಾಗಿದೆ.
ಸದರಿ ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದ ಡಿಎಸ್ಪಿ ಲಕ್ಷ್ಮೀನಾರಾಯಣ, ಸಿಪಿಐ ಬಸವರಾಜ ಮೂಕರ್ತಿಹಾಳ, ಎಸೈ ರಾಜೇಶ ಲಮಾಣಿ ಇವರ ನೇತೃತ್ವದ ಗೋಳಗುಂಬಜ ಪೊಲೀಸ್ ಠಾಣಾ ತನಿಖಾ ತಂಡ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಎಸ್ಪಿ ಅಗರವಾಲ್ ಪ್ರಶಸ್ತಿ ಪ್ರದಾನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Desi Swara: ಮಸ್ಕತ್- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ