ಸಂವಿಧಾನದ ಶಕ್ತಿ ಬಳಕೆಯಾಗಲಿ: ಪಾಟೀಲ
ದೇಶದ ಜನತೆ ಮೀಸಲಾತಿಯಡಿ ಸವಲತ್ತು ಪಡೆದುಕೊಂಡು ಮಾದರಿ ಜೀವನ ನಡೆಸಬೇಕು
Team Udayavani, Apr 15, 2021, 5:53 PM IST
ಅಫಜಲಪುರ: ಜಗತ್ತಿನ ಬಹು ದೊಡ್ಡ ರಾಷ್ಟ್ರವಾದ ಭಾರತ ದೇಶಕ್ಕೆ ಸರ್ವರಿಗೂ ಸಮಪಾಲು ಎಂಬಂತೆ ಡಾ| ಬಾಬಾ ಸಾಹೇಬ ಅಂಬೇಡ್ಕರ್ ಶ್ರೇಷ್ಠವಾದ ಸಂವಿಧಾನ ರಚಿಸಿದ್ದು, ಆಳುವ ಸರ್ಕಾರಗಳು ಸಂವಿಧಾನದ ಆಶಯವನ್ನು ಯಥಾವತ್ತಾಗಿ ಜಾರಿಗೆ ತಂದರೆ ಸಾಮಾಜಿಕ ನ್ಯಾಯ ಸಿಗುವುದರಲ್ಲಿ ಸಂದೇಹವೇ ಇಲ್ಲ ಎಂದು ಶಾಸಕ ಎಂ.ವೈ. ಪಾಟೀಲ ಹೇಳಿದರು.
ಪಟ್ಟಣದ ಡಾ| ಅಂಬೇಡ್ಕರ್ ವೃತ್ತದಲ್ಲಿ ಬಾಬಾ ಸಾಹೇಬ ಅಂಬೇಡ್ಕರ್ 130ನೇ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಗತ್ತಿನ ಇತಿಹಾಸದಲ್ಲಿ ಡಾ| ಅಂಬೇಡ್ಕರ್ ವಿಶ್ವದ ಬಹುತೇಕ ರಾಷ್ಟ್ರದ ಕಾನೂನುಗಳನ್ನು ಅಧ್ಯಯನ ಮಾಡಿ, ದೇಶದ ಜನತೆಗೆ ಸಾಮಾಜಿಕ ನ್ಯಾಯದ ತಳಹದಿಯಲ್ಲಿ ಸಂವಿಧಾನ ರಚನೆ ಮಾಡಿದ್ದಾರೆ. ಈಗಿನ ಯುವ ಪೀಳಿಗೆ ಅವರಂತಹ ಮಹಾನ್ ದಾರ್ಶನಿಕರ ತತ್ವಾದರ್ಶ ಮೈಗೂಡಿಸಿಕೊಂಡು, ಅವರ ಕನಸು ನನಸಾಗಿಸಬೇಕು ಎಂದರು.
ತಹಶೀಲ್ದಾರ್ ನಾಗಮ್ಮ ಕೆ., ಸಮಾಜ ಕಲ್ಯಾಣ ಅಧಿಕಾರಿ ಚೇತನ ಗುರಿಕಾರ, ಬಿಸಿಎಂ ಅಧಿಕಾರಿ ಕರಬಸಮ್ಮ ಮಾತನಾಡಿ, ದೇಶದ ಜನತೆ ಮೀಸಲಾತಿಯಡಿ ಸವಲತ್ತು ಪಡೆದುಕೊಂಡು ಮಾದರಿ ಜೀವನ ನಡೆಸಬೇಕು ಎಂದು ಹೇಳಿದರು.
ಜಿಪಂ ಮಾಜಿ ಸದಸ್ಯ ಪ್ರಕಾಶ ಜಮಾದಾರ, ಸಿದ್ದಾರ್ಥ ಬಸರಿಗಿಡ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಬಸವರಾಜ ಚಾಂದಕವಟೆ, ಪುರಸಭೆ ಮಾಜಿ ಅಧ್ಯಕ್ಷ ನಾಗಪ್ಪ ಆರೇಕರ್, ಡಾ| ಶಾಂತಲಿಂಗಪ್ಪ, ಮುಖಂಡರಾದ ಜೆ.ಎಂ. ಕೊರಬು, ರಾಜು ಪಾಟೀಲ, ಸಿಪಿಐ ಜಗದೇವಪ್ಪ ಪಾಳಾ, ಅಧಿಕಾರಿಗಳಾದ ಡಾ| ಸುಶೀಲ ಅಂಬೂರೆ, ವೈಜಣ್ಣ ಫುಲೆ, ಎಸ್.ಎಚ್. ಗಡಗಿಮನಿ, ಚಿತ್ರಶೇಖರ ದೆಗಲಮಡಿ ಇದ್ದರು. ರಾಜು ಆರೇಕರ್ ಪ್ರಾಸ್ತಾವಿಕ ಮಾತನಾಡಿದರು. ರವಿ ಗೌರ ಕಾರ್ಯಕ್ರಮ ನಿರೂಪಿಸಿದರು, ನಿಂಗು ಛಲವಾದಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ