ಇಸ್ರೋ ಗೂಢಚರ್ಯೆ ಪ್ರಕರಣ : ಸಿಬಿಐನಿಂದ ವಿಸ್ತೃತ ತನಿಖೆ ನಡೆಸಲು ಸುಪ್ರೀಂ ಆದೇಶ
Team Udayavani, Apr 15, 2021, 8:30 PM IST
ನವದೆಹಲಿ: ಇಸ್ರೋದಲ್ಲಿ 1994ರಲ್ಲಿ ಬೆಳಕಿಗೆ ಬಂದ ಗೂಢಚರ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐನಿಂದ ಮತ್ತಷ್ಟು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಈ ಪ್ರಕರಣದಲ್ಲಿ ನಿವೃತ್ತ ವಿಜ್ಞಾನಿ ನಂಬಿ ನಾರಾಯಣನ್ ಶಾಮೀಲಾಗಿದ್ದರು ಎಂಬ ಆರೋಪಕ್ಕೆ ಗುರಿಯಾಗಿದ್ದರು. ಅಲ್ಲದೆ, ಅವರನ್ನು ಪೊಲೀಸರು ಬಂಧಿಸಿ, ಚಿತ್ರಹಿಂಸೆ ನೀಡಿದ್ದರು ಎಂದು ಆರೋಪಕ್ಕೆ ಸಂಬಂಧಿಸಿ ಇತ್ತೀಚೆಗೆ ಉನ್ನತ ಮಟ್ಟದ ಸಮಿತಿಯೊಂದು ವರದಿ ಸಲ್ಲಿಸಿತ್ತು. ಹೀಗಾಗಿ, ಪೊಲೀಸರ ಕರ್ತವ್ಯಲೋಪದ ಬಗ್ಗೆ ಮತ್ತೂಮ್ಮೆ ವಿಸ್ತೃತ ತನಿಖೆಗೆ ಆದೇಶಿಸಬೇಕು ಎಂದು ಕೇಂದ್ರ ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎ.ಎಂ.ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ ಈ ತೀರ್ಮಾನ ಪ್ರಕಟಿಸಿದೆ.
ಜತೆಗೆ ನಿವೃತ್ತ ನ್ಯಾಯಮೂರ್ತಿ ಡಿ.ಕೆ.ಜೈನ್ ನೇತೃತ್ವದ ತ್ರಿಸದಸ್ಯ ಸಮಿತಿ ಸಲ್ಲಿಸಿದ ವರದಿಯನ್ನು ಮೊಹರು ಮಾಡಿದ ಲಕೋಟೆಯಲ್ಲಿಯೇ ಇರಿಸಬೇಕು. ಅದನ್ನು ಬಹಿರಂಗಗೊಳಿಸಬಾರದು ಎಂದೂ ನ್ಯಾಯಪೀಠ ಸೂಚಿಸಿದೆ.
ಇದನ್ನೂ ಓದಿ :ಧರ್ಮಶಾಲಾ : ಕರೇರಿಯ ಬೆಟ್ಟ ಪ್ರದೇಶದಲ್ಲಿ ಪಾಕ್ ಮೊಬೈಲ್ ಸಿಗ್ನಲ್ ಪತ್ತೆ!
ಪ್ರಕರಣದಲ್ಲಿ ತಮ್ಮ ವಾದ ಆಲಿಸಲಿಲ್ಲ ಎಂದು ವಿಶೇಷ ತನಿಖಾ ಸಮಿತಿಯ ಮುಖ್ಯಸ್ಥರಾಗಿದ್ದ ನಿವೃತ್ತ ಡಿಜಿಪಿ ಸಿಬಿ ಮ್ಯಾಥ್ಯೂಸ್ ಅರ್ಜಿಯನ್ನು ಪರಿಗಣಿಸಲು ನ್ಯಾಯಪೀಠ ನಿರಾಕರಿಸಿತು.
2018ರ ಸೆ.14ರಂದು ಕೇರಳ ಸರ್ಕಾರಕ್ಕೆ ನೀಡಿದ್ದ ಆದೇಶದಲ್ಲಿ ಆರೋಪಕ್ಕೆ ಗುರಿಯಾಗಿದ್ದ ನಿವೃತ್ತ ವಿಜ್ಞಾನಿ ನಂಬಿ ನಾರಾಯಣನ್ ಅವರಿಗೆ 50 ಲಕ್ಷ ರೂ. ಪರಿಹಾರ ನೀಡಬೇಕು. ಜತೆಗೆ ಸಮಿತಿಯೊಂದನ್ನು ರಚಿಸಿ ಪೊಲೀಸ್ ಇಲಾಖೆಯ ಕೆಲ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆಯೂ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ