ಕ್ಷೀರಪಥದ ಅಮೋಘ ಚಿತ್ರ ಬಿಡುಗಡೆಗೊಳಿಸಿದೆ ನಾಸಾ..!


Team Udayavani, Apr 16, 2021, 11:57 AM IST

nasa-released-milky-way-galaxy-images-taken-from-international-space-station

ವಾಷಿಂಗ್ಟನ್ : ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಸೆರೆಹಿಡಿಯಲಾದ ಮಿಲ್ಕಿ ವೇ ಗೆಲಾಕ್ಸಿಯ ಚಿತ್ರವೊಂದನ್ನು ನಾಸಾ (NASA – National Aeronautics and Space Administration) ತನ್ನ ಅಧಿಕೃತ ಇನ್ ಸ್ಟಾಗ್ರಾಂ ಖಾತೆಯಲ್ಲಿ ಪ್ರಕಟಿಸಿದೆ. ನಾಸಾ ಬಿಡುಗಡೆಗೊಳಿಸಿದ ಈ ಕುತೂಹಲಕಾರಿ ಚಿತ್ರ ಲಕ್ಷಾಂತರ ಮಂದಿಯ ಗಮನ ಸೆಳೆದಿದೆ.

ಓದಿ : ಕೊರೊನಾ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತುರ್ತು ಸಭೆ

ನಾವು ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಸೆರೆಹಿಡಿಯಲ್ಪಟ್ಟ ಮಿಲ್ಕಿ ವೇ ಗ್ಯಾಲಕ್ಸಿಯ ಚಿತ್ರವನ್ನು ನಾವು ಇಲ್ಲಿ ಪ್ರಕಟಿಸಿದ್ದೇವೆ. ಈ ಚಿತ್ರ ಎಲ್ಲವನ್ನೂ ವರ್ಣಿಸುತ್ತದೆ. ನಾವು ವಾಸಿಸುವ ಭೂಮಿಯೂ ಇದೇ ಮಿಲ್ಕಿ ವೇ ನಲ್ಲಿದೆ. ಎಂದು ನಾಸಾ ಅಡಿ ಟಿಪ್ಪಣಿಯೊಂದಿಗೆ ಈ ಚಿತ್ರವನ್ನು ಹಂಚಿಕೊಂಡಿದೆ.

ಇನ್ನು, ಕ್ಷೀರಪಥವು ನಮ್ಮ ಸೌರವ್ಯೂಹವನ್ನು ಒಳಗೊಂಡಿರುವ ಒಂದು  ನೀಹಾರಿಕೆ ಅಥವಾ  ಗ್ಯಾಲಕ್ಸಿ. ‘ಮಿಲ್ಕೀ ವೇ ಪದ ಲ್ಯಾಟಿನ್ ನ ‘ವಿಯಾ ಲಾಕ್ಟಿಯಾ’ ಎಂಬ ಪದದಿಂದ ಬಂದಿದೆ. ಈ ಗ್ಯಾಲಕ್ಸಿಯ ಆಕಾಶದಲ್ಲಿ ಅದರ ಗೋಚರತೆಯನ್ನು ನೋಡಿ, ಮಂದವಾಗಿ ಪ್ರಜ್ವಲಿಸುವ ಅದರ ಪಟ್ಟಿಯನ್ನು ಅನುಸರಿಸಿ ಕ್ಷೀರಪಥ ಅಥವಾ ಹಾಲು-ದಾರಿ/ಹಾಲಿನ ದಾರಿ, ಎಂಬ ಹೆಸರು ಎಂದು ಹೇಳಲಾಗುತ್ತದೆ.

ಭಾರತದಲ್ಲಿ ಅದನ್ನು “ಆಕಾಶಗಂಗೆ” ಎಂದು ಕರೆಯುವ ರೂಢಿಯೂ ಕೂಡ ಇದೆ. ಆಕಾಶದಿಂದ ಭೂಮಿಗೆ ಇಳಿಯುತ್ತಿರುವ ಗಂಗಾನದಿ /ಗಂಗಾಮಾತೆ ಎಂದು ಪ್ರಾಚೀನರು ಭಾವಿಸಿದ್ದರು. ಪೌರಾಣಿಕ ಕಥೆಯಲ್ಲಿ ಗಂಗೆಯು ವಿಷ್ಣುಸ್ವರೂಪ ತ್ರಿವಿಕ್ರಮನ ಪಾದದಲ್ಲಿ ಹುಟ್ಟಿ ಸ್ವರ್ಗದಲ್ಲಿ ಹರಿಯುವಳು. ನಂತರ ಬ್ರಹ್ಮನ ಕಲಶಸೇರಿ, ಕೈಲಾಸ ವಾಸಿಯಾದ ಶಿವನ ಜಟೆಯಲ್ಲಿದ್ದು, ನಂತರ ಭಗೀರಥನ ಪ್ರಯತ್ನದಿಂದ ಭೂಮಿಗೆ ಹರಿಯುವಳು. ಹಾಗಾಗಿ ಭಾರತದ ಪ್ರಾಚೀನರು ಈ ನಕ್ಷತ್ರಲೋಕದ ಬೆಳಕಿನ ಪಟ್ಟಿಯನ್ನು ಆಕಾಶಗಂಗೆ ಎಂದು ಕರೆದರು ಎಂದು ಹೇಳಲಾಗುತ್ತದೆ.

ಓದಿ : ಅಂಚೆ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತಕ್ಕೆ ವಿಧಿಸುವ ದಂಡ ಪ್ರಮಾಣ ಇಳಿಕೆ

ಟಾಪ್ ನ್ಯೂಸ್

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.