ರಾಮಮಂದಿರ ನಿರ್ಮಾಣ ದೇಣಿಗೆ: 22 ಕೋಟಿ ಮೊತ್ತದ 15 ಸಾವಿರ ಚೆಕ್ ಗಳು ಬೌನ್ಸ್
13 ಸಾವಿರ ಚೆಕ್ ಗಳು ದೇಶದ ವಿವಿಧ ಭಾಗಗಳಿಂದ ಸಂಗ್ರಹವಾಗಿರುವುದಾಗಿ ತಿಳಿಸಿದ್ದಾರೆ.
Team Udayavani, Apr 16, 2021, 1:42 PM IST
ನವದೆಹಲಿ:ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕಾಗಿ ದೇಶಾದ್ಯಂತ ದೇಣಿಯಾಗಿ ಸಂಗ್ರಹಿಸಿರುವ ಸುಮಾರು 22 ಕೋಟಿ ರೂಪಾಯಿ ಮೊತ್ತದ 15,000ಕ್ಕೂ ಅಧಿಕ ಚೆಕ್ ಗಳು ಬೌನ್ಸ್ ಆಗಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:ಮಾಸ್ಕ್ ಹಾಕಿಕೊಂಡ ದೇವಿ : ಈ ದೇವಾಲಯಕ್ಕೆ ಬರುವ ಭಕ್ತರಿಗೆ ಸಿಗುತ್ತೆ ವಿಶೇಷ ಪ್ರಸಾದ!
ರಾಮಮಂದಿರ ನಿರ್ಮಾಣಕ್ಕಾಗಿ ವಿಶ್ವಹಿಂದೂ ಪರಿಷತ್ ಮತ್ತು ಇತರ ಹಿಂದೂಪರ ಸಂಘಟನೆಗಳು ಸಂಗ್ರಹಿಸಿದ್ದ ವಿವಿಧ ಬ್ಯಾಂಕ್ ಗಳ 15,000ಕ್ಕೂ ಅಧಿಕ ಚೆಕ್ ಗಳು ಬೌನ್ಸ್ ಆಗಿದ್ದು, ಇದರ ಒಟ್ಟು ಮೊತ್ತ 22 ಕೋಟಿ ರೂಪಾಯಿ ಎಂದು ವರದಿ ವಿವರಿಸಿದೆ.
ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿರುವ ಶ್ರೀರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಡಿಟ್ ಮಾಡಿದ ವೇಳೆ ಈ ಘಟನೆ ಬೆಳಕಿಗೆ ಬಂದಿರುವುದಾಗಿ ವರದಿ ತಿಳಿಸಿದೆ.
ಖಾತೆಯಲ್ಲಿ ಹಣದ ಕೊರತೆ ಅಥವಾ ತಾಂತ್ರಿಕ ದೋಷದಿಂದ ಚೆಕ್ ಬೌನ್ಸ್ ಆಗಿರಬಹುದು ಎಂದು ಆಡಿಟ್ ವರದಿಯಲ್ಲಿ ತಿಳಿಸಿದೆ. ಈ ತಪ್ಪುಗಳನ್ನು ಸರಿಪಡಿಸಲು ಟ್ರಸ್ಟ್ ಬ್ಯಾಂಕ್ ಗಳ ಜತೆ ಸಂಪರ್ಕದಲ್ಲಿರುವುದಾಗಿ ಶ್ರೀರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸದಸ್ಯ ಡಾ.ಅನಿಲ್ ಮಿಶ್ರಾ ತಿಳಿಸಿದ್ದಾರೆ.
ಬೌನ್ಸ್ ಆಗಿರುವ 15 ಸಾವಿರ ಚೆಕ್ ಗಳಲ್ಲಿ ಸುಮಾರು 2000 ಚೆಕ್ ಗಳು ಅಯೋಧ್ಯೆಯಲ್ಲಿಯೇ ಸಂಗ್ರಹವಾಗಿರುವುದಾಗಿ ಟ್ರಸ್ಟ್ ನ ಕೋಶಾಧಿಕಾರಿ ಗೋವಿಂದ್ ದೇವ್ ಗಿರಿ ತಿಳಿಸಿದ್ದಾರೆ. ಇನ್ನುಳಿದ 13 ಸಾವಿರ ಚೆಕ್ ಗಳು ದೇಶದ ವಿವಿಧ ಭಾಗಗಳಿಂದ ಸಂಗ್ರಹವಾಗಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
Loksabha; ಮಂದಿರಕ್ಕೆ ಬಾಬರಿ ಲಾಕ್ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ
Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್ ವಿವಾದ
Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ
Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ
ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ
ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ