ಜನತೆಗೆ ಲಸಿಕೆ ಅರಿವು ಮೂಡಿಸಿ: ಡೀಸಿ


Team Udayavani, Apr 16, 2021, 3:12 PM IST

Make people aware of the vaccine

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ದಿನೇ ದಿನೆ ಕೊರೊನಾಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು,ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಜತೆಗೆ 45ವರ್ಷ ಮೇಲ್ಪಟ್ಟ ಎಲ್ಲರನ್ನೂ ಲಸಿಕಾ ಕೇಂದ್ರಕ್ಕೆ ಕರೆತಂದು ಲಸಿಕೆ ಹಾಕಿಸುವ ಕೆಲಸವನ್ನು ಆರೋಗ್ಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆ ಅಧಿಕಾರಿಗಳು ಮಾಡಬೇಕು ಎಂದು ಜಿಲ್ಲಾಧಿಕಾರಿ ಆರ್‌.ಲತಾ ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್‌-19 ಸೋಂಕುನಿಯಂತ್ರಿಸುವ ಸಲುವಾಗಿ ಕೋವಿಡ್‌ ಲಸಿಕೆ,ಕೋವಿಡ್‌ -19 ಕಣ್ಗಾವಲು, ಗಂಟಲು ದ್ರವಸಂಗ್ರಹ ಹಾಗೂ ಜಿಲ್ಲೆಯ ಎಲ್ಲಾ ತಹಶೀಲ್ದಾರ್‌,ಕಾರ್ಯನಿರ್ವಹಣಾಧಿಕಾರಿಗಳು, ಆರೋಗ್ಯಾಧಿಕಾರಿ ಗಳು, ನಗರಸಭೆ ಆಯುಕ್ತರು/ಮುಖ್ಯಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿ, ಪಿಡಿಒಗಳು, ಸಿಡಿಪಿಒ, ಇತರೆ ತಾಲೂಕು ಮಟ್ಟದಅಧಿಕಾರಿಗಳೊಂದಿಗೆ ಗುರುವಾರ ನಡೆದ ಜಿಲ್ಲಾಕೋವಿಡ್‌-19 ಲಸಿಕಾ ಟಾಸ್ಕ್ ಫೋರ್ಸ್‌ ಸಮಿತಿಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಧಿಕಾರಿಗಳೇ ಹೊಣೆ: ಜಿಲ್ಲೆಯಲ್ಲಿ ಕೊರೊನಾಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರತಿದಿನ ಸುಮಾರು 100 ಪ್ರಕರಣ ದಾಖಲಾಗುತ್ತಿದ್ದು, ಚಿಕ್ಕಬಳ್ಳಾಪುರ, ಚಿಂತಾಮಣಿ ಹಾಗೂ ಗೌರಿಬಿದನೂರಿನಲ್ಲಿ ಹೆಚ್ಚು ಪ್ರಕರಣ ಕಂಡುಬರುತ್ತಿವೆ. ಕೊರೊನಾ ನಿಯಂತ್ರಣ ವಿಷಯದಲ್ಲಿ ನಿರ್ಲಕ್ಷ್ಯಮಾಡಿದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಮಾಡಲಾಗುವುದು ಎಂದು ಎಚ್ಚರಿಸಿದರು.

ಲಸಿಕೆ ಹೆಚ್ಚಿಸಿ: ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಲಸಿಕೆಆಗುತ್ತಿಲ್ಲ. ಸರ್ಕಾರ ಪ್ರತಿ ನಿತ್ಯ 45 ವರ್ಷ ಮೇಲ್ಪಟ್ಟಕನಿಷ್ಠ 10,500 ಮಂದಿಗೆ ಲಸಿಕೆ ಹಾಕಬೇಕು ಎಂದುಗುರಿ ನಿಗದಿಪಡಿಸಿದೆ.

ಆದರೆ, ಪ್ರಸ್ತುತ 3 ಸಾವಿರಜನಕ್ಕೆ ಲಸಿಕೆ ವಿತರಣೆ ಆಗುತ್ತಿಲ್ಲ. ಜಿಲ್ಲೆಯಲ್ಲಿ ಪ್ರಸ್ತುತ30 ಸಾವಿರ ಮಂದಿಗೆ ಸಾಕಾಗುವಷ್ಟು ಲಸಿಕೆ ಲಭ್ಯವಿದೆ.ಇನ್ನೂ 20 ಸಾವಿರ ಮಂದಿಗೆ ಬೇಕಾಗುವಷ್ಟು ಲಸಿಕೆಸಂಜೆಯೊಳಗೆ ಬರಲಿದೆ ಎಂದರು.ಜಿಲ್ಲಾದ್ಯಂತ ಸುಮಾರು 3 ಲಕ್ಷ ಮಂದಿ 45 ವರ್ಷಮೇಲ್ಪಟ್ಟವರು ಇದ್ದಾರೆ. ಈ ಪೈಕಿ ಈವರೆಗೆ 1.30 ಲಕ್ಷಜನರಿಗೆ ಕೊರೊನಾ ಲಸಿಕೆ ಹಾಕಲಾಗಿದ್ದು, ಇನ್ನೂಶೇ.60 ಮಂದಿ ಲಸಿಕೆ ಹಾಕಿಸಿಕೊಳ್ಳಬೇಕಿದೆ.

ಇವರನ್ನುಮೊದಲು ಗುರ್ತಿಸಿ ಲಸಿಕೆ ಹಾಕಬೇಕು. ಉದಾಸೀನಮಾಡಬಾರದು ಎಂದು ಸೂಚಿಸಿದರು.ಸಹಕಾರ ಪಡೆಯಿರಿ: ಜಿಪಂ ಸಿಇಒ ಪಿ.ಶಿವಶಂಕರ್‌ಮಾತನಾಡಿ, ಆಯಾ ಪಂಚಾಯ್ತಿ ವ್ಯಾಪ್ತಿಗೆ ಬರುವಹಳ್ಳಿಗಳಲ್ಲಿ 45 ವರ್ಷ ಮೇಲ್ಪಟ್ಟವರನ್ನು ಗುರ್ತಿಸಿ,ಲಸಿಕೆ ಹಾಕಿಸಬೇಕು. ಇದಕ್ಕೆ ಆರೋಗ್ಯ ಇಲಾಖೆಅಧಿಕಾರಿಗಳು, ಶಾಲಾ ಶಿಕ್ಷಕರ ಸಹಕಾರಪಡೆದುಕೊಳ್ಳಬಹುದು ಎಂದರು.ಜಿಲ್ಲಾ ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌ಮಾತನಾಡಿ, ಮಾಸ್ಕ್ ಧರಿಸದೇ ಇರುವವರಿಗೆಮುಲಾಜಿಲ್ಲದೆ ದಂಡ ವಿಧಿಸಬೇಕು, ಜಿಲ್ಲೆಯಲ್ಲಿಎಲ್ಲೂ ಜಾತ್ರೆ, ಉತ್ಸವಗಳಿಗೆ ಅವಕಾಶನೀಡಬಾರದು, ಮುಸ್ಲಿಂ ಸಮುದಾಯದವರುಮುಂಬರುವ ರಂಜಾನ್‌ ಆಚರಣೆಗೆ ಸರ್ಕಾರದಮಾರ್ಗಸೂಚಿ ಪಾಲಿಸಬೇಕು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಎಚ್‌.ಅಮರೇಶ್‌, ಜಿಲ್ಲಾಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಯಲ್ಲಾರಮೇಶ್‌ಬಾಬು, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿಡಾ.ಚನ್ನಕೇಶವರೆಡ್ಡಿ, ಆರೋಗ್ಯ ಇಲಾಖೆಅಧಿಕಾರಿಗಳು ಇದ್ದರು

ಟಾಪ್ ನ್ಯೂಸ್

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

BJP 2

Muslim ಆ್ಯನಿಮೇಟೆಡ್‌ ವೀಡಿಯೋ ತೆಗದುಹಾಕಲು ಎಕ್ಸ್‌ಗೆ ಆಯೋಗ ಸೂಚನೆ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.