ಸಿಡಿ ಪ್ರಕರಣ : ಏ.20ರಂದು ವಿಚಾರಣೆಗೆ ಹಾಜರಾಗುವಂತೆ ರಮೇಶ್ ಜಾರಕಿಹೊಳಿಗೆ ಎಸ್ಐಟಿ ನೋಟಿಸ್
Team Udayavani, Apr 16, 2021, 9:56 PM IST
ಬೆಂಗಳೂರು: ಸಿಡಿ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ ಶುಕ್ರವಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಏ.20ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.
ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಸೋಂಕು ತಗುಲಿ ಸದ್ಯ ಹೋಮ್ ಕ್ವಾರಂಟೈನ್ನಲ್ಲಿರುವ ಹಿನ್ನೆಲೆಯಲ್ಲಿ ಅವರ ಪರವಾಗಿ ಸಹೋದರ ಬಾಲಚಂದ್ರ ಜಾರಕಿಹೊಳಿ ಎಸ್ಐಟಿಯಿಂದ ನೋಟಿಸ್ ಸ್ವೀಕರಿಸಿದ್ದಾರೆ.
ಈಗಾಗಲೇ ಸಿಡಿಯಲ್ಲಿರುವ ಯುವತಿಯನ್ನು ಹಲವು ಬಾರಿ ವಿಚಾರಣೆ ನಡೆಸಿರುವ ಎಸ್ಐಟಿ ಅಧಿಕಾರಿಗಳು ಸಿಡಿ ಕೇಸ್ನ ಹಿಂದಿನ ಹಲವು ರಹಸ್ಯಗಳನ್ನು ಕೆದಕಿ ಸಾಕ್ಷ್ಯ ಕಲೆ ಹಾಕಿದ್ದಾರೆ.
ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾದರೆ ಅವರಿಂದ ಯಾವೆಲ್ಲ ಮಾಹಿತಿ ಕಲೆ ಹಾಕಬೇಕು ಎಂಬ ಬಗ್ಗೆ ಈಗಾಗಲೇ ಸಿದ್ಧತೆ ನಡೆಸಲಾಗಿದೆ. ಅವರ ವಿಚಾರಣೆ ನಡೆಸಿದ ಬಳಿಕವಷ್ಟೇ ಪ್ರಕರಣದ ತನಿಖೆ ಪ್ರಗತಿ ಸಾಧಿಸಲಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ :ಏಪ್ರಿಲ್ 18 ರಂದು ಸಿಎಂ ಜೊತೆ ನಡೆಯಬೇಕಿದ್ದ ಸರ್ವಪಕ್ಷ ಸಭೆ ಮುಂದೂಡಿಕೆ!
ಎರಡು ದಿನಗಳ ಹಿಂದಷ್ಟೇ ಯುವತಿ ಪರ ವಕೀಲ ಸೂರ್ಯ ಮುಕುಂದ ರಾಜ್ ರಮೇಶ್ ಜಾರಕಿಹೊಳಿ ವಿಚಾರಣೆ ನಡೆಸುವವರೆಗೂ ತಮ್ಮ ಕಕ್ಷಿದಾರರಾದ ಯುವತಿ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೇ ಎಸ್ಐಟಿ ಅವರಿಗೆ ನೋಟಿಸ್ ಜಾರಿ ಮಾಡಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ