ವರ್ಚುವಲ್‌ ರ‍್ಯಾಲಿಗೆ ಆದ್ಯತೆ ನೀಡಿ: ಬಂಗಾಳದ ಸರ್ವಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ


Team Udayavani, Apr 16, 2021, 11:45 PM IST

ವರ್ಚುವಲ್‌ ರ‍್ಯಾಲಿಗೆ ಆದ್ಯತೆ ನೀಡಿ: ಬಂಗಾಳದ ಸರ್ವಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ

ಕೋಲ್ಕತ್ತಾ: ಬಾಕಿ ಇರುವ 3 ಹಂತದ ಚುನಾವಣಾ ಕ್ಷೇತ್ರಗಳಲ್ಲಿ ಆದಷ್ಟು ವರ್ಚುವಲ್‌ ರ‍್ಯಾಲಿಗಳಿಗೆ ಆದ್ಯತೆ ನೀಡುವಂತೆ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಸೂಚಿಸಿದೆ.

ಆಯೋಗ ನೇತೃತ್ವದಲ್ಲಿ ಶುಕ್ರವಾರ ಸರ್ವಪಕ್ಷ ಸಭೆ ಕರೆಯಲಾಗಿತ್ತು. ವರ್ಚುವಲ್‌ ಮೂಲಕ ರಾಜಕೀಯ ನಾಯಕರು ಭಾಷಣದಲ್ಲಿ ಪಾಲ್ಗೊಳ್ಳುವುದರಿಂದ ಬೃಹತ್‌ ಸಮಾವೇಶಗಳನ್ನು ತಪ್ಪಿಸಬಹುದು. ಇದು ಕೊರೊನಾ ಪ್ರಸರಣವನ್ನೂ ನಿಯಂತ್ರಿಸುತ್ತದೆ ಎಂದು ಆಯೋಗ ಅಭಿಪ್ರಾಯಪಟ್ಟಿದೆ. ಅಲ್ಲದೆ, ಮತದಾನಕ್ಕಿಂತ 72 ಗಂಟೆ ಮುಂಚೆ ಬಹಿರಂಗ ಪ್ರಚಾರಕ್ಕೆ ಕಡ್ಡಾಯವಾಗಿ ತೆರೆ ಎಳೆಯಲೂ ಸೂಚಿಸಿದೆ.

ಆಯೋಗದ ನಿಲುವನ್ನು ಬಿಜೆಪಿ ಸ್ವಾಗತಿಸಿದೆ. ಇದೇ ವೇಳೆ ತೃಣಮೂಲ ಕಾಂಗ್ರೆಸ್‌ ನಾಯಕಿ ಮಮತಾ ಬ್ಯಾನರ್ಜಿ, “ಕೊರೊನಾ ಪ್ರಕರಣಗಳ ಸಂಖ್ಯೆ ಅಧಿಕವಿರುವ ಗುಜರಾತ್‌ ನಂಥ ರಾಜ್ಯಗಳಿಂದ ಔಟ್‌ ಸೈಡರ್‌ ಪ್ರಚಾರಕರು ಇಲ್ಲಿಗೆ ಬಂದು ಸೋಂಕು ಹಬ್ಬಿಸುತ್ತಿದ್ದಾರೆ. ಇಂಥ ಔಟ್‌ ಸೈಡರ್‌ ಗಳಿಗೆ ನಿರ್ಬಂಧ ವಿಧಿಸಬೇಕು’ ಎಂದು ಸಲಹೆ ನೀಡಿದರು.

ಇದನ್ನೂ ಓದಿ :ಅಮೆರಿಕದಲ್ಲಿ ಶೂಟೌಟ್‌: ಭಾರತೀಯ ಮಹಿಳೆ ಸೇರಿ ಎಂಟು ಮಂದಿ ಸಾವು

ಇಂದು 5ನೇ ಹಂತ: ಶುಕ್ರವಾರದ 5ನೇ ಹಂತದಲ್ಲಿ 45 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 1.13 ಕೋಟಿ ಮತದಾರರು 342 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಉತ್ತರ 24 ಪರಗಣಾಸ್‌, ಪೂರ್ವ ವರ್ಧಮಾನ್‌, ನಾದಿಯಾ, ಜಲ್ಪೆಗುರಿ, ಡಾರ್ಜೀಲಿಂಗ್‌, ಕಲೀಂಪಾಂಗ್‌ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.

ಶಾ ರೋಡ್‌ ಶೋ: ಬರಕು³ರ, ಕೃಷ್ಣನಗರ ಉತ್ತರ ಕ್ಷೇತ್ರ ಸೇರಿದಂತೆ ವಿವಿಧೆಡೆ ಶುಕ್ರವಾರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ಪರವಾಗಿ ರೋಡ್‌ ಶೋ ನಡೆಸಿದರು.

ಇನ್ನೊಂದೆಡೆ, “ಸಿತಾಲ್ಕುಚಿಯಲ್ಲಿ ನಮ್ಮ ಆಟ ತೋರಿಸಿದ್ದೇವೆ. ನಾಲ್ವರಿಗೆ ಸ್ವರ್ಗದ ದಾರಿ ತೋರಿಸಿದ್ದೇವೆ’ ಎಂದು ವಿವಾದಿತ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಸಯಾಂತನು ಬಸು ಅವರಿಗೆ ಚುನಾವಣಾ ಆಯೋಗ 24 ಗಂಟೆ ಮತಪ್ರಚಾರದಿಂದ ದೂರ ಉಳಿಯುವಂತೆ ನಿಷೇಧ ವಿಧಿಸಿದೆ.

ಮಮತಾ ವಿರುದ್ಧ ಎಫ್ಐಆರ್‌
ಕೇಂದ್ರ ಪಡೆಗಳಿಗೆ ಘೇರಾವ್‌ ಹಾಕುವಂತೆ ಜನರನ್ನು ಪ್ರಚೋದಿಸಿದ ಆರೋಪದಡಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಆಯೋಗ ಎಫ್ಐಆರ್‌ ದಾಖಲಿಸಿದೆ. ಸಿತಾಲ್ಕುಚಿ ಗೋಲಿಬಾರ್‌ ಸಂಬಂಧ ಮಮತಾ ಈ ವಿವಾದಿತ ಹೇಳಿಕೆ ನೀಡಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.