2 ಕೋ.ರೂ. ವೆಚ್ಚದ ಬ್ರಿಡ್ಜ್ ಕಂ ಬ್ಯಾರೇಜ್‌ ಕಾಮಗಾರಿ ಪೂರ್ಣ


Team Udayavani, Apr 17, 2021, 4:30 AM IST

2 ಕೋ.ರೂ. ವೆಚ್ಚದ ಬ್ರಿಡ್ಜ್ ಕಂ ಬ್ಯಾರೇಜ್‌ ಕಾಮಗಾರಿ ಪೂರ್ಣ

ಬಂಟ್ವಾಳ: ಗ್ರಾಮೀಣ ಭಾಗಗಳ ಕೃಷಿ ನೀರಾವರಿ ಜತೆಗೆ ಅಂತರ್ಜಲ ವೃದ್ಧಿಗೆ ಕಿಂಡಿ ಅಣೆಕಟ್ಟುಗಳು ದೊಡ್ಡ ಕೊಡುಗೆಗಳನ್ನೇ ನೀಡಿದ್ದು, ಇದೀಗ ಸರಕಾರ ಕಿಂಡಿ ಅಣೆಕಟ್ಟಿನ ಜತೆಗೆ ಸೇತುವೆಯನ್ನೂ ನಿರ್ಮಿಸಿ ಒಂದೇ ಯೋಜನೆಯಲ್ಲಿ ಎರಡು ಪ್ರಯೋಜನಗಳನ್ನು ನೀಡುತ್ತಿದೆ. ಬಂಟ್ವಾಳದ ವಿಟ್ಲಪಟ್ನೂರು ಗ್ರಾಮದ ಎರ್ಮನಿಲೆಯಲ್ಲಿ ಇಂತಹದ್ದೇ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣಗೊಂಡು ಜನತೆಯ ಉಪಯೋಗಕ್ಕೆ ಮುಕ್ತಗೊಂಡಿದೆ.

ನೂತನ ಕಿಂಡಿ ಅಣೆಕಟ್ಟು/ಸೇತುವೆಯು ವಿಟ್ಲಪಟ್ನೂರು ಹಾಗೂ ಕೊಳ್ನಾಡು ಗ್ರಾಮವನ್ನು ಸಂಪರ್ಕಿಸಲಿದ್ದು, ಕೊಡಂಗಾಯಿ ಹೊಳೆಗೆ ಅಡ್ಡಲಾಗಿ ನಿರ್ಮಾಣಗೊಂಡಿದೆ. ವಿಟ್ಲಪಟ್ನೂರು ಗ್ರಾಮದ ಎರ್ಮನಿಲೆ ಪರಿಶಿಷ್ಟ ಜಾತಿ ಕಾಲನಿ ನಿವಾಸಿಗಳ ಅನುಕೂಲದ ದೃಷ್ಟಿಯಿಂದ ಇದು ನಿರ್ಮಾಣಗೊಂಡಿದೆ.

ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರ ಪ್ರಸ್ತಾವನೆಯಂತೆ ಸಣ್ಣ ನೀರಾವರಿ ಇಲಾಖೆಯ 2 ಕೋ.ರೂ.ವೆಚ್ಚದಲ್ಲಿ ಈ ಕಾಮಗಾರಿ ಪೂರ್ಣಗೊಂಡಿದ್ದು, ಇದೀಗ ಹಲಗೆ ಅಳವಡಿಕೆಯನ್ನೂ ಮಾಡಲಾಗಿದೆ. ಆದರೆ ಹಲಗೆ ಅಳವಡಿಕೆಯ ವೇಳೆ ಹೊಳೆಯಲ್ಲಿ ನೀರು ಬತ್ತಿ ಹೋಗಿದ್ದು, ನಿರಂತರ ಮಳೆ ಬಂದರೆ ನೀರು ತುಂಬಿಕೊಳ್ಳುವ ಸಾಧ್ಯತೆ ಇದೆ.

45.50 ಮೀ. ಉದ್ದದ ಸೇತುವೆ
ಎರ್ಮನಿಲೆಯಲ್ಲಿ ನಿರ್ಮಾಣಗೊಂಡಿರುವ ಬ್ರಿಡ್ಜ್ ಕಂ ಬ್ಯಾರೇಜ್‌ ಸುಮಾರು 45.50 ಮೀ. ಉದ್ದವನ್ನು ಹೊಂದಿದ್ದು, 3 ಮೀ. ಎತ್ತರಕ್ಕೆ ನೀರು ನಿಲ್ಲುವ ಸಾಮರ್ಥ್ಯವನ್ನು ಹೊಂದಿದೆ. ಹೊಳೆಯ ಎರಡೂ ಬದಿಗಳಲ್ಲೂ ಮಣ್ಣು ಕುಸಿಯದಂತೆ ತಡೆಗೋಡೆಯನ್ನೂ ನಿರ್ಮಾಣ ಮಾಡಲಾಗಿದೆ. ಸೇತುವೆಯ ಮೇಲ್ಭಾಗದಲ್ಲಿ 3 ಮೀ. ಅಗಲದ ಸ್ಲಾÂಬ್‌ ನಿರ್ಮಾಣವಾಗಿದ್ದು, ಲಘು ವಾಹನಗಳು(ಲೈಟ್‌ವೈಟ್‌ ವೆಹಿಕಲ್‌) ಮಾತ್ರ ಸಂಚರಿಸಬಹುದಾಗಿದೆ.

ಸೇತುವೆಯ ಎರಡೂ ಬದಿಗಳಲ್ಲೂ ಕಚ್ಚಾ ರಸ್ತೆಯಿದ್ದು, ಅದರ ದುರಸ್ತಿ ಕಾರ್ಯ ಇನ್ನಷ್ಟೇ ನಡೆಯಬೇಕಿದೆ. ಪ್ರಸ್ತುತ ಸಣ್ಣ ನೀರಾವರಿ ಇಲಾಖೆಯಲ್ಲಿ ರಸ್ತೆ ಅಭಿವೃದ್ಧಿಗೆ ಯಾವುದೇ ಅವಕಾಶಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡೂ ಗ್ರಾಮಗಳ ಕೃಷಿಕರಿಗೆ ಅನುಕೂಲ
ಕೊಳ್ನಾಡು ಗ್ರಾಮದ ಪೇರಪಡು³ ಹಾಗೂ ವಿಟ್ಲಪಟ್ನೂರು ಗ್ರಾಮದ ಎರ್ಮನಿಲೆ ಮಧ್ಯೆ ಈ ಕಿಂಡಿ ಅಣೆಕಟ್ಟು ನಿರ್ಮಾಣಗೊಂಡಿದ್ದು, ಎರಡೂ ಗ್ರಾಮಗಳ ಕೃಷಿಕರಿಗೆ ಅನುಕೂಲ
ವಾಗಲಿದೆ. ನೀರಿನ ನೇರ ಬಳಕೆಗಿಂತಲೂ ಅಂತರ್ಜಲ ವೃದ್ಧಿಯ ಜತೆಗೆ ಹೊಳೆ ಬದಿಯ ತೋಟಗಳಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ಎರ್ಮನಿಲೆಯಿಂದ ಮೂರ್ಕಾಜೆ ಭಾಗದವರೆಗೆ ಇಲ್ಲಿ ನೀರು ನಿಲ್ಲುವ ಸಾಧ್ಯತೆ ಇದೆ ಎಂದು ಸ್ಥಳೀಯರು ಅಭಿಪ್ರಾಯ ಪಡುತ್ತಾರೆ.

ಎಫ್‌ಆರ್‌ಪಿ ತಂತ್ರಜ್ಞಾನ
ಹಿಂದೆ ಸಾಮಾನ್ಯವಾಗಿ ಕಿಂಡಿ ಅಣೆಕಟ್ಟುಗಳಿಗೆ ಕಿರಾಲ್‌ ಬೋಗಿ ಮರಗಳ ಹಲಗೆಗಳನ್ನು ಹಾಕಿ ನೀರನ್ನು ತಡೆಯಲಾಗುತ್ತಿತ್ತು. ಆದರೆ ಅದಕ್ಕೆ ಬಾಳಿಕೆ ಕಡಿಮೆ. ಹೀಗಾಗಿ ಪ್ರಸ್ತುತ ನಿರ್ಮಾಣವಾಗುತ್ತಿರುವ ಕಿಂಡಿ ಅಣೆಕಟ್ಟುಗಳಿಗೆ ಇಲಾಖೆಯು ಪೈಬರ್‌ ತಂತ್ರಜ್ಞಾನದ ಹಲಗೆ(ಎಫ್‌ಆರ್‌ಪಿ)ಯನ್ನು ಅಳವಡಿಸುತ್ತಿದೆ. ಇದು ನೀರನ್ನು ಸಮರ್ಪಕವಾಗಿ ತಡೆಹಿಡಿಯುವ ಜತೆಗೆ ಹೆಚ್ಚು ಬಾಳಿಕೆ ಬರುವುದರಿಂದ ಎಫ್‌ಆರ್‌ಪಿ ಫ್ಲಾಂಕ್‌ಗಳನ್ನು ಅಳವಡಿಸುತ್ತಿರುವುದಾಗಿ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಮಳೆಗಾಲದಲ್ಲಿ ಈ ಫೈಬರ್‌ ಹಲಗೆಗಳನ್ನು ಇಡುವುದಕ್ಕೆ ಇಲಾಖೆಯಿಂದಲೇ ಗೋಡೌನ್‌ ಕೂಡ ನಿರ್ಮಾಣಗೊಂಡಿದೆ.

ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ
ನೀರಿನ ಬಳಕೆ, ಅಂತರ್ಜಲ ವೃದ್ಧಿ ಹಾಗೂ ಹೊಳೆ ದಾಟುವ ಸೇತುವೆಯಾಗಿ ಸುಮಾರು 2 ಕೋ.ರೂ.ವೆಚ್ಚದಲ್ಲಿ ಈ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣಗೊಂಡಿದೆ. ಮುಖ್ಯವಾಗಿ ವಿಟ್ಲಪಟ್ನೂರು ಗ್ರಾಮದ ಎರ್ಮನಿಲೆ ಪ.ಜಾ.ಕಾಲನಿಯ ನಿವಾಸಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ಕಿಂಡಿ ಅಣೆಕಟ್ಟು ನಿರ್ಮಾಣಗೊಂಡಿದೆ. ಪ್ರಸ್ತುತ ಹಲಗೆ ಅಳವಡಿಸುವ ಕಾರ್ಯವೂ ನಡೆದಿದೆ.
-ಶಿವಪ್ರಸನ್ನ, ಸಹಾಯಕ ಎಂಜಿನಿಯರ್‌ ಸಣ್ಣ ನೀರಾವರಿ ಇಲಾಖೆ, ಬಂಟ್ವಾಳ

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.