ಪಾರಂಪರಿಕ ತಾಣಗಳ ರಕ್ಷಣೆ ನಮ್ಮೆಲ್ಲರ ಹೊಣೆ : ಇಂದು ವಿಶ್ವ ಪರಂಪರೆ ದಿನ


Team Udayavani, Apr 18, 2021, 7:00 AM IST

ಪಾರಂಪರಿಕ ತಾಣಗಳ ರಕ್ಷಣೆ ನಮ್ಮೆಲ್ಲರ ಹೊಣೆ : ಇಂದು ವಿಶ್ವ ಪರಂಪರೆ ದಿನ

ಪಾರಂಪರಿಕ ಸ್ವತ್ತುಗಳು ಮತ್ತು ತಾಣಗಳ ಪ್ರಾಮುಖ್ಯವನ್ನು ಗುರುತಿಸಿ ಸಂರಕ್ಷಿಸುವ ಮತ್ತು ಇವುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ 1983ರಿಂದ ಯುನೆಸ್ಕೋದ ನೇತೃತ್ವದಲ್ಲಿ ವಿಶ್ವಾದ್ಯಂತ ಪ್ರತೀ ವರ್ಷ ಎಪ್ರಿಲ್‌ 18 ರಂದು ವಿಶ್ವ ಪರಂಪರೆ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಅಂಗವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಂಘಿಕ ಪ್ರಯತ್ನಗಳನ್ನು ನಡೆಸುವ ಮೂಲಕ ವಿಶ್ವದ ಪ್ರತಿಯೊಂದೂ ಭಾಗದಲ್ಲಿರುವ ಐತಿಹಾಸಿಕ ಸ್ಮಾರಕಗಳು ಮತ್ತು ತಾಣಗಳನ್ನು ರಕ್ಷಿಸುವ ಕಾರ್ಯವನ್ನು ಮಾಡಲಾಗುತ್ತಿದೆ.

1,121 ವಿಶ್ವದ ತಾಣಗಳು
ಈವರೆಗೆ ವಿಶ್ವದ 167 ರಾಷ್ಟ್ರಗಳ ಒಟ್ಟು 1,121 ತಾಣಗಳಿಗೆ ವಿಶ್ವ ಪರಂಪರೆಯ ತಾಣದ ಮಾನ್ಯತೆ ನೀಡಲಾಗಿದೆ. ಇವುಗಳ ಪೈಕಿ 869 ಸಾಂಸ್ಕೃತಿಕ ನೆಲೆಗಳಾಗಿದ್ದರೆ 213 ಪ್ರಾಕೃತಿಕ ತಾಣಗಳು ಮತ್ತು 39 ತಾಣಗಳು ಈ ಎರಡರ ಮಹತ್ವವನ್ನೂ ಹೊಂದಿವೆ.

ಈ ವರ್ಷದ ಧ್ಯೇಯವಾಕ್ಯ
“ಸಂಕೀರ್ಣ ಇತಿಹಾಸ, ವೈವಿಧ್ಯಮಯ ಭವಿಷ್ಯ’-ಎಲ್ಲ ಧರ್ಮದ ಜನರು ಭಿನ್ನಾಭಿಪ್ರಾಯಗಳೆಲ್ಲವನ್ನೂ ಬದಿಗಿರಿಸಿ ಒಗ್ಗೂಡಿ ಏಕತೆಯ ಸಂದೇಶವನ್ನು ಸಾರೋಣ ಎಂಬ ಧ್ಯೇಯದೊಂದಿಗೆ ಈ ಬಾರಿಯ ವಿಶ್ವ ಪರಂಪರೆ ದಿನವನ್ನು ಆಚರಿಸಲಾಗುತ್ತಿದೆ.

ಸೇರ್ಪಡೆ ಪ್ರಕ್ರಿಯೆ
ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಸೇರ್ಪಡೆಯಾದ ಸ್ಥಳಗಳು ಆಯಾಯ ದೇಶದ ಭಾಗವಾಗಿ ಉಳಿಯುತ್ತದೆ ಮತ್ತು ಅಂತಾರಾಷ್ಟ್ರೀಯ ಸಮುದಾಯದ ಹಿತದೃಷ್ಟಿಯಿಂದ ಅದರ ರಕ್ಷಣೆಗೆ ಯುನೆಸ್ಕೋ ನೆರವಾಗುತ್ತದೆ. ವಿಶ್ವ ಪಾರಂಪರಿಕ ತಾಣಗಳೆಂದು ಘೋಷಿಸಲ್ಪಡುವ ತಾಣಗಳು ಅರಣ್ಯ, ಪರ್ವತ, ಸರೋವರ, ಮರುಭೂಮಿ, ಸ್ಮಾರಕ, ಕಟ್ಟಡ, ಸಂಕೀರ್ಣ ಅಥವಾ ನಗರವೂ ಆಗಿರಬಹುದು. ಮೊದಲಿಗೆ ವಿಶ್ವ ಪಾರಂಪರಿಕ ಸಮಿತಿಗೆ ಪಟ್ಟಿಗೆ ಸೇರಿಸಬೇಕೆಂದಿರುವ ಸ್ಥಳದ ನಾಮ ನಿರ್ದೇಶನವನ್ನು ಮಾಡಬೇಕಾಗುತ್ತದೆ. ಇದನ್ನು ಆಯಾಯ ದೇಶಗಳು ಮಾಡುತ್ತವೆ. 21 ಸದಸ್ಯ ರಾಷ್ಟ್ರಗಳನ್ನೊಳಗೊಂಡ ಯುನೆಸ್ಕೋದ ವಿಶ್ವ ಪರಂಪರೆಯ ತಾಣ ಸಮಿತಿಯು ಈ ತಾಣಗಳ ಅರ್ಹತೆಯನ್ನು ಪರಿಶೀಲಿಸಿ ಸೂಕ್ತವಾದವುಗಳನ್ನು ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಸೇರ್ಪಡೆಗೊಳಿಸುತ್ತದೆ. ಈ ಸಮಿತಿಯ ಸದಸ್ಯತ್ವವು ನಿಗದಿತ ಅವಧಿಯದಾಗಿದ್ದು ಸದಸ್ಯರಾಷ್ಟ್ರಗಳು ಬದಲಾಗುತ್ತಿರುತ್ತವೆ.

ವಿಶ್ವ ಪಾರಂಪರಿಕ ತಾಣ ಎಂದರೇನು?
ವಿಶ್ವ ಪರಂಪರೆಯ ತಾಣಗಳನ್ನು ನೈಸರ್ಗಿಕ ಅಥವಾ ಮಾನವ ನಿರ್ಮಿತ ಪ್ರದೇಶಗಳು ಅಥವಾ ಅಂತಾರಾಷ್ಟ್ರೀಯ ಪ್ರಾಮುಖ್ಯದ ಮತ್ತು ವಿಶೇಷ ರಕ್ಷಣೆಯ ಅಗತ್ಯವಿರುವ ಸಾಂಸ್ಕೃತಿಕ, ನೈಸರ್ಗಿಕ ಮತ್ತು ಐತಿಹಾಸಿಕ ಸ್ಥಳ ಅಥವಾ ಕಟ್ಟಡಗಳೆಂದು ವರ್ಗೀಕರಿಸಲಾಗಿದೆ.

ಈ ತಾಣಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಮಂಡಳಿ (ಯುನೆಸ್ಕೋ) ಅಧಿಕೃತವಾಗಿ ಗುರುತಿಸಿ ವಿಶ್ವ ಪಾರಂಪರಿಕ ತಾಣಗಳೆಂದು ಘೋಷಿಸುತ್ತದೆ. ಈ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಿ ಅದನ್ನು ಮುಂದಿನ ತಲೆಮಾರಿಗೆ ಪರಿಚಯಿಸುವ ಉದ್ದೇಶದೊಂದಿಗೆ ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳನ್ನು ಗುರುತಿಸುವ ಪ್ರಕ್ರಿಯೆಯನ್ನು ಆರಂಭಿಸಿತು.

ಯುನೆಸ್ಕೋ ನೆರವು
ಪ್ರತಿ ವರ್ಷ ಪಟ್ಟಿಯಲ್ಲಿರುವ ತಾಣಗಳಿಗೆ ಅಂದಾಜು 20 ಕೋ. ರೂ. ನಿಧಿಯನ್ನು ಯುನೆಸ್ಕೋ ವ್ಯಯಿಸುತ್ತದೆ. ಈ ನಿಧಿ ಬಿಡುಗಡೆಯಾಗಬೇಕಾದರೆ ಸ್ಥಳೀಯ ಸರಕಾರ, ಖಾಸಗಿ ದಾನಿಗಳು ಆರ್ಥಿಕ ನೆರವು ನೀಡುವುದು ಕಡ್ಡಾಯವಾಗಿದೆ. ಯುನೆಸ್ಕೋ ಮಾರ್ಗಸೂಚಿಯಂತೆಯೇ ಈ ತಾಣಗಳಲ್ಲಿ ಎಲ್ಲ ಅಭಿವೃದ್ಧಿ ಅಥವಾ ಸಂರಕ್ಷಣ ಕಾಮಗಾರಿಗಳು ನಡೆಯಬೇಕು.

6ನೇ ಸ್ಥಾನದಲ್ಲಿ ಭಾರತ
ಪ್ರಸ್ತುತ ಭಾರತವು 38 ವಿಶ್ವ ಪಾರಂಪರಿಕ ತಾಣಗಳನ್ನು ಹೊಂದಿದೆ. ಈ ಮೂಲಕ ಭಾರತ ವಿಶ್ವದಲ್ಲಿಯೇ ಆರನೇ ಸ್ಥಾನದಲ್ಲಿದೆ. 38 ತಾಣಗಳ ಪೈಕಿ 30 ಸಾಂಸ್ಕೃತಿಕ, 7 ಪ್ರಾಕೃತಿಕ ಮತ್ತು ಒಂದು ಇವೆರಡರ ಮಹತ್ವವನ್ನೂ ಹೊಂದಿರುವ ತಾಣಗಳಾಗಿವೆ. “ವಿಶ್ವ ಪಾರಂಪರಿಕ ತಾಣ’ಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಭಾರತದಿಂದ ಶಾಂತಿನಿಕೇತನ ಮತ್ತು ಹೊಯ್ಸಳ ದೇವಾಲಯ ಸಮೂಹಗಳನ್ನು ಸೇರಿಸಲು ನಾಮನಿರ್ದೇಶನಕ್ಕೆ ಸಂಬಂಧಿಸಿದಂತೆ ಪೂರಕ ದಾಖಲೆಗಳನ್ನು ಯುನೆಸ್ಕೋಗೆ ಕಳುಹಿಸಲಾಗಿದೆ. ಇದಲ್ಲದೆ ದೇಶದ 42 ತಾಣಗಳನ್ನು ತಾತ್ಕಾಲಿಕ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.