ತುಳು ಸಿನಿಮಾ ನಿರ್ದೇಶಕ ರಘು ಶೆಟ್ಟಿ ನಿಧನ
Team Udayavani, Apr 18, 2021, 11:55 AM IST
ಮಂಗಳೂರು: ತುಳು ಚಿತ್ರರಂಗದ ಪ್ರತಿಭಾನ್ವಿತ ಯುವ ನಿರ್ದೇಶಕ ರಘು ಶೆಟ್ಟಿ (39 ವ) ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದರು.
ರಘು ಶೆಟ್ಟಿ ಅವರು “ಅರ್ಜುನ್ ವೆಡ್ಸ್ ಅಮೃತ” ಎಂಬ ತುಳು ಚಿತ್ರವನ್ನು ನಿರ್ದೇಶಿಸಿದ್ದರು. ಖಾಸಗಿ ವಾಹಿನಿಯಲ್ಲಿ ಉದ್ಯೋಗದಲ್ಲಿದ್ದ ಅವರು ಬಳಿಕ ತುಳು ಸಿನಿಮಾ ರಂಗದಲ್ಲಿ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ನಂತರ ಬೆಂಗಳೂರಿನಲ್ಲಿ ಹೊಟೇಲ್ ಉದ್ಯಮವನ್ನೂ ನಡೆಸಿದ್ದರು. ಈ ಮಧ್ಯೆ ಕನ್ನಡ ಚಿತ್ರವೊಂದರ ನಿರ್ದೇಶನದ ತಯಾರಿ ನಡೆಸಿದ್ದರು.
ಇದನ್ನೂ ಓದಿ:ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ನಿಧನ
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯವರಾದ ರಘು ಶೆಟ್ಟಿ ಶನಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ಕೋಸ್ಟಲ್ ವುಡ್ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಇದನ್ನೂ ಓದಿ: ಮತ್ತೊಂದು ಪ್ರತಿಷ್ಠಿತ ಕಂಪೆನಿಗೆ ರಶ್ಮಿಕಾ ಮಂದಣ್ಣ ರಾಯಭಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ