ಕೆಎಸ್ಸಾರ್ಟಿಸಿ ಓಡಾಟಕ್ಕೆ ಖಾಸಗಿ ಬಸ್‌ಗಳ ಆಕ್ರೋಶ


Team Udayavani, Apr 18, 2021, 12:56 PM IST

Outrage of private buses for KSARTC traffic

ಬೆಂಗಳೂರು: ವೇತನ ಪರಿಷ್ಕರಣೆಗೆ ಒತ್ತಾಯಿಸಿ ಸಾರಿಗೆಸಂಸ್ಥೆಯ ನೌಕರರು ನಡೆಸುತ್ತಿರುವ ಮುಷ್ಕರ ಭಾನುವಾರ 12ನೇ ದಿನಕ್ಕೆ ಕಾಲಿರಿಸಿದೆ. ಆದರೆ ಶನಿವಾರ ನಗರದ ಕೆಂಪೇಗೌಡ ಬಸ್‌ ನಿಲ್ದಾಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯದ ವಿವಿಧ ಕಡೆಗೆ ಸರ್ಕಾರಿ ಬಸ್‌ಗಳುಕಾರ್ಯಾಚರಣೆ ಆರಂಭಿಸಿದವು.

ಈ ಹಿನ್ನೆಲೆಯಲ್ಲಿಪ್ರಯಾಣಿಕರು ಖಾಸಗಿ ಬಸ್‌ ಬಿಟ್ಟು , ಸರ್ಕಾರಿ ಬಸ್‌ಏರಿದರು.ಖಾಸಗಿ ಬಸ್‌ ಮಾಲೀಕರು ಮತ್ತು ಸಿಬ್ಬಂದಿ ಕೆಎಸ್ಸಾರ್ಟಿಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೆಂಪೇಗೌಡ ಬಸ್‌ ನಿಲ್ದಾಣದೊಳಗಿನಿಂದ ಬಸ್‌ ಹೊರನಿಲ್ಲಿಸಿ ಪ್ರತಿಭಟಿಸಿದರು.

ಈ ವೇಳೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಮಧ್ಯಪ್ರವೇಶ ಮಾಡಿ ಖಾಸಗಿ ಬಸ್‌ ಮಾಲೀಕರ ಜತೆಗೆ ಮಾತುಕತೆ ನಡೆಸಿದರು.

ಖಾಸಗಿ ಬಸ್‌ನ ಮಾಲೀಕ ಚಂದ್ರು ಮಾತನಾಡಿ,ಕಳೆದ ಮೂರು ದಿನಗಳಿಂದ ಕೆಂಪೇಗೌಡ ಬಸ್‌ನಿಲ್ದಾಣದಿಂದ ಕೆಎಸ್ಸಾರ್ಟಿಸಿ ಬಸ್‌ಗಳು ರಾಜ್ಯದವಿವಿಧ ಜಿಲ್ಲೆಗಳೆಡೆಗೆ ಸಂಚಾರ ಮಾಡುತ್ತಿವೆ. ಹೀಗಾಗಿಖಾಸಗಿ ಬಸ್‌ ಹತ್ತಿದ ಜನರು ಕೆಎಸ್ಸಾರ್ಟಿಸಿ ಬಸ್‌ಬಂದ ತಕ್ಷಣ ಆ ಬಸ್‌ ಏರುತ್ತಾರೆ. ಖಾಸಗಿ ಬಸ್‌ಗಳಿಗೆ ಕಲೆಕ್ಷನ್‌ ಆಗುತ್ತಿಲ್ಲ, ಇದರಲ್ಲಿ ಸಾರಿಗೆ ಅಧಿಕಾರಿಗಳ ಕೈವಾಡವೂ ಇದೆ ಎಂದು ದೂರಿದರು.

ಅಧಿಕಾರಿಗಳ ವಿರುದ್ಧ ಅಸಮಾಧಾನ: ಪ್ರತಿ ಐದ ರಿಂದ ಹತ್ತು ನಿಮಿಷಗಳಿಗೊಮ್ಮೆ ಕೆಎಸ್ಸಾರ್ಟಿಸಿ ಬಸ್‌ಗಳು ಬೇರೆ ಬೇರೆ ಜಿಲ್ಲೆಗಳಿಗೆ ಪ್ರಯಾಣಿಸುತ್ತಿವೆ. ಸಾರಿಗೆ ಅಧಿಕಾರಿಗಳು ಪ್ರಯಾಣಿಕರನ್ನು ಕೆ ಎಸ್‌ಆರ್‌ಟಿಸಿ ಬಸ್‌ಗಳಿಗೆ ಹತ್ತಿಸುತ್ತಿದ್ದಾರೆ. ಇದರಿಂದಾಗಿ ಖಾಸಗಿ ಬಸ್‌ಗಳಿಗೆ ಜನ ಬರುತ್ತಿಲ್ಲ ಎಂದು ಅಯ್ಯಪ್ಪ ಟ್ರಾವೆಲ್ಸ್‌ನ ಸಿಬ್ಬಂದಿ ಸುರೇಶ್‌ ಅಸಮಾಧಾನ ವ್ಯಕ್ತಪಡಿಸಿದರು.

ಖಾಸಗಿ ಬಸ್‌ ಮಾಲೀಕರ ಜತೆ ಸಂಧಾನ ಸಫ‌ಲ ಸಮಸ್ಯೆಗೆ ಸ್ಪಂದಿಸಿದ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಖಾಸಗಿ ಬಸ್‌ ಮಾಲೀಕರ ಮತ್ತು ಸಿಬ್ಬಂದಿಗಳ ಜತೆಗೆ ಸಂಧಾನ ಸಭೆ ನಡೆಸಿದರು. ಒಂದು ಖಾಸಗಿ ಬಸ್‌ ತುಂಬಿ ಹೊರಟ ನಂತರ ಸರ್ಕಾರಿ ಬಸ್‌ಗೆ ಅವಕಾಶ ನೀಡುವುದಾಗಿ ಅಧಿಕಾರಿಗಳು ಭರವಸೆ ನೀಡಿದರು. ಈ ವೇಳೆ ಮಾತನಾಡಿದ ರಾಜ್ಯಪ್ರವಾಸೋದ್ಯಮ ಖಾಸಗಿ ಸಾರಿಗೆ ವಾಹನಗಳ ಮಾಲೀಕರ ಸಂಘದ ಅಧ್ಯಕ್ಷ ಭೈರವ ಸಿದ್ದರಾಮಯ್ಯ,ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಕಷ್ಟಕ್ಕೆ ನಾವು ಬೇಕಾಗಿದ್ದೆವು.ಈಗ ಬೇಡವಾಗಿದ್ದೇವೆ ಎಂದರು.

1,140 ಬಿಎಂಟಿಸಿ ಬಸ್‌ ಸಂಚಾರಸಾರಿಗೆ ಸಂಸ್ಥೆಯ ಮುಷ್ಕರದ ನಡುವೆ ಶನಿವಾರ ನಗರದ ವಿವಿಧಡೆಗೆ ಸುಮಾರು 1,140 ಬಸ್‌ಗಳ ಸಂಚಾರ ನಡೆಸಿದವು.ದೊಡ್ಡಬಳ್ಳಾಪುರ, ಜಿಗಣಿ, ಆವಲಹಳ್ಳಿ, ಹನುಮಂತನಗರ,ಬಿಡಿಎ ಪಾರ್ಕ್‌, ವಿಶ್ವನಾಥಪುರ, ಯಲಹಂಕ, ಕೆ.ಆರ್‌.ಪುರ,ಚಂದ್ರಾಲೇಔಟ್‌, ವಿಜಯನಗರ, ಮೈಸೂರು ರಸ್ತೆ, ಕೆಂಗೇರಿ,ಮಲತ್ತಹಳ್ಳಿ, ಅಂಬೇಡ್ಕರ್‌ ಕಾಲೇಜು, ಸುಜಾತ ಕೊಟ್ಟಿಗೆ ಪಾಳ್ಯಸೇರಿದಂತೆ ಮತ್ತಿತರರ ಕಡೆಗಳಿಗೆ ಬಿಎಂಟಿಸಿ ಬಸ್‌ಗಳುಪ್ರಯಾಣಿಕಕರನ್ನು ಹೊತ್ತು ಸಾಗಿದವು. ಹಾಗೆಯೇ ಪೀಣ್ಯಾ,ಮೈಸೂರು ರಸ್ತೆ, ಕೆಂಗೇರಿ, ನಾಯಂಡಹಳ್ಳಿ, ಚಂದ್ರಾಲೇಔಟ್‌,ವಿಜಯನಗರ ,ಕೆಂಗೇರಿ ಸೇರಿದಂತೆ ಮತ್ತಿತರ ಮಾರ್ಗಗಳಿಗೆಕೆ.ಆರ್‌.ಮಾರುಕಟ್ಟೆ ಪ್ರದೇಶದಿಂದ ಬಿಎಂಟಿಸಿ ಬಸ್‌ಗಳುಕಾರ್ಯಾಚರಣೆ ನಡೆಸಿದವು

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.