ದೇಶಕ್ಕೆ ಅವಳಿ ರೂಪಾಂತರಿ ಕಾಟ : ಡಬಲ್‌ ಮ್ಯುಟೆಂಟ್‌ಗೆ ಭಾರತವೇ ಮೂಲ


Team Udayavani, Apr 19, 2021, 7:20 AM IST

ದೇಶಕ್ಕೆ ಅವಳಿ ರೂಪಾಂತರಿ ಕಾಟ : ಡಬಲ್‌ ಮ್ಯುಟೆಂಟ್‌ಗೆ ಭಾರತವೇ ಮೂಲ

ಹೊಸದಿಲ್ಲಿ: ದೇಶದಲ್ಲಿ ಸೋಂಕು ಕ್ಷಿಪ್ರವಾಗಿ ಮತ್ತು ಮಾರಣಾಂತಿಕವಾಗಿ ವ್ಯಾಪಿಸು ತ್ತಿರುವುದಕ್ಕೆ ಇಲ್ಲೇ ಸೃಷ್ಟಿಯಾದ “ಅವಳಿ ರೂಪಾಂತರಿ’ (ಡಬಲ್‌ ಮ್ಯುಟೆಂಟ್‌) ವೈರಾಣು ಕಾರಣ ಎಂದು ಆರೋಗ್ಯ ತಜ್ಞರು ಅಂದಾಜಿಸಿದ್ದಾರೆ. ದಿನಕ್ಕೆ 2 ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸೋಂಕುಪೀಡಿತರನ್ನಾಗಿಸುತ್ತಿರುವ ಈ ರೂಪಾಂತರಿ ಹೆಚ್ಚು ಅಪಾಯಕಾರಿ ಯಾಗಿದ್ದು, ವೈರಸ್‌ನ ಹೊಸ ಸ್ವರೂಪಗಳ ಬಗ್ಗೆ ಮಾಹಿತಿ ಇಲ್ಲಿದೆ.

ಡಬಲ್‌ ಮ್ಯುಟೆಂಟ್‌ ಎಂದರೇನು?
ವೈರಸ್‌ನ ಇ 484 ಕ್ಯೂ ಮತ್ತು ಎಲ್‌ 452 ಆರ್‌ ಎಂಬ ಎರಡು ಸ್ವರೂಪಗಳು ಸೇರಿ ಸೃಷ್ಟಿಯಾದ ಹೊಸ ರೂಪಾಂತರಿ ಬಿ.1.617. ಈ ಪೈಕಿ ಎಲ್‌452ಆರ್‌ ಮೊದಲು ಕಂಡುಬಂದದ್ದು ಅಮೆರಿಕದಲ್ಲಿ. ಆದರೆ ಇ484ಕ್ಯೂ ಸೃಷ್ಟಿಯಾದದ್ದು ಭಾರತದಲ್ಲಿ. ಇವೆರಡೂ ಸೇರಿ ಈಗ ಭಾರತದಲ್ಲಿ ಸೋಂಕು ಸ್ಫೋಟಗೊಳ್ಳುವಂತೆ ಮಾಡುತ್ತಿವೆ. ಆರಂಭದಲ್ಲಿ ಮಹಾರಾಷ್ಟ್ರ, ಪಂಜಾಬ್‌ ಮತ್ತು ದಿಲ್ಲಿಯ ಸೋಂಕುಪೀಡಿತರ ಮಾದರಿಗಳಲ್ಲಿ ಈ ಅವಳಿ ರೂಪಾಂತರಿ ಪತ್ತೆಯಾಗಿತ್ತು. ಈಗ ಇದು ಕರ್ನಾಟಕ ಸೇರಿ 10 ರಾಜ್ಯಗಳಿಗೆ ಹಬ್ಬಿದೆ.

ಅಪಾಯ ಕಾರಿಯೇ?
ಖಂಡಿತ. ಈ ಡಬಲ್‌ ಮ್ಯುಟೆಂಟ್‌ ವೈರಸ್‌ನಿಂದಾಗಿ ದೇಶಾದ್ಯಂತ ಈ ರೀತಿ ವೇಗವಾಗಿ ಸೋಂಕು ಹಬ್ಬುತ್ತಿದೆ. ಇದು ಕ್ಷಿಪ್ರವಾಗಿ ಹರಡುತ್ತದೆ ಮಾತ್ರವಲ್ಲ, ಅದನ್ನು ತಟಸ್ಥಗೊಳಿ ಸುವುದೂ ಕಷ್ಟ.

ಲಸಿಕೆ ಪರಿಣಾಮಕಾರಿಯೇ?
ಈ ಕುರಿತ ಪರೀಕ್ಷೆ ಮತ್ತು ಅಧ್ಯಯನ ಇನ್ನೂ ನಡೆಯುತ್ತಿವೆ. ವೈರಾಣುವಿನ ಸ್ಪೈಕ್‌ ಪ್ರೊಟೀನ್‌ ಅನ್ನು ಗುರಿಯಾಗಿಸಿ ಕೊವಿಶೀಲ್ಡ್‌ ಲಸಿಕೆ ಅಭಿವೃದ್ಧಿಪಡಿಸಲಾಗಿದೆ. ಅವಳಿ ರೂಪಾಂತರಿಯ ಮೇಲೆ ಕೊವಿಶೀಲ್ಡ್‌ ಹೇಗೆ ಪರಿಣಾಮಕಾರಿ ಎಂಬುದು ಅಧ್ಯಯನದ ಬಳಿಕವೇ ತಿಳಿಯಲಿದೆ. ಕೊವ್ಯಾಕ್ಸಿನ್‌ ಲಸಿಕೆ ದೇಹದಲ್ಲಿ ಪ್ರತಿಕಾಯಗಳು ಸೃಷ್ಟಿಯಾಗುವಂತೆ ಹೆಚ್ಚು ವೈರಲ್‌ ಆ್ಯಂಟಿಜೆನ್‌ಒದಗಿಸುತ್ತದೆ. ಹೀಗಾಗಿ ಇದು ರೂಪಾಂತರಿ ವಿರುದ್ಧ ಪರಿಣಾಮಕಾರಿ ಆಗಿರಬಹುದು ಎನ್ನಲಾಗಿದೆ.

ಇಷ್ಟೊಂದು ಪ್ರಕರಣಗಳೇಕೆ?
ಎಲ್ಲ ಲಸಿಕೆಗಳೂ ಕೊರೊನಾದ ಗಂಭೀರ ಪರಿಣಾಮ ಮತ್ತು ಸಾವಿನಿಂದ ರಕ್ಷಿಸುತ್ತವೆಯೇ ವಿನಾ ಸೋಂಕಿನಿಂದ ಅಲ್ಲ. ಹೀಗಾಗಿ ಅಲ್ಪ ಪ್ರಮಾಣದಲ್ಲಿ ಸೋಂಕು ತಗಲುವ ಸಾಧ್ಯತೆ ಇರುತ್ತದೆ. ಆದರೆ ಲಸಿಕೆ ಸ್ವೀಕರಿಸುವುದರಿಂದ ದೇಹದಲ್ಲಿ ಪ್ರಬಲ ಪ್ರತಿಕಾಯಗಳು ಸೃಷ್ಟಿಯಾಗುತ್ತವೆ.

ಬೂಸ್ಟರ್‌ ಲಸಿಕೆ ಅಗತ್ಯವೇ?
ಹೌದು. ಲಸಿಕೆಯ ಮೊದಲ ಡೋಸ್‌ ರೋಗನಿರೋಧಕ ವ್ಯವಸ್ಥೆಯನ್ನು ಪ್ರತಿರೋಧಕ್ಕೆ ಸಿದ್ಧಗೊಳಿಸುತ್ತದೆ. ಎರಡನೇ ಡೋಸ್‌ ರೋಗನಿರೋಧಕ ಶಕ್ತಿ ಯನ್ನು ವೃದ್ಧಿಗೊಳಿಸಿ, ಸೋಂಕಿನ ವಿರುದ್ಧದ ಹೋರಾಟಕ್ಕೆ ಶಕ್ತಿ ತುಂಬುತ್ತದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.