ಕಂಬಳದ ಪಯಣ ಕೊನೆಗೊಳಿಸಿ ಕಾಲನ ಕರೆಗೆ ಓಗೊಟ್ಟ ‘ಬೋಳಂತೂರು ಕಾಟಿ’


Team Udayavani, Apr 19, 2021, 9:51 AM IST

ಕಂಬಳದ ಪಯಣ ಕೊನೆಗೊಳಿಸಿ ಕಾಲನ ಕರೆಗೆ ಓಗೊಟ್ಟ ‘ಬೋಳಂತೂರು ಕಾಟಿ’

ಮಣಿಪಾಲ: ‘ಬೋಳಂತೂರು ಕಾಟಿ’ ಕಂಬಳದ ಇತಿಹಾಸದಲ್ಲಿ ದೊಡ್ಡ ಸಾಧನೆ ಮಾಡಿದ ಕೋಣ. ಹಲವು ವರ್ಷಗಳ ಕಾಲ ಚಿಗರೆಯಂತೆ ಕಂಬಳದ ಕೆಸರು ನೀರಿನಲ್ಲಿ ಓಡಿದ ಕಾಟಿ, ಇಂದು ವಯೋಸಹಜ ಅನಾರೋಗ್ಯಕ್ಕೆ ತುತ್ತಾಗಿ ಅಸುನೀಗಿದೆ.

28 ವರ್ಷ ಪ್ರಾಯದ ಕಾಟಿ, ಕಳೆದ 20 ವರ್ಷಗಳಿಂದ ಬೋಳಂತೂರು ಮನೆಯಲ್ಲಿ ಇದ್ದಾತ. ಕಂಬಳ ಕ್ಷೇತ್ರದಲ್ಲಿ ದಿ.ಬೋಳಂತೂರು ಗಂಗಾಧರ ರೈಗಳ ಹೆಸರು ಹೇಗೋ, ಅದೇ ಪ್ರಸಿದ್ದಿ ಪಡೆದ ಕೋಣ ಈ ಕಾಟಿ.

ಬಾಲ್ಯದಲ್ಲಿ ಕಾಟಿಯನ್ನು ಪೋಷಿಸಿದವರು ಬಾರ್ಕೂರು ದೇವದಾಸ ಗಡಿಯಾರ್ ಅವರು. ನೇಗಿಲು ಕಿರಿಯ ವಿಭಾಗದಲ್ಲಿ ಕಂಬಳ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ ಕಾಟಿ, ಶಿರ್ವ ಕಂಬಳದಲ್ಲಿ ಮೊದಲ ಸಲ ಬಹುಮಾನ ಪಡೆದಿದ್ದ. ಅಂದು ಕಾಟಿಗೆ ಸಾರಥಿಯಾಗಿದ್ದು, ಶಿರ್ವ ವಿಶ್ವನಾಥ್ ಪ್ರಭು.

ಇದನ್ನೂ ಓದಿ: ಕಂಬಳ ಕರೆಗೆ ಇಳಿದ ಬಾಲಕಿ : ಆರನೇ ತರಗತಿ ವಿದ್ಯಾರ್ಥಿನಿ ಚೈತ್ರಾಳ ಚಿತ್ತ ಕಂಬಳದತ್ತ!

ಮುಂದೆ ಮೂರು ವರ್ಷ ಕಿರಿಯ ನೇಗಿಲು ವಿಭಾಗದಲ್ಲಿ ಕಾಟಿಯದ್ದೇ ಪಾರುಪತ್ಯ. ಆದರೆ ಕಾಟಿಗೆ ಜೋಡಿಯಾಗಿ ಓಡಲು ಸರಿಯಾದ ಕೋಣಗಳೇ ಸಿಗುತ್ತಿರಲಿಲ್ಲ. ಹಾಗಾಗಿ ಮೂರು ವರ್ಷದಲ್ಲಿ ನಾಲ್ಕು ಕೋಣಗಳ ಜೋಡಿಯಾಗಿ ಕಾಟಿ ಓಡಿದ್ದ. ಮುಂದೆ ಸೀನಿಯರ್ ವಿಭಾಗಕ್ಕೆ ಅರ್ಹತೆ ಪಡೆದ ಕಾಟಿಗೆ ಸರಿಯಾದ ಜೋಡಿಯ ಹುಡುಕಾಟದಲ್ಲಿದ್ದಾಗ ಬಾರ್ಕೂರು ಶಾಂತರಾಮ ಶೆಟ್ಟರು ಬಾರ್ಕೂರು ದೇವದಾಸ ಗಡಿಯಾರ್ ರೊಂದಿಗೆ ಕೈಜೋಡಿಸಿದ್ದರು. ಶಾಂತಾರಾಮ ಶೆಟ್ಟರ ‘ಮೋಡ’ ಕೋಣದ ಜೊತೆ ನೇಗಿಲು ಹಿರಿಯ ವಿಭಾಗದಲ್ಲಿ ಕಾಟಿಯ ಓಟ. ಅದರ ವೇಗ ಎಷ್ಟಿತ್ತೆಂದರೆ ಹಿರಿಯ ವಿಭಾಗಕ್ಕೆ ಅರ್ಹತೆ ಪಡೆದ ಮೊದಲ ವರ್ಷವೇ ‘ಚಾಂಪಿಯನ್ ಇಯರ್ ಆಫ್ ದಿ ಪುರಸ್ಕಾರ’

1998ರಲ್ಲಿ ಬೆಳುವಾಯಿ ಸದಾನಂದ ಶೆಟ್ಟಿಯವರು ಕಾಟಿಯನ್ನು ತಮ್ಮ ಬಳಗಕ್ಕೆ ಸೇರಿಸಿಕೊಂಡರು. ಅವರ ‘ಮಾತಿಬೆಟ್ಟು’ ಎಂಬ ಕೋಣದ ಜೊತೆ ಸೇರಿದ ಕಾಟಿ ಹಗ್ಗ ಹಿರಿಯ ವಿಭಾಗಕ್ಕೆ ಬಂದಿದ್ದ. ಅಲ್ಲೂ ಕಾಟಿಯ ಪರಾಕ್ರಮ ಮುಂದುವರಿದಿತ್ತು.

ಇದನ್ನೂ ಓದಿ:  ಐಕಳ ಕಂಬಳ ಕರೆಯಲ್ಲಿ ಬೋಳದಗುತ್ತು ರಾಕೆಟ್ ಬೊಲ್ಲ- ಧೋನಿ ಕೋಣಗಳ ದಾಖಲೆ ಓಟ

2001ರಲ್ಲಿ ಬೋಳಂತೂರು ಗಂಗಾಧರ ರೈ ಅವರು ಕಾಟಿ- ಮಾತಿಬೆಟ್ಟು ಜೋಡಿಯನ್ನು ಖರೀದಿಸಿದರು. ಈದು ಪಡ್ಯಾರು ಅಶೋಕ್ ಜೈನರು ಈ ಕೋಣಗಳನ್ನು ಓಡಿಸುತ್ತಿದ್ದರು. ಬೋಳಂತೂರು ಬಳಗಕ್ಕೆ ಸೇರಿದ ಕಾಟಿ ಮುಂದೆ ಸತತ ಮೂರು ವರ್ಷ ಚಾಂಪಿಯನ್ ಆಫ್ ದಿ ಇಯರ್ ಪ್ರಶಸ್ತಿ ಪಡೆದಿದ್ದ. ಮುಂದೆ 2012ರವರೆಗೂ ಹಗ್ಗ ಹಿರಿಯ ವಿಭಾಗದಲ್ಲಿ ಪ್ರಶಸ್ತಿ ಬೇಟೆ ಮುಂದುವರಿಸಿದ ಕಾಟಿ, 2015ರಲ್ಲಿ ಕನೆಹಲಗೆ ವಿಭಾಗಕ್ಕೆ ಎಂಟ್ರಿ ಕೊಟ್ಟು ಅಲ್ಲೂ ಪ್ರಶಸ್ತಿ ಪಡೆದಿದ್ದ.

ಮೂರು ವರ್ಷದ ಹಿಂದೆ ಪುತ್ತೂರು ಕೋಟಿ- ಚೆನ್ನಯ ಕಂಬಳದ 25ನೇ ವರ್ಷಾಚರಣೆ ಸಂದರ್ಭದಲ್ಲಿ ಬೋಳಂತೂರು ಕಾಟಿಗೂ 25 ವರ್ಷ. ಆಗ ಕಾಟಿಗೆ ಅದ್ದೂರಿ ಸನ್ಮಾನ ಮಾಡಲಾಗಿತ್ತು.

ಕಳೆದ ಕೆಲವು ವರ್ಷಗಳಿಂದ ವಿಶ್ರಾಂತಿಯಲ್ಲಿದ್ದ ಬೋಳಂತೂರು ಕಾಟಿ ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿತ್ತು. ಸೋಮವಾರ ಬೆಳಗ್ಗೆ ಅಸುನೀಗಿದೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.