ಸ್ಟ್ರಾಂಗ್‌ ರೂಂ ಸೇರಿದ ಮತಯಂತ್ರ-ಭದ್ರತೆ

ಬಾಬು ಅಡ್ಡಂಕಿ ಜತೆ ಅನೇಕ ಅಧಿಕಾರಿಗಳು ವಿವಿಧ ಪಕ್ಷಗಳ ಮುಖಂಡರು ಭೇಟಿ ನೀಡಿ ಪರಿಶೀಲಿಸಿದರು.

Team Udayavani, Apr 19, 2021, 6:48 PM IST

Poll

ರಾಯಚೂರು: ಮಸ್ಕಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಬಳಿಕ ಎಲ್ಲ ಮತಯಂತ್ರಗಳನ್ನು ನಗರದ ಎಸ್‌ಆರ್‌ಪಿಎಸ್‌ ಕಾಲೇಜಿನಲ್ಲಿ ಸ್ಥಾಪಿಸಿದ ಸ್ಟ್ರಾಂಗ್‌ ರೂಂನಲ್ಲಿರಿಸಿ ಸೀಲ್‌ ಹಾಕಲಾಯಿತು. ಮೂರು ಹಂತದ ಭದ್ರತೆ ಜತೆಗೆ ನಿರಂತರ 24/7 ಸಿಸಿ ಕ್ಯಾಮರಾ ಕಣ್ಗಾವಲು ಒದಗಿಸಲಾಗಿದೆ.

305 ಮತಗಟ್ಟೆಗಳಿಂದ ಮತದಾನ ಕಾರ್ಯಕ್ಕೆ ನಿಯೋಜಿಸಿದ್ದ ಸಿಬ್ಬಂದಿ, ಶನಿವಾರ ರಾತ್ರಿ ವೇಳೆಗೆ ಹಿಂದಿರುಗಿದರು. ಮಸ್ಕಿಯ ದೇವನಾಂಪ್ರಿಯ ಅಶೋಕ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಡಿ ಮಸ್ಟರಿಂಗ್‌ ಕಾರ್ಯ ಕೈಗೊಳ್ಳಲಾಯಿತು. ಅದೇ ಕಾಲೇಜಿನಲ್ಲಿ ಸಿದ್ಧಪಡಿಸಿದ್ದ ಸ್ಟ್ರಾಂಗ್‌ ರೂಂನಲ್ಲಿ ಮತಪೆಟ್ಟಿಗಳನ್ನು ಬಿಗಿ ಭದ್ರತೆಯ ನಡುವೆ ಇರಿಸಲಾಗಿತ್ತು.

ನಂತರ ಮತ ಎಣಿಕೆ ನಡೆಯಲಿರುವ ರಾಯಚೂರಿನ ಎಸ್‌ಆರ್‌ಪಿಎಸ್‌ ಪದವಿ ಪೂರ್ವ ಕಾಲೇಜಿಗೆ ಶನಿವಾರ ರಾತ್ರಿಯೇ ಬಿಗಿ ಬಂದೋಬಸ್ತ್ ನಡುವೆ ಮತಯಂತ್ರಗಳನ್ನು ತಂದು ಇರಿಸಲಾಯಿತು. ರವಿವಾರ ಬೆಳಗ್ಗೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ  ಜಿಲ್ಲಾಧಿಕಾರಿ ಆರ್‌.ವೆಂಕಟೇಶ ಕುಮಾರ್‌, ಚುನಾವಣಾ ವೀಕ್ಷಕರಾದ ಶ್ರೀಧರ ಬಾಬು ಅಡ್ಡಂಕಿ ಜತೆ ಅನೇಕ ಅಧಿಕಾರಿಗಳು ವಿವಿಧ ಪಕ್ಷಗಳ ಮುಖಂಡರು ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಆರ್‌.ವೆಂಕಟೇಶ ಕುಮಾರ್‌, ಮತದಾನ ಮುಗಿದ ಬಳಿಕ 305 ಮತಗಟ್ಟೆಗಳಲ್ಲಿನ ಇವಿಎಂ ಯಂತ್ರಗಳನ್ನು ಹಾಗೂ ಕಾನೂನು ಬದ್ದ ಲಕೋಟೆಗಳನ್ನು ಎಸ್‌ಆರ್‌ಪಿಎಸ್‌ ಪದವಿ ಪೂರ್ವ ಕಾಲೇಜಿನಲ್ಲಿ ನಿರ್ಮಿಸಿರುವ ಸ್ಟ್ರಾಂಗ್‌ ರೂಂಗೆ ರಾತ್ರಿಯೇ ತರಲಾಗಿದೆ. ಚುನಾವಣಾ ವೀಕ್ಷಕರು, ಅಭ್ಯರ್ಥಿಗಳು, ಏಜೆಂಟರು, ಚುನಾವಣಾಧಿಕಾರಿಯ ಸಮ್ಮುಖದಲ್ಲಿ ಸ್ಟ್ರಾಂಗ್‌ ರೂಂನಲ್ಲಿ ಮಾಡಿಕೊಳ್ಳಲಾದ ಎಲ್ಲ ಸಿದ್ಧತೆಗಳನ್ನು ತೋರಿಸಲಾಗಿದೆ, ಮತಯಂತ್ರಗಳ ಕಾವಲಿಗೆ ಬಿಗಿ ಭದ್ರತೆ ಅಂದರೆ ಮೂರು ರೀತಿಯ ಭದ್ರತೆ ಒದಗಿಸಲಾಗಿದೆ ಎಂದರು.

ಒಳಗೆ ಕೇಂದ್ರೀಯ ಮೀಸಲು ಪಡೆ, ನಂತರ ಕೆಎಸ್‌ಆರ್‌ಪಿ ಹಾಗೂ ಹೊರಗೆ ಪೊಲೀಸರು ಸೇರಿದಂತೆ ಮೂರು ವಲಯದಲ್ಲಿ ಭದ್ರತೆ ಒದಗಿಸಲಾಗಿದೆ. ಮತಯಂತ್ರಗಳನ್ನು ಸುರಕ್ಷಿತವಾಗಿವೆ. 24 ಗಂಟೆ ವೀಡಿಯೋ ರೆಕಾರ್ಡಿಂಗ್‌ ಮಾಡಲಾಗುತ್ತಿದೆ. ಸ್ಥಳದಲ್ಲಿಯೇ ಅಗ್ನಿ ಶಾಮಕ ಪಡೆಯನ್ನು ಇರಿಸಲಾಗಿದೆ. ಸುರಕ್ಷತಾ ದೃಷ್ಟಿಯಿಂದ ಕೈಗೊಳ್ಳಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಎಸ್‌ಪಿ ಪ್ರಕಾಶ್‌ ನಿಕ್ಕಂ, ಎಡಿಸಿ ದುರಗೇಶ್‌, ಸಹಾಯಕ ಆಯುಕ್ತರಾದ ರಾಜಶೇಖರ ಡಂಬಳ, ಸಂತೋಷ್‌ ಕಾಮಗೌಡ, ತಹಶೀಲ್ದಾರ್‌ ಡಾ| ಹಂಪಣ್ಣ ಸಜ್ಜನ್‌ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಇದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.