ಡಾ| ಅಂಬೇಡ್ಕರ್‌ ಬದುಕು ಅನುಕರಣೀಯ


Team Udayavani, Apr 19, 2021, 7:14 PM IST

19-23

ಮುದ್ದೇಬಿಹಾಳ: ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ಜೀವನ ಭಾರತಕ್ಕೆ, ಭಾರತದಲ್ಲಿರುವ ತುಳಿತಕ್ಕೊಳಗಾದವರ ಏಳ್ಗೆಗೆ ಮೀಸಲಾಗಿತ್ತು. ಶೋಷಿತರ, ದೀನ ದಲಿತರ, ದಮನಿತರ ಬಗ್ಗೆ ಚಿಂತನೆ ಅವರಲ್ಲಿತ್ತು. ಹತ್ತಾರು ದೇಶಗಳ ಸಂವಿಧಾನ ಅಧ್ಯಯನ ಮಾಡಿ ಈ ದೇಶದ ಸಂಸ್ಕೃತಿ, ಜಾತಿ ವ್ಯವಸ್ಥೆಗೆ ಪೂರಕವಾದ ಸಂವಿಧಾನ ನೀಡಿದ್ದಾರೆ ಎಂದು ಜಿಲ್ಲಾ ದಲಿತ ಸಾಹಿತ್ಯ ಪರಿಷತ್‌ ಅಧ್ಯಕ್ಷ ಶಿವಪುತ್ರ ಅಜಮನಿ ಹೇಳಿದರು.

ಮುದ್ದೇಬಿಹಾಳ ತಾಲೂಕಿನ ದೇವೂರ ಗ್ರಾಮದಲ್ಲಿ ರವಿವಾರ ಏರ್ಪಡಿಸಿದ್ದ ಡಾ| ಅಂಬೇಡ್ಕರ್‌ ಅವರ 130ನೇ ಜಯಂತ್ಯುತ್ಸವ, ನವೀಕೃತ ಅಂಬೇಡ್ಕರ್‌ ವೃತ್ತ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಅಂಬೇಡ್ಕರ್‌ ಓದಿರುವಷ್ಟು ಪುಸ್ತಕಗಳನ್ನು ಜಗತ್ತಿನ ಯಾವೊಬ್ಬ ಜ್ಞಾನಿಯೂ ಓದಿಲ್ಲ. ಇದಕ್ಕಾಗಿಯೇ ಅಮೆರಿಕದ ಸಂಸತ್ತಿನಲ್ಲಿ ಅಂಬೇಡ್ಕರ್‌ ಅವರ ಭಾವಚಿತ್ರ ಹಾಕಿದ್ದಾರೆ. ಬ್ರಿಟನ್‌ನಲ್ಲಿ ರಸ್ತೆಯೊಂದಕ್ಕೆ ಅಂಬೇಡ್ಕರ್‌ ಹೆಸರಿಟ್ಟಿದ್ದಾರೆ.

ಆದರೆ ಭಾರತದಲ್ಲೇ ಅವರಿಗೆ ಮನ್ನಣೆ ಸಿಗದಿರುವುದು, ಅವರು ಬರೆದ ಸಂವಿಧಾನ ಮರೆ ಮಾಚುವ ಪ್ರಯತ್ನ ನಡೆದಿರುವುದು ವಿಷಾಧಪಡುವಂಥದ್ದು ಎಂದರು. ತಹಶೀಲ್ದಾರ್‌ ಕಚೇರಿ ಚುನಾವಣಾ ವಿಭಾಗದ ಅಧಿ ಕಾರಿ ವೆಂಕಟೇಶ ಅಂಬಿಗೇರ, ಎಂಜಿವಿಸಿ ಕಾಲೇಜಿನ ಹಿರಿಯ ಉಪನ್ಯಾಸಕ ಡಾ| ಪಿ.ಎಚ್‌. ಉಪ್ಪಲದಿನ್ನಿ, ಅಧ್ಯಕ್ಷತೆ ವಹಿಸಿದ್ದ ಮುದ್ದೇಬಿಹಾಳ ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷ ರೇವಣೆಪ್ಪ ಹರಿಜನ, ಎಸ್ಸಿ-ಎಸ್ಟಿ ನೌಕರರ ಸಂಘದ ಅಧ್ಯಕ್ಷ ಕೆ.ಎಂ. ಇಬ್ರಾಹಿಂಪುರ, ಆರ್‌.ಎನ್‌. ಕಟ್ಟಿಮನಿ ಮಾತನಾಡಿ, ಅಂಬೇಡ್ಕರ್‌ ಅವರ ನೀತಿ, ನಿರೂಪಣೆಗಳು ಬುದ್ಧ, ಬಸವಣ್ಣನ ತತ್ವಗಳನ್ನು ಹೋಲುತ್ತವೆ. ದೇಶ ಇರುವವರೆಗೂ ಅವರ ಹೆಸರು ಶಾಶ್ವತವಾಗಿರುತ್ತದೆ ಎಂದರು.

ಪಿಡಿಒ ಆನಂದ ಹಿರೇಮಠ, ಗಣ್ಯರಾದ ಬಿ.ಎಸ್‌. ದೇವೂರ, ಪರಶುರಾಮ ಚಲವಾದಿ, ವೈ.ಟಿ. ಚಲವಾದಿ, ಶರಣಬಸು ಚಲವಾದಿ ನೇಬಗೇರಿ ಸೇರಿ ಹಲವರು ವೇದಿಕೆಯಲ್ಲಿದ್ದರು. ಈಶಪ್ಪ ಇಲಕಲ್‌, ಕರಿಯಪ್ಪ ಕಟ್ಟಿಮನಿ, ಚಂದಪ್ಪ ಮಾದರ, ಏಕನಾಥ ಚಲವಾದಿ, ಬಸಲಿಂಗಯ್ಯ ಹಿರೇಮಠ, ರಾಜೇಸಾಬ ದೊಡಮನಿ, ಯಲ್ಲಪ್ಪ ಜಳಕಿ, ರಮೇಶ ಗೊಳಸಂಗಿ, ಮುತ್ತಣ್ಣ ಕಟ್ಟಿಮನಿ, ತಿಪ್ಪಣ್ಣ ಜಳಕಿ, ಎಸ್‌.ಬಿ. ಬಿರಾದಾರ, ಶಂಕ್ರಪ್ಪ ಚಲವಾದಿ, ರುದ್ರಗೌಡ ಪಾಟೀಲ, ಸಿದ್ದಪ್ಪ ಚವರಿ, ರೇವಣೆಪ್ಪ ಚವರಿ, ಏಕನಾಥ ಚಲವಾದಿ, ಗ್ರಾಪಂ ಕಾರ್ಯದರ್ಶಿ ರಂಗರಾಜು ಇದ್ದರು.

ನಿವೃತ್ತ ಸರ್ಕಾರಿ ನೌಕರರಾದ ಕೆ.ಎಂ. ಇಬ್ರಾಹಿಂಪುರ, ಬಿ.ಎಚ್‌.ಯರಝರಿ, ಪಿ.ಎ.ಯರಝರಿ, ಕೆ.ಬಿ.ದೊಡಮನಿ, ಆರ್‌. ಎನ್‌.ಕಟ್ಟಿಮನಿ, ಗ್ರಾಪಂ ಸದಸ್ಯರಾದ ಎಚ್‌. ಎನ್‌.ಹುಗ್ಗಿ, ಶೈಲಾ ಚವರಿ, ಪೀರವ್ವ ಮಾದರ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಡಾ| ಅಂಬೇಡ್ಕರ್‌ ನವೀಕೃತ ವೃತ್ತವನ್ನು ಉದ್ಘಾಟಿಸಲಾಯಿತು. ಗಣ್ಯರು ಧ್ವಜಾರೋಹಣ ನೆರವೇರಿಸಿದರು. ಶಿಕ್ಷಕ ಪರಶುರಾಮ ದೇವೂರ ನಿರೂಪಿಸಿದರು. ಶಿಕ್ಷಕ ವೈ.ಟಿ. ಚಲವಾದಿ ವಂದಿಸಿದರು. ಕಾರ್ಯಕ್ರಮದ ನಂತರ ಸಂಜೆ ಡಾ| ಅಂಬೇಡ್ಕರ್‌ ಅವರ ಭಾವಚಿತ್ರದ ಅದ್ಧೂರಿ ಮೆರವಣಿಗೆ ನಡೆಸಲಾಯಿತು.

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.