ರಾಜ್ಯಪಾಲರ ಸಭೆ ಬಳಿಕ ಖಂಡಿತ ರಾಜ್ಯದಲ್ಲಿ ಕಠಿಣ ರೂಲ್ಸ್ ಜಾರಿ : ಆರ್. ಅಶೋಕ್
Team Udayavani, Apr 20, 2021, 12:46 PM IST
ಬೆಂಗಳೂರು : ರಾಜ್ಯಪಾಲರು ಇವತ್ತು ವರ್ಚುವಲ್ ಸಭೆ ಕರೆದಿದ್ದಾರೆ. ಸಭೆಯಲ್ಲಿ ಸಿಎಂ ,ವಿಪಕ್ಷ ನಾಯಕರು ಅಧಿಕಾರಿಗಳು ಸಚಿವರಗಳು ಭಾಗಿಯಾಗಲಿದ್ದಾರೆ. ಕೋವಿಡ್ ನಿರ್ವಹಣೆಗೆ ಗವರ್ನರ್ ಕೂಡ ಭಾಗಿಯಾಗಬೇಕು ಅಂತ ಎಲ್ಲಾ ರಾಜ್ಯದ ರಾಜ್ಯಪಾಲರಿಗೆ ಕೇಂದ್ರ ಸರ್ಕಾರದ ಸೂಚನೆ ನೀಡಿದೆ. ಹಾಗಾಗೀ ಇದಕ್ಕೆ ಕಾಂಗ್ರೆಸ್ ನವರು ಯಾವುದೇ ಅರ್ಥ ಕಲ್ಪಿಸುವುದು ಬೇಡ ಕಂದಾಯ ಸಚಿವ ಎಂದು ಆರ್. ಅಶೋಕ್ ಹೇಳಿದರು.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೋವಿಡ್ ನಿರ್ವಹಣೆಗೆಗಾಗಿ ಎಲ್ಲಾ ರಾಜ್ಯಗಳಲ್ಲಿ ಗರ್ವನರ್ ಗಳು ಈ ಕೆಲಸ ಮಾತ್ರ ಮಾಡುತ್ತಾ ಇದ್ದಾರೆ. ಇದು ಕರ್ನಾಟಕದಲ್ಲಿ ಮಾತ್ರ ವಿಶೇಷವಲ್ಲ. ರಾಜ್ಯಪಾಲರ ಜತೆ ಸಭೆ ಮುಗಿದ ಬಳಿಕ ಖಂಡಿತ ರಾಜ್ಯದಲ್ಲಿ ಕಠಿಣ ರೂಲ್ಸ್ ಜಾರಿಯಾಗಲಿದೆ ಎಂದರು.
ಇದನ್ನೂ ಓದಿ : ವಲಸೆ ಕಾರ್ಮಿಕರ ಖಾತೆಗಳಿಗೆ ಹಣವನ್ನು ಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿ : ರಾಹುಲ್
ಹೊಸ ನಿಯಮಗಳು ಇಂದಿನಿಂದಲೇ ಜಾರಿಯಾಗಲಿದೆ. ತೇಜಸ್ವಿಸೂರ್ಯ ಕೇಂದ್ರ ಸಚಿವರ ಜೊತೆ ಮಾತ ನಾಡಿದ್ದಾರೆ. ಎಲ್ಲೆಲ್ಲಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ದಾಸ್ತಾನಿಗೆ ಅವಕಾಶವಿದೆವೋ ಅದನ್ನು ಕೊಡಿಸಲಾಗುವುದು. ಸಿಲಿಂಡರ್ ಮೂಲಕವೇ ಆಗಬೇಕಾದ ಕಡೆಗೆ ಖಾಲಿ ಸಿಲಿಂಡರ್ ಗಳನ್ನು ವಿತರಿಸಿ ಆ ಮೂಲಕವೂ ದಾಸ್ತಾನಿಗೆ ಕ್ರಮ ಕೈಗೊಳ್ಳಲು ವ್ಯವಸ್ಥೆ ಮಾಡಲಾಗುವುದು. ಕೇಂದ್ರ ಸರ್ಕಾರ ಇದಕ್ಕೆ ವ್ಯವಸ್ಥೆ ಮಾಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!