ಕೋವಿಡ್ ಲಸಿಕೆ ವಿತರಣೆಗೆ 5 ರಾಜ್ಯ, ಕೇಂದ್ರಾಡಳಿತ ಪ್ರದೇಶದಲ್ಲಿ ಖಾಸಗಿ ಸೌಲಭ್ಯ ಇಲ್ಲ!
ದೆಹಲಿ, ಕೇರಳ ಮತ್ತು ಉತ್ತರಪ್ರದೇಶದಲ್ಲಿ ಅತೀ ಹೆಚ್ಚು ಕೋವಿಡ್ 19 ಪ್ರಕರಣಗಳು ವರದಿಯಾಗುತ್ತಿದೆ.
Team Udayavani, Apr 20, 2021, 6:11 PM IST
ನವದೆಹಲಿ: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡುವ ಮೂರನೇ ಹಂತದ ಅಭಿಯಾನಕ್ಕೆ ಕೆಲವು ದಿನಗಳು ಬಾಕಿ ಇದ್ದು, ಈ ಲಸಿಕೆ ವಿತರಣೆಗೆ ಹೆಚ್ಚಾಗಿ ಖಾಸಗಿ ವ್ಯವಸ್ಥೆಯನ್ನೇ ಬಳಕೆ ಮಾಡಲಾಗುತ್ತಿದೆ. ಆದರೆ ಸರ್ಕಾರದ ಅಧಿಕೃತ ಅಂಕಿಅಂಶದ ಪ್ರಕಾರ ಎಲ್ಲಾ ಸಣ್ಣ ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಂಪೂರ್ಣವಾಗಿ ಸರ್ಕಾರಿ ವ್ಯವಸ್ಥೆ ಮೇಲೆ ಅವಲಂಬಿತವಾಗಿ ಎಂದು ತಿಳಿಸಿದೆ.
ಇದನ್ನೂ ಓದಿ:ಬೆಂಗಳೂರಿಗೆ ಲಾಕ್ ಡೌನ್ ಅನಿವಾರ್ಯವಿದೆ : ಸರ್ವ ಪಕ್ಷ ಸಭೆಯಲ್ಲಿ ಕುಮಾರಸ್ವಾಮಿ
ಕೇಂದ್ರ ಸರ್ಕಾರದ ಕೋವಿನ್ ಪೋರ್ಟಲ್ ಮಾಹಿತಿ ಪ್ರಕಾರ, 13 ಸಣ್ಣ ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್ ಲಸಿಕೆ ನೀಡಲು ಹತ್ತಕ್ಕಿಂತಲೂ ಕಡಿಮೆ ಖಾಸಗಿ ಆಸ್ಪತ್ರೆ ಸೌಲಭ್ಯವಿದೆ. ಅಲ್ಲದೇ ಐದು ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಲಸಿಕೆ ವಿತರಣೆಗೆ ಯಾವುದೇ ಖಾಸಗಿ ಸೌಲಭ್ಯಗಳಿಲ್ಲ.
ಹತ್ತಕ್ಕಿಂತ ಕಡಿಮೆ ಖಾಸಗಿ ಸೌಲಭ್ಯವಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಯಾವುದೆಂದರೆ, ಅಂಡಮಾನ್ ಮತ್ತು ನಿಕೋಬಾರ್ , ಅರುಣಾಚಲ ಪ್ರದೇಶ, ದಾಮನ್ ಮತ್ತು ದಿಯು, ಲಡಾಖ್, ಲಕ್ಷದ್ವೀಪದಲ್ಲಿ ಯಾವುದೇ ಖಾಸಗಿ ಸೌಲಭ್ಯ ಇಲ್ಲ. ದಾದ್ರ ಮತ್ತು ನಗರ್ ಹವೇಲಿಯಲ್ಲಿ 2 ಖಾಸಗಿ ಸೌಲಭ್ಯ, ಮಣಿಪುರದಲ್ಲಿ 3, ಮೇಘಾಲಯ 7, ನಾಗಲ್ಯಾಂಡ್ 4, ಪುದುಚೆರಿ 7, ಸಿಕ್ಕಿಂ 1, ತ್ರಿಪುರಾ 1 ಮತ್ತು ಮಿಜೋರಾಂನಲ್ಲಿ 1 ಖಾಸಗಿ ಆಸ್ಪತ್ರೆ ಸೌಲಭ್ಯದ ವ್ಯವಸ್ಥೆ ಇದೆ ಎಂದು ತಿಳಿಸಿದೆ.
ಕೆಲವು ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್ ಲಸಿಕೆ ಅಭಿಯಾನ ನಡೆಸಲು ಯಾವುದೇ ಖಾಸಗಿ ಸೌಲಭ್ಯ ಇಲ್ಲ ಎಂಬುದಾಗಿ ಈ ಮೊದಲು ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದರು. ಕುತೂಹಲಕಾರಿ ವಿಷಯವೇನೆಂದರೆ ದೇಶದಲ್ಲಿ ಕೋವಿಡ್ ಲಸಿಕೆ ವಿತರಣೆಗೆ 1110ಕ್ಕೂ ಅಧಿಕ ಖಾಸಗಿ ಸೌಲಭ್ಯ ಹೊಂದಿರುವ ಒಂದೇ ಒಂದು ರಾಜ್ಯವೆಂದರೆ ಅದು ತಮಿಳುನಾಡು.
ದೆಹಲಿ, ಕೇರಳ ಮತ್ತು ಉತ್ತರಪ್ರದೇಶದಲ್ಲಿ ಅತೀ ಹೆಚ್ಚು ಕೋವಿಡ್ 19 ಪ್ರಕರಣಗಳು ವರದಿಯಾಗುತ್ತಿದೆ. ಆದರೆ ಕೋವಿಡ್ ಲಸಿಕೆ ವಿತರಿಸಲು ದೆಹಲಿಯಲ್ಲಿ 817, ಕೇರಳದಲ್ಲಿ 230 ಹಾಗೂ ಉತ್ತರಪ್ರದೇಶದಲ್ಲಿ 1,101 ಖಾಸಗಿ ಸೌಲಭ್ಯ ಹೊಂದಿದೆ ಎಂದು ಪಿಟಿಐ ವರದಿ ತಿಳಿಸಿದೆ. 3ನೇ ಹಂತದ ಕೋವಿಡ್ ಲಸಿಕೆ ವಿತರಣೆಯಲ್ಲಿ 18ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೇಂದ್ರ ಸರಕಾರ ಅವಕಾಶ ನೀಡಿರುವುದರಿಂದ ಈ ಅಭಿಯಾನದಲ್ಲಿ ಖಾಸಗಿ ಆಸ್ಪತ್ರೆಗಳು ಮತ್ತು ಸರ್ಕಾರಿ ಆಸ್ಪತ್ರೆಗಳ ಪಾಲು ಮಹತ್ತರವಾದದ್ದಾಗಿದೆ ಎಂದು ವರದಿ ವಿವರಿಸಿದೆ. ಮೇ 1ರಿಂದ 18 ವರ್ಷದ ಮೇಲಿನ ಎಲ್ಲರಿಗೂ ಲಸಿಕೆ ಪಡೆಯುವ ಅವಕಾಶವನ್ನು ಕೇಂದ್ರ ಸರಕಾರ ಕಲ್ಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್ ಚಿಕಿತ್ಸೆ
RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು
Mother: ತಾಯಿಯ ವೃತ್ತಿಗಳು; ಆಕ್ಯುಪೇಷನಲ್ ಥೆರಪಿಯ ಒಳನೋಟಗಳು
Sirsi: ಬಾರದ ಹೈನು ಪ್ರೋತ್ಸಾಹ; ಶೀಘ್ರ ಬಿಡುಗಡೆಗೆ ಒತ್ತಾಯ
Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ