ಗದಗ ಜಿಲ್ಲೆಯಲ್ಲಿ ಕೋವಿಡ್ ನಿಯಮಕ್ಕೆ ಕ್ಯಾರೆ ಎನ್ನದ ಜನ
ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಮಾಯ! ಖಾಸಗಿ ವಾಹನಗಳಲ್ಲಿ ಹೆಚ್ಚು ಜನರ ಪ್ರಯಾಣ
Team Udayavani, Apr 20, 2021, 8:01 PM IST
ಗದಗ: ಎಲ್ಲೆಡೆ ಕೊರೊನಾ 2ನೇ ಅಲೆ ಅಬ್ಬರಿಸುತ್ತಿದ್ದು, ಜಿಲ್ಲೆಯಲ್ಲೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದೆ. ಕೊರೊನಾ ತಡೆಗೆ ಮಾಸ್ಕ್ ಬಳಕೆ ಮತ್ತು ಸಾಮಾಜಿಕ ಅಂತರವೇ ಮದ್ದು ಎಂದು ಸರ್ಕಾರ ಎಷ್ಟೇ ಜಾಗೃತಿ ಮೂಡಿಸುತ್ತಿದ್ದರೂ ಜನರು ಮಾತ್ರ ತಮಗೆ ಸಂಬಂಧವೇ ಇಲ್ಲವೆಂಬಂತೆ ವರ್ತಿಸುತ್ತಿದ್ದು, ಅಪಾಯ ಆಹ್ವಾನಿಸುವಂತಿದೆ.
ಎಲ್ಲೆಡೆ ಕೋವಿಡ್ 2ನೇ ಅಲೆ ಆತಂಕ ಶುರುವಾಗಿದ್ದು, ದಿನೇ ದಿನೇ ಜಿಲ್ಲೆಯನ್ನೂ ಆವರಿಸುತ್ತಿದೆ. ಆದರೆ, ಬಹುತೇಕರು ಯಾವುದೇ ಮುನ್ನೆಚ್ಚರಿಕೆ ವಹಿಸದೇ ಮಾರುಕಟ್ಟೆ ಪ್ರದೇಶಗಳಲ್ಲಿ ಸೇರುತ್ತಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 222ಕ್ಕೆ ತಲುಪಿದ್ದರೂ, ರವಿವಾರ ಗದಗ-ಬೆಟಗೇರಿ ಅವಳಿ ನಗರ ಹಾಗೂ ಶಿರಹಟ್ಟಿ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆಯುತ್ತಿರುವ ಮಾರುಕಟ್ಟೆಯಲ್ಲಿ ಹೆಚ್ಚಿನ ಜನಸಂದಣಿ ಕಂಡು ಬಂತು. ಈ ಮಧ್ಯೆ ಗದಗ-ಬೆಟಗೇರಿ ಅವಳಿ ನಗರ ಸೇರಿ ಜಿಲ್ಲೆಯ ನಗರ- ಪಟ್ಟಣಗಳಲ್ಲಿ ಜನ ಸುರಕ್ಷಿತ ಅಂತರ ಕಾಪಾಡಿಕೊಳ್ಳದೇ ಮಾಸ್ಕ್ ಧರಿಸುವುದನ್ನು ಮರೆತಿರುವುದು ಆತಂಕಕಾರಿ.
ಬಹುತೇಕ ಗದ್ದ, ಗಂಟಲಿಗೆ ಮಾಸ್ಕ್:
ಕೋವಿಡ್ ತಡೆಗೆ ಸರ್ಕಾರ ಮಾಸ್ಕ್ ಬಳಕೆ ಕಡ್ಡಾಯಗೊಳಿಸಿದೆ. ಬೆರಳೆಣಿಕೆಯಷ್ಟು ವರ್ತಕರು ಕಟ್ಟುನಿಟ್ಟಾಗಿ ಮಾಸ್ಕ್ ಧರಿಸುತ್ತಿದ್ದಾರೆ. ಬ್ಯಾಂಕ್ ರೋಡ್, ತರಕಾರಿ ಮಾರುಕಟ್ಟೆಯಲ್ಲಿ ಬಿಸಿಲಿನ ಝಳ ಹೆಚ್ಚಿದೆ ಎಂಬ ನೆಪವೊಡ್ಡುವ ಕೆಲವರು ಮಾಸ್ಕ್ಗಳನ್ನು ಗದ್ದ, ಕುತ್ತಿಗೆ ಭಾಗದಲ್ಲಿ ಎಳೆ ಬಿಡುತ್ತಿರುವುದು ಕಳವಳಕಾರಿ ಸಂಗತಿ. ಇನ್ನುಳಿದಂತೆ ಬಹುತೇಕರು ಮಾಸ್ಕ್ ಮರೆತು ಬಿಟ್ಟಿದ್ದಾರೆ ಎನ್ನುವಂತಾಗಿದೆ.
ಜಾನುವಾರು ಸಂತೆಯಲ್ಲಿಲ್ಲ ಜಾಗೃತಿ:
ದಿನಸಿ ಹಾಗೂ ತರಕಾರಿ ಮಾರುಕಟ್ಟೆ ಮಾತ್ರವಲ್ಲ ಜಾನುವಾರು ಸಂತೆಯಲ್ಲೂ ಕೊರೊನಾ ತಡೆ ಕುರಿತು ಜಾಗೃತಿ ಇಲ್ಲ. ನಗರದ ಎಪಿಎಂಸಿ ಪ್ರಾಂಗಣದಲ್ಲಿ ಶನಿವಾರ ನಡೆದ ಸಂತೆಯಲ್ಲೂ ಬಹುತೇಕ ರೈತರ ಮುಖದಲ್ಲೂ ಮಾಸ್ಕ್ ಕಂಡು ಬರಲಿಲ್ಲ. ಜಾನುವಾರುಗಳ ಹಲ್ಲು ನೋಡುವಾಗಲೂ ಯಾರೊಬ್ಬರೂ ಕೈಗವಸು ಧರಿಸದೇ, ಒಬ್ಬರಾದ ನಂತರ ಮತ್ತೂಬ್ಬರು ಪರೀಕ್ಷಿಸುತ್ತಿದ್ದರು. ಇದರಿಂದ ಜಾನುವಾರುಗಳಿಗೂ ಸೋಂಕು ಹರಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಸಾರಿಗೆ, ಖಾಸಗಿ ವಾಹನಗಳಲ್ಲಿಲ್ಲ ಅಂತರ:
ಸಾರಿಗೆ ನೌಕರರ ಮುಷ್ಕರ ಮುಂದುವರಿಯುತ್ತಿದ್ದು, ಪ್ರಯಾಣಿಕರು ಖಾಸಗಿ ಬಸ್ಗಳಲ್ಲಿ ಸಂಚರಿಸುವಂತಾಗಿದೆ. ಖಾಸಗಿ ವಾಹನದಲ್ಲಿ ನಿಗದಿಗಿಂತ ದುಪ್ಪಟ್ಟು ಪ್ರಯಾಣಿಕರನ್ನು ಹೇರಿಕೊಳ್ಳಲಾಗುತ್ತಿದೆ. ಇನ್ನು ಮುಷ್ಕರ ಹಿನ್ನೆಲೆಯಲ್ಲಿ ಬೆರಳೆಣಿಕೆಯಷ್ಟು ಸಾರಿಗೆ ಬಸ್ ಗಳು ಸಂಚರಿಸುತ್ತಿದ್ದು, ಜನರು ಸಾಮಾಜಿಕ ಅಂತರವಿಲ್ಲದೇ ಪ್ರಯಾಣಿಸುತ್ತಿದ್ದಾರೆ ಎಂಬುದು ಗಮನಾರ್ಹ.
ಎಚ್ಚೆತ್ತುಕೊಳ್ಳಬೇಕಿದೆ ಜಿಲ್ಲಾಡಳಿತ:
ಕಳೆದ ವರ್ಷ ಕೊರೊನಾ ಆರಂಭಿಕ ದಿನಗಳಲ್ಲಿ ಮಾಸ್ಕ್ ಇಲ್ಲದೇ, ಹೊರ ಬರುವವರಿಗೆ ನಗರಸಭೆ, ಪೊಲೀಸ್ ಇಲಾಖೆಯಿಂದ 100 ರೂ. ದಂಡ ವಿಧಿ ಸಿ, ಮಾಸ್ಕ್ ವಿತರಿಸುವ ಮೂಲಕ ಸಾರ್ವಜನಿಕರಿಗೆ ಬಿಸಿ ಮುಟ್ಟಿಸುತ್ತಿತ್ತು. ಅದರಂತೆ ಕೋವಿಡ್ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮ ವಹಿಸಲು ಮಾ.28ರಂದು ಜಿಲ್ಲಾ ಪೊಲೀಸ್ ಇಲಾಖೆ ನಗರದಲ್ಲಿ ಪಥ ಸಂಚಲನ ನಡೆಸಿ, ಜಾಗೃತಿ ಮೂಡಿಸಲಾಗಿದೆ. ಆದರೂ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಸದ್ಯ ಜಿಲ್ಲೆಯಲ್ಲಿ ರವಿವಾರ ಸೋಂಕಿತರ ಸಂಖ್ಯೆ 222ಕ್ಕೆ ತಲುಪಿದೆ. ಇನ್ನಾದರೂ, ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು