ಅಳಿದು ಹೋದ ಐತಿಹಾಸಿಕ ಮಲ್ಲಾರು ಕೋಟೆ !


Team Udayavani, Apr 21, 2021, 6:00 AM IST

ಅಳಿದು ಹೋದ ಐತಿಹಾಸಿಕ ಮಲ್ಲಾರು ಕೋಟೆ !

ಕಾಪು: ಸರಕಾರ, ಜಿಲ್ಲಾಡಳಿತ, ಸ್ಥಳೀಯಾಡಳಿತ ಸಂಸ್ಥೆಗಳು ಮತ್ತು ಪುರಾತತ್ವ ಇಲಾಖೆಯ ಸಂಪೂರ್ಣ ನಿರ್ಲಕ್ಷ್ಯದಿಂದಾಗಿ ನಂದಾವರ ಮತ್ತು ಉದ್ಯಾವರ ಅರಮನೆ – ಕೋಟೆಯ ರೀತಿಯಲ್ಲೇ ಕಾಪು ತಾಲೂಕಿನ ಐತಿಹಾಸಿಕ ಮಲ್ಲಾರು ಕೋಟೆಯೂ ಕೂಡ ಅಳಿದು ಹೋಗಿದೆ. ಅದರೊಂದಿಗೆ ಮಲ್ಲಾರು ಕೋಟೆ ಪ್ರದೇಶದಲ್ಲಿ ಐತಿಹಾಸಿಕ ಕುರುಹಾಗಿರುವ ನಿನ್ನಿಕೆರೆ/ನಂದಿಕೆರೆಗೂ ನಾಶದ ಭೀತಿ ಎದುರಾಗಿದೆ.

ವಿಜಯನಗರ ಅರಸರ ಕಾಲದ್ದು
ವಿಜಯನಗರ ರಾಜರ ಆಡಳಿತ ಕಾಲದ್ದು ಎನ್ನಲಾಗುತ್ತಿದ್ದ ಮಲ್ಲಾರುವಿನ ಕೋಟೆ ಹದಿನಾರು ಎಕರೆಗೂ ಅಧಿಕ ಸ್ಥಳದಲ್ಲಿ ವ್ಯಾಪಿಸಿತ್ತು. ಈಗ ಕೋಟೆ ಕಲ್ಲುಗಳೂ ಕಾಣಿಸುತ್ತಿಲ್ಲ. ಇಲ್ಲಿನ ದಿಬ್ಬಗಳನ್ನು ನೆಲ ಸಮಗೊಳಿಸಲಾಗಿದ್ದು, ಐತಿಹಾಸಿಕ ವಸ್ತುಗಳೂ ನಾಶ ವಾಗಿವೆ. ಈಗ ಕೆರೆಯ ಕುರುಹು ಮಾತ್ರ ಕಾಣುತ್ತಿದೆ.

ಶಾಲಿವಾಹನ ಶಕ 1665ನೇ ರುಧಿರೋದ್ಗಾರಿ ಸಂವತ್ಸರದಲ್ಲಿ ಕಾಪುವಿನ ಮರ್ದ ಹೆಗ್ಗಡೆ ಮಲ್ಲಾರಿನ ಕೋಟೆಯನ್ನು ಪುನರ್‌ ನಿರ್ಮಿಸಿದ ಬಗ್ಗೆ ಮತ್ತು ಕಾಪು ಕಡಲ ಕಿನಾರೆಯಲ್ಲಿರುವ ಬೃಹತ್‌ ಬಂಡೆಯ ಮೇಲೆ ಇನ್ನೊಂದು ಕೋಟೆ (ಮನೋಹರ ಗಢ) ಕಟ್ಟಿಸಿದ ಬಗ್ಗೆ ಇತಿಹಾಸಕಾರರಾದ ಎಂ. ಗಣಪತಿ ರಾವ್‌ ಐಗಳ್‌ ಅವರ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಚೀನ ಇತಿಹಾಸ ಗ್ರಂಥದಲ್ಲಿ ಉಲ್ಲೇಖವಿದೆ.

ಖಡ್ಗ ಹೊರತಾಗಿ ಉಳಿದಿರುವುದು ನಂದಿಕೆರೆ ಅಥವಾ ನಿನ್ನಿಕೆರೆ. ಈ ಕೆರೆಯನ್ನು ಪ್ರಸ್ತುತ ಪೂರ್ಣವಾಗಿ ಗಿಡಗಂಟಿ ಆವರಿಸಿದೆ ಇಲ್ಲೊಂದು ಕೆರೆ ಇದೆ ಎನ್ನುವುದನ್ನು ಯಾರೂ ಊಹಿಸಲೂ ಸಾಧ್ಯವಿಲ್ಲದಂತಾಗಿದೆ.

ಮಾಯವಾದ ಪ್ರವಾಸಿ ಸ್ಥಳ
ಕಳೆದ ನಾಲ್ಕೈದು ದಶಕದ ಹಿಂದಿನವರೆಗೂ ಕೆಲವು ಶಾಲೆಗಳ ಶಿಕ್ಷಕರು ಮಕ್ಕಳನ್ನು ಇಲ್ಲಿಗೆ ಕರೆದುಕೊಂಡು ಬಂದು ಈ ಕೋಟೆಯನ್ನು ತೋರಿಸುತ್ತಿದ್ದರು ಎಂಬ ವಿಷಯವನ್ನು ಗ್ರಾಮದ ಹಿರಿಯರು ಇಂದಿಗೂ ನೆನಪು ಮಾಡಿಕೊಳ್ಳುತ್ತಾರೆ. ಕಾಪು ಪುರಸಭೆ, ಉಡುಪಿ ಜಿಲ್ಲಾಡಳಿತ, ಪುರಾತತ್ವ ಇಲಾಖೆ ಇನ್ನಾದರೂ ಎಚ್ಚೆತ್ತುಕೊಂಡು ಕೋಟೆಯ ಭಾಗಗಳು, ನಂದಿಕೆರೆಯನ್ನು ಪುನರುಜ್ಜೀವನಗೊಳಿಸಬೇಕಾಗಿದೆ.

ಖಡ್ಗಕ್ಕೆ ಕೋಟೆಮನೆಯಲ್ಲಿ ಪೂಜೆ
1740ರ ದಶಕದ ಅವಧಿಯಲ್ಲಿ ಕೆಳದಿ ಸಂಸ್ಥಾನದ ಅಧೀನಕ್ಕೆ ಒಳಪಟ್ಟ ಬಳಿಕ, ಮಲ್ಲಾರಿನ ಕೋಟೆಯು ಬಸಪ್ಪ ನಾಯಕನ ಆಡಳಿತದಲ್ಲಿದ್ದರೆ, ಆನಂತರ ಟಿಪ್ಪುವಿನ ಆಡಳಿತಕ್ಕೆ ಒಳಪಟ್ಟಿತ್ತು. ಬಳಿಕ ಬ್ರಿಟಿಷರ ಆಡಳಿತಕ್ಕೆ ಒಳಪಟ್ಟಿತು. ಟಿಪ್ಪು ಕಾಲದ ಖಡ್ಗವೊಂದು ಇಂದಿಗೂ ಉಳಿದಿದ್ದು, ಇದು ಕೋಟೆ ಬಳಿಯ ಕಾಪು ಶ್ರೀ ಮಾರಿಯಮ್ಮ ದೇವಿಯ ಆದಿಸ್ಥಳ (ತ್ರಿಶಕ್ತಿ ಸನ್ನಿಧಿ)ದ ಮನೆಯಲ್ಲಿ ಕೋಟೆ ಮಾರಿಯೊಂದಿಗೆ ಗುಡಿಯಲ್ಲಿದೆ. ಇದಕ್ಕೆ ಆಯುಧ ಪೂಜೆಯ ದಿನದಂದು ಪೂಜೆ ನಡೆಸಲಾಗುತ್ತಿದೆ.

ಪುನರುತ್ಥಾನಕ್ಕೆ ಪ್ರಯತ್ನಿಸಿ
ಮಲ್ಲಾರು ಕೋಟೆಗೆ ಸಂಬಂಧಪಟ್ಟ ಜಮೀನು ಈಗ ಅನ್ಯರ ಪಾಲಾಗಿದೆ. ಇಲ್ಲಿನ ಪುರಾತನ ನಂದಿಕೆರೆ ಪುನರುತ್ಥಾನಕ್ಕೆ ಸ್ಥಳೀಯಾಡಳಿತ ಸಂಸ್ಥೆ ಯೋಜನೆ ರೂಪಿಸಬೇಕಿದೆ.
-ದಯಾನಂದ ಸೇರ್ವೆಗಾರ್‌ ಕೋಟೆಮನೆ, ಕಾಪು ಹಳೇ ಮಾರಿಗುಡಿ ದರ್ಶನ ಪಾತ್ರಿ

ಉಳಿವಿಗೆ ಯತ್ನ
ಕಾಪುವಿನ ಐತಿಹಾಸಿಕ ನಂದಿಕೆರೆ ಸರಕಾರಿ ಜಾಗದಲ್ಲಿ ಇದೆಯೋ ಅಥವಾ ಖಾಸಗಿ ಜಾಗದಲ್ಲಿದೆಯೋ ಎನ್ನುವುದರ ಬಗ್ಗೆ ಕಡತಗಳಲ್ಲಿ ಪರಿಶೀಲಿಸಿ ತಿಳಿದುಕೊಳ್ಳಬೇಕಿದೆ. ಸರಕಾರಿ ಕೆರೆಯಾಗಿದ್ದರೆ ಮುತುವರ್ಜಿ ವಹಿಸಿ ಪುನಶ್ಚೇತನಕ್ಕೆ ಪ್ರಯತ್ನಿಸಲಾಗುವುದು. ಅದೇ ರೀತಿಯಲ್ಲಿ ಕೌನ್ಸಿಲ್‌ನ ಸಹಕಾರದೊಂದಿಗೆ ಕಾಪುವಿನ ಐತಿಹಾಸಿಕ ಪ್ರದೇಶಗಳನ್ನು ಉಳಿಸಿಕೊಳ್ಳಲೂ ಪ್ರಯತ್ನಿಸುತ್ತೇವೆ.
-ವೆಂಕಟೇಶ ನಾವಡ , ಮುಖ್ಯಾಧಿಕಾರಿ, ಕಾಪು ಪುರಸಭೆ

– ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.