ನಿಷೇಧಾಜ್ಞೆ ನಡುವೆ ಜೈಲು ಭರೋ ಚಳವಳಿಗೆ ಯತ್ನ


Team Udayavani, Apr 21, 2021, 2:46 PM IST

incident held at kolara

ಕೋಲಾರ: ನಿಷೇಧಾಜ್ಞೆಯ ನಡುವೆಯೂ ಜೈಲ್‌ಭರೋ ಚಳವಳಿ ನಡೆಸಲು ಮುಂದಾದ ಸಾರಿಗೆನೌಕರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ,ಗುಂಪನ್ನು ಚದುರಿಸಿದ ಘಟನೆ ಇಲ್ಲಿನ ಗ್ರಾಮಾಂತರ ಠಾಣೆ ಮುಂಭಾಗ ನಡೆಯಿತು.

ಮಂಗಳವಾರ ಜೈಲು ಭರೋ ಚಳವಳಿಗೆ ಮುಂದಾದಸಾರಿಗೆ ನೌಕರರು, ಇಲ್ಲಿನ ಗ್ರಾಮಾಂತರ ಠಾಣೆಯಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದಾಗಿ ಸ್ವಲ್ಪಹೊತ್ತು ಉದ್ರಿಕ್ತ ವಾತಾವರಣ ಉಂಟಾಗಿತ್ತು. ಈಸಂಬಂಧ 32 ಸಾರಿಗೆ ನೌಕರರನ್ನು ಬಂಧಿಸಿದ್ದು, ಎಲ್ಲರಮೇಲೂ ಕೇಸು ದಾಖಲು ಮಾಡಿಕೊಳ್ಳಲಾಗಿದೆ. ಲಾಠಿಪ್ರಹಾರದಿಂದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಗುಂಪು ಚದುರಿಸಲು ಲಾಠಿ ಚಾರ್ಜ್‌: ಸಾರಿಗೆ ನೌಕರರುತಮ್ಮ ಹಲವಾರು ಬೇಡಿಕೆಗಳನ್ನಿಟ್ಟುಕೊಂಡು ಕಳೆದ 14ದಿವಸಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದು, ಮಂಗಳವಾರ ಜೈಲ್‌ ಭರೋ ಚಳುವಳಿಯನ್ನು ಹಮ್ಮಿಕೊಳ್ಳಲಾಗಿತ್ತು. ನೌಕರರು ಪ್ರತಿಭಟನೆ ನಡೆಸಲು ಅವಕಾಶಇರುವುದಿಲ್ಲ. ಈಗಾಗಲೇ 144 ಸೆಕ್ಷನ್‌ ರೀತಿಯಲ್ಲಿನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರೂ,ಗ್ರಾಮಾಂತರ ಪೊಲೀಸ್‌ ಠಾಣೆ ಎದುರು ನೌಕರರುಜಗ್ಗದೆ ಘೋಷಣೆಗಳನ್ನು ಕೂಗಿದ್ದರಿಂದ ಗುಂಪನ್ನುಚದುರಿಸಲು ಪೋಲಿಸರು ಲಾಠಿ ಪ್ರಹಾರ ನಡೆಸಿದರು.

ಸಂಗೊಂಡಹಳ್ಳಿ ಬಳಿ ನೌಕರರ ಗುಂಪು: ನಗರದಕೆಎಸ್‌ಆರ್‌ಟಿಸಿ ಡಿಪೋ ಮುಂದೆ ನೌಕರರು ಪ್ರತಿಭಟನೆನಡೆಸುತ್ತಾರೆ ಎಂದು ಪೊಲೀಸರುಜಮಾವಣೆಗೊಂಡಿದ್ದರು. ಇದನ್ನು ಕಂಡ ಸಾರಿಗೆ ಸಂಸ್ಥೆನೌಕರರು ಚಿಕ್ಕಬಳ್ಳಾಪುರ ರಸ್ತೆಯ ಸಂಗೊಂಡಹಳ್ಳಿ ಬಳಿನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದರು.

ಮಾತಿನ ಚಕಮಕಿ: ವಿಷಯ ತಿಳಿದ ಪೊಲೀಸರು ಸ್ಥಳಕ್ಕೆಧಾವಿಸಿ ಪ್ರತಿಭಟನೆ ಮಾಡಲು ಅವಕಾಶವಿಲ್ಲ. ಎಲ್ಲರೂಮನೆಗೆ ಹೋಗಿ ಎಂದು ಎಚ್ಚರಿಕೆ ನೀಡಿದರು. ಇದಕ್ಕೆಒಪ್ಪದ ನೌಕರರು ಪ್ರತಿಭಟನೆ ನಡೆಸಲು ಮುಂದಾದರು,ಆಗ ಪೊಲೀಸರು 20 ಮಂದಿ ನೌಕರರನ್ನು ಬಂಧಿಸಿಜೀಪುಗಳನ್ನು ಗ್ರಾಮಾಂತರ ಪೊಲೀಸ್‌ ಠಾಣೆಗೆಕರೆತಂದರು.

ಈ ವೇಳೆ ಪೊಲೀಸರು ಮತ್ತು ನೌಕರರನಡುವೆ ಮಾತಿನ ಚಕಮಕಿ ನಡೆಯಿತು, ಪೊಲೀಸರುಗುಂಪನ್ನು ಚದುರಿಸಿದರು.

ನೌಕರರ ಬಿಡುಗಡೆಗೆ ಒತ್ತಾಯ: ನಂತರಬಂಧನಕ್ಕೊಳಗಾಗಿರುವ ನೌಕರರನ್ನು ಕೂಡಲೇ ಬಿಡುಗಡೆಮಾಡಬೇಕು ಎಂದು ಒತ್ತಾಯಿಸಿ, ಗ್ರಾಮಾಂತರಪೊಲೀಸ್‌ ಠಾಣೆ ಬಳಿ ಸಾರಿಗೆ ಸಂಸ್ಥೆಯ ನೂರಾರುನೌಕರರು ಜಮಾವಣೆಗೊಂಡರು. ನಾವು ನಮ್ಮಬೇಡಿಕೆಗಳ ಈಡೇರಿಕೆಗೋಸ್ಕರ ಪ್ರತಿಭಟನೆನಡೆಸುತ್ತಿದ್ದೇವೆ. ನಮ್ಮ ಬೇಡಿಕೆಗಳು ನ್ಯಾಯಯುತವಾಗಿವೆಎಂದು ಒತ್ತಾಯಿಸುತ್ತಾ ಘೋಷಣೆಗಳನ್ನು ಕೂಗಿದರು.ಇದೇ ವೇಳೆ ಪೊಲೀಸರೂ ಮೈಕ್‌ಗಳ ಮೂಲಕ ಸೆಕ್ಷನ್‌144 ಜಾರಿಗೊಳಿಸಲಾಗಿದೆ. ನೌಕರರು 4 ಮಂದಿಗಿಂತಹೆಚ್ಚಿಗೆ ಸೇರುವ ಹಾಗಿಲ್ಲ.

ಹೆಚ್ಚು ಜನ ಸೇರಿದರೆ ಕಾನೂನಿನರೀತಿಯಲ್ಲಿ ಕ್ರಮ ಜರುಗಿಸಬೇಕಾಗುತ್ತದೆ ಎಂಬ ಎಚ್ಚರಿಕೆನೀಡಿದರೂ ನೌಕರರು ಜಾಗಬಿಟ್ಟು ಕದಲಲಿಲ್ಲ.ನೌಕರರನ್ನು ಅಲ್ಲಿಂದ ಹೊರಡುವಂತೆ ತಳ್ಳಿದರೂಅವರು ಹಿಂದಕ್ಕೆ ಹೋಗಲಿಲ್ಲ, ಪೊಲೀಸ್‌ ಠಾಣೆ ಕಡೆಗೆನುಗ್ಗಿ ಬರುತ್ತಿದ್ದರು. ಈ ವೇಳೆ ನೌಕರರಿಗೂ ಪೋಲಿಸರನಡುವೆ ಮಾತಿನ ಚಕಮಕಿ ಉಂಟಾಯಿತಲ್ಲದೆ ನೂಕುನುಗ್ಗಲು ಉಂಟಾಗಿ ಉದ್ರಿಕ್ತ ವಾತಾವರಣಕ್ಕೆಕಾರಣವಾಯಿತು.

ಪರಿಸ್ಥಿತಿಯನ್ನು ನಿಯಂತ್ರಿಸಲು ಪೋಲಿಸರುಹರಸಾಹಸಪಟ್ಟರು, ಈ ವೇಳೆ ಗುಂಪನ್ನು ಚದುರಿಸಲುಪೋಲಿಸರು ಲಾಠಿ ಪ್ರಹಾರ ನಡೆಸಿದರು.ನೌಕರರುಅಲ್ಲಿಂದ ಜಾಗ ಖಾಲಿ ಮಾಡಿದರು ಆಗ ಪರಿಸ್ಥಿತಿ ತಿಳಿಯಾಯಿತು. ಈ ಸಂಬಂಧ ಪೊಲೀಸರು 32 ಮಂದಿನೌಕರರ ಮೇಲೆ ಕೇಸು ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.