ಪಾಲಿಕೆ ವ್ಯಾಪ್ತಿಯಲ್ಲಿ ಉದ್ಯಮ ಪರವಾನಗಿ ಮೇಳ: ವೀರೇಶ್‌


Team Udayavani, Apr 21, 2021, 4:35 PM IST

21-11

ದಾವಣಗೆರೆ: ನಗರಪಾಲಿಕೆ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಉದ್ಯಮ ಪರವಾನಿಗೆ ಮೇಳವನ್ನು ಹೆಚ್ಚು ಪರಿಣಾಮಕಾರಿಯಾಗಿ ಆಯೋಜಿಸಲಾಗುವುದು ಎಂದು ಮೇಯರ್‌ ಎಸ್‌.ಟಿ. ವೀರೇಶ್‌ ಹಳಿದರು. ಮಂಗಳವಾರ ದಾವಣಗೆರೆ ಹೋಟೆಲ್‌ ಉದ್ದಿಮೆದಾರರ ಸಂಘ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಪಿ.ಬಿ. ರಸ್ತೆಯ ಖಾಸಗಿ ರೆಸ್ಟೋರೆಂಟ್‌ ಸಭಾಂಗಣದಲ್ಲಿ ಏರ್ಪಡಿಸಿದ್ದ ಉದ್ಯಮ ಪರವಾನಿಗೆ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರು, ಮೈಸೂರು ಮಾದರಿಯಲ್ಲಿ ದಾವಣಗೆರೆಯಲ್ಲೂ ಹೋಟೆಲ್‌ ಉದ್ಯಮ ಪರವಾನಗಿ ಮೇಳ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಉದ್ಯಮ ಪರವಾನಿಗೆ ಮೇಳವನ್ನು ಹೆಚ್ಚು ಪರಿಣಾಮಕಾರಿಯಾಗಿ ನಡೆಸಲಾಗುವುದು ಎಂದರು.

ವಿದ್ಯಾಕಾಶಿ, ವಾಣಿಜ್ಯ ನಗರ ಎಂದೇ ಕರೆಯಲ್ಪಡುವ ದಾವಣಗೆರೆಯ ಅಭಿವೃದ್ಧಿಯಲ್ಲಿ ಹೋಟೆಲ್‌ ಉದ್ಯಮದ ಕಾಣಿಕೆಯೂ ಇದೆ. ವಿವಿಧ ಕಡೆಯಿಂದ ದಾವಣಗೆರೆಗೆ ಬಂದು ಹೋಗುವಂತಹ ಸಾವಿರಾರು ಜನರಿಗೆ ಆಹಾರ ಒದಗಿಸುವ ಕಾಯಕವನ್ನು ಹೋಟೆಲ್‌ ಉದ್ಯಮ ಮಾಡುತ್ತಿದೆ. ಕೊರೊನಾ ಸಂದರ್ಭದಲ್ಲೂ ಹೋಟೆಲ್‌ ಉದ್ದಿಮೆದಾರರು ನೆರವು ನೀಡಿದ್ದಾರೆ. ದಾವಣಗೆರೆಯ ನಾಗರಿಕರ ಆರೋಗ್ಯ ರಕ್ಷಣೆ, ಮೂಲಸೌಲಭ್ಯ ಒದಗಿಸುವುದು ಮಹಾನಗರ ಪಾಲಿಕೆಯ ಪ್ರಮುಖ ಜವಾಬ್ದಾರಿಯಾಗಿದೆ. ನಗರಪಾಲಿಕೆ ಹೋಟೆಲ್‌ ಉದ್ದಿಮೆದಾರರ ಜೊತೆ ಇರುತ್ತದೆ ಎಂದು ಭರವಸೆ ನೀಡಿದರು.

ದಾವಣಗೆರೆ ಹೋಟೆಲ್‌ ಉದ್ದಿಮೆದಾರರ ಸಂಘದ ಗೌರವ ಅಧ್ಯಕ್ಷ ಅಣಬೇರು ರಾಜಣ್ಣ ಮಾತನಾಡಿ, ದಾವಣಗೆರೆಯಲ್ಲಿ ಹೋಟೆಲ್‌ ಉದ್ಯಮ ಪರವಾನಿಗೆ ಮೇಳ ನಡೆಸುತ್ತಿರುವುದು ಹೊಸ ಪ್ರಯತ್ನ. ಒಂದೇ ಕಡೆ ಎಲ್ಲ ಸೌಲಭ್ಯ ಪಡೆಯಲು ಅನುಕೂಲವಾಗುತ್ತದೆ. ಹೋಟೆಲ್‌ ಉದ್ಯಮಿಗಳು ಕೋವಿಡ್‌ ನಿಯಮ ಪಾಲಿಸುತ್ತ ಬಂದಿದ್ದೇವೆ. ನಾವೂ ಸಹ ಸೋಂಕಿನ ನಿಯಂತ್ರಣ ಕಾರ್ಯದಲ್ಲಿ ಸಹಕಾರ ನೀಡಿದ್ದೇವೆ ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ಮೋತಿ ಆರ್‌. ಪರಮೇಶ್ವರ್‌ ಮಾತನಾಡಿ, 5 ವರ್ಷಗಳಿಗೊಮ್ಮೆ ಪರವಾನಿಗೆ ನವೀಕರಣ ಮಾಡಿದರೆ ಹೋಟೆಲ್‌ ಉದ್ದಿಮೆದಾರರಿಗೆ ಅನುಕೂಲ ಆಗುತ್ತದೆ ಎಂದು ಸಲಹೆ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್‌ ಪಿ. ಮುದಜ್ಜಿ ಮಾತನಾಡಿ, ದಾವಣಗೆರೆಯಲ್ಲಿ ಹೋಟೆಲ್‌ ಉದ್ಯಮ ಸೇರಿದಂತೆ 20-25 ಸಾವಿರ ವಿವಿಧ ಬಗೆಯ ಉದ್ಯಮಗಳಿವೆ. ಉದ್ದಿಮೆದಾರರು ಪರವಾನಿಗೆ ಪಡೆಯುವುದು, ಸಕಾಲದಲ್ಲಿ ನವೀಕರಣ ಮಾಡಿಸುವುದರಿಂದ ನಗರಪಾಲಿಕೆಗೆ ಆದಾಯ ಬರುತ್ತದೆ. ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಅನುಕೂಲ ಆಗುತ್ತದೆ. ಪ್ರತಿ ಉದ್ದಿಮೆದಾರರು ಪರವಾನಗಿ ಪಡೆದು ನವೀಕರಣ ಮಾಡಿಸಬೇಕು ಎಂದು ತಿಳಿಸಿದರು.

ಮಹಾನಗರ ಪಾಲಿಕೆಯ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್‌.ಡಿ. ಗೋಣೆಪ್ಪ, ಸದಸ್ಯ ಗಡಿಗುಡಾಳು ಮಂಜುನಾಥ್‌, ಆರೋಗ್ಯಾಧಿ ಕಾರಿ ಡಾ| ಸಂತೋಷ್‌ ಇತರರು ಇದ್ದರು. ನವೀನ್‌ಚಂದ್ರ ಸ್ವಾಗತಿಸಿದರು. ಬಿ.ಕೆ. ಸುಬ್ರಹ್ಮಣ್ಯ ನಿರೂಪಿಸಿದರು.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.