ಹುಬ್ಬಳ್ಳಿಯಲ್ಲಿ ಅರ್ಥ ಕಳೆದುಕೊಂಡ ಕೋವಿಡ್‌ ನಿಯಮ

ಖರೀದಿ ಸಂಭ್ರಮದಲ್ಲಿ ನಿರ್ಲಕ್ಷ್ಯ ಜಾಹೀರು

Team Udayavani, Apr 21, 2021, 6:45 PM IST

gtete

ವರದಿ : ಬಸವರಾಜ ಹೂಗಾರ

ಹುಬ್ಬಳ್ಳಿ: ಮದುವೆ ಮತ್ತಿತರ ಶುಭ ಕಾರ್ಯಗಳಿಗೆ ಖರೀದಿ ಅಬ್ಬರದಲ್ಲಿ ಕೋವಿಡ್‌ ನಿಯಮಗಳು ಅರ್ಥ ಕಳೆದುಕೊಂಡಿವೆ. ನಗರದಲ್ಲಿ ಜನರು ಇದ್ಯಾವುದನ್ನೂ ಲೆಕ್ಕಿಸದೇ ಗುಂಪು ಗುಂಪಾಗಿ ಖರೀದಿಗೆ ಮುಂದಾಗುತ್ತಿದ್ದಾರೆ.

ಮಾರುಕಟ್ಟೆಗಳಲ್ಲಿ ಜನಜಂಗುಳಿ ಕಂಡು ಬರುತ್ತಿದೆ. ಕೊರೊನಾ ಅಲೆಯ ತೀವ್ರತೆಯನ್ನು ಜನರಿನ್ನೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಮದುವೆ ಸಮಾರಂಭಕ್ಕೆ ಬಟ್ಟೆ ಖರೀದಿಗೆ ನೂರಾರು ಜನರು ಬೇರೆಡೆಯಿಂದ ನಗರಕ್ಕೆ ಆಗಮಿಸುತ್ತಿದ್ದು, ಎಲ್ಲ ಬಟ್ಟೆ ಅಂಗಡಿಗಳು ಫುಲ್‌ ಆಗಿರುತ್ತಿದೆ. ದಾಜೀಬಾನ ಪೇಟೆ, ಜವಳಿ ಸಾಲು, ಕಂಚಾಗರಗಲ್ಲಿ, ಕಾಳಮ್ಮನ ಅಗಸಿ ಬ್ರಾಡವೇ, ಕೊಪ್ಪಿಕರ ರಸ್ತೆ ಸೇರಿದಂತೆ ನಗರದ ಹಲವು ಪ್ರದೇಶಗಳಲ್ಲಿರುವ ಬಟ್ಟೆ ಅಂಗಡಿಗಳಲ್ಲಿ ಹೆಚ್ಚಿನ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ.

ಮಾಲೀಕರ ನಿರ್ಲಕ್ಷ್ಯ: ಅದೆಷ್ಟೋ ಅಂಗಡಿಗಳಲ್ಲಿ ಕೆಲಸ ಮಾಡುವವರು, ಮಾಲೀಕರೇ ಮಾಸ್ಕ್ ಧರಿಸದಿರುವುದು ಕಂಡು ಬರುತ್ತಿದೆ. ಇನ್ನು ಖರೀದಿಗೆ ಬರುವ ಜನರು ಅದರಲ್ಲೂ ಗ್ರಾಮೀಣ ಭಾಗದಿಂದ ಬರುವವರಂತೂ ಮಾಸ್ಕ್ಗೂ ತಮಗೂ ಸಂಬಂಧವೇ ಇಲ್ಲವೆಂಬಂತೆ ತೋರುತ್ತಿದ್ದಾರೆ. ದೊಡ್ಡ ದೊಡ್ಡ ಬಟ್ಟೆ ಅಂಗಡಿಗಳಲ್ಲಿ ನೂರಾರು ಜನರು ಇದ್ದರೂ ಅದರ ಪರಿಶೀಲನೆ ಮಾಡದ ಇಲಾಖೆಯವರು ಚಿಕ್ಕಪುಟ್ಟ ಅಂಗಡಿಗಳಿಗೆ ತೆರಳಿ ಪರಿಶೀಲನೆ ಮಾಡಿ ಕೈತೊಳೆದುಕೊಳ್ಳುತ್ತಿರುವುದು ಕಂಡು ಬಂದಿದೆ.

ಇನ್ನು ನಗರದ ಕೆಲ ಬಟ್ಟೆ ಅಂಗಡಿ ಸೇರಿದಂತೆ ವಿವಿಧ ಮಳಿಗೆಗಳಿಗೆ ಭೇಟಿ ನೀಡಿದ ಪೊಲೀಸರು ಜನಜಂಗುಳಿ ಚಿತ್ರೀಕರಣ ಹಾಗೂ ಛಾಯಾಚಿತ್ರ ತೆಗೆದುಕೊಂಡು ಬಂದಿದ್ದಾರೆ. ಸಾರಿಗೆ ನೌಕರರ ಮುಷ್ಕರದಿಂದ ಸಾರಿಗೆ ಸಂಸ್ಥೆಗಳ ಬಸ್‌ಗಳ ಸಂಚಾರ ಕಡಿಮೆ ಇದ್ದಿದ್ದರಿಂದ ಖಾಸಗಿ ವಾಹನಗಳಿಗೆ ಶುಕ್ರದೆಸೆ ಬಂದಿದೆ. ಆಟೋರಿಕ್ಷಾಗಳವರು, ಟ್ರ್ಯಾಕ್ಸ್‌ ಇನ್ನಿತರ ಖಾಸಗಿ ವಾಣಿಜ್ಯ ವಾಹನಗಳಲ್ಲಿ ನಾಲ್ವರು ಕುಳಿತುಕೊಳ್ಳುವ ಕಡೆ ಆರು ಜನರನ್ನು ಕುಳಿಸುತ್ತಿದ್ದು, ಅನೇಕರು ಮಾಸ್ಕ್ ಧರಿಸಿರುವುದೇ ಇಲ್ಲ. ಇದಾವುದಕ್ಕೂ ಸಮರ್ಪಕ ಕ್ರಮ ಇಲ್ಲವಾಗಿದೆ. ಬೇಕರಿ, ಮದ್ಯದಂಗಡಿಗಳು, ಬೀದಿಬದಿ ಅಂಗಡಿಗಳು, ತರಕಾರಿ-ಹಣ್ಣಿನ ಮಾರುಕಟ್ಟೆ, ಸಂತೆಗಳಲ್ಲಿ ಮಾಸ್ಕ್ ಧರಿಸಿದವರ ಸಂಖ್ಯೆ ಕಡಿಮೆಯೇ ಇದೆ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.