ನಗರದ 12 ವಿದ್ಯುತ್ ಚಿತಾಗಾರದಲ್ಲಿ ಶವ ಸಂಸ್ಕಾರ ನಡೆಸಲು ಬಿಬಿಎಂಪಿ ಆದೇಶ
Team Udayavani, Apr 21, 2021, 10:16 PM IST
ಬೆಂಗಳೂರು: ಕೊರೊನಾ ಸೋಂಕಿತರ ಶವ ಸಂಸ್ಕಾರ ಸಮಸ್ಯೆ ಮತ್ತು ನಿರ್ದಿಷ್ಟ ವಿದ್ಯುತ್ ಚಿತಾಗಾರಗಳ ಮೇಲೆ
ಹೊರೆ ಆಗುತ್ತಿರುವ ಹಿನ್ನೆಲೆಯಲ್ಲಿ ನಗರದ ಎಲ್ಲ 12 ವಿದ್ಯುತ್ ಚಿತಾರಗಳಲ್ಲೂ ಕೊರೊನಾ ಹಾಗೂ ಕೊರೊನೇತರ ಕಾರಣದಿಂದ ಮೃತಪಟ್ಟವರ ಶವ ಸಂಸ್ಕಾರಕ್ಕೆ ಬಿಬಿಎಂಪಿ ಆದೇಶ ಮಾಡಿದೆ.
ನಗರದಲ್ಲಿ ಮೊದಲು ನಾಲ್ಕು ಮತ್ತು ನಂತರದಲ್ಲಿ ಏಳು ವಿದ್ಯುತ್ ಚಿತಾಗಾರಗಳನ್ನು ಕೊರೊನಾ ಸೋಂಕಿತರ ಶವ ಸಂಸ್ಕಾರಕ್ಕೆ ಮೀಸಲಿಡಲಾಗಿತ್ತು. ಇತ್ತೀಚೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಅಧಿಕವಾಗಿ ಸಮಸ್ಯೆ ಆಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ 12 ವಿದ್ಯುತ್ ಚಿತಾಗಾರದಲ್ಲಿ ಎಲ್ಲ ಮಾದರಿ ಶವ ಸಂಸ್ಕಾರ ಮಾಡಲು ನಿರ್ಧರಿಸಲಾಗಿದೆ.
ಷರತ್ತುಗಳು: ವಿದ್ಯುತ್ ಚಿತಾಗಾರ ಸಿಬ್ಬಂದಿ ವೇತನ ಬಾಕಿ ಬಿಡುಗಡೆ ಮಾಡುವಂತೆ, ಶವ ಸಂಸ್ಕಾರಕ್ಕೆ ಯಾವುದೇ ವಿಳಂಬವಾಗಬಾರದು. ಬೆಳಗ್ಗೆ 8ರಿಂದ ರಾತ್ರಿ 8ರ ವರೆಗೆ ಕಾರ್ಯನಿರ್ವಹಣೆ, ಬೆಳಗ್ಗೆ 11ಕ್ಕೆ ಹಿಂದಿನ ದಿನದ ಶವ ಸಂಸ್ಕಾರದ ಪೂರ್ಣ ವಿವರ ನೀಡಬೇಕು. ಕೊರೊನಾ ಸೋಂಕಿನಿಂದ ಮೃತಪಟ್ಟವರ ಶವ ಸಾಗಾಣಿಕೆ ಮತ್ತು ಅಂತ್ಯಕ್ರಿಯೆಗೆ ಯಾವುದೇ ಶುಲ್ಕ ವಿಧಿಸುವಂತಿಲ್ಲ ಎನ್ನುವುದು ಸೇರಿದಂತೆ ಹಲವು ಷರತ್ತು ವಿಧಿಸಲಾಗಿದೆ.
ಲೋಪವಾಗದಂತೆ ಎಚ್ಚರಿಕೆ: ವಿದ್ಯುತ್ ಚಿತಾಗಾರಗಳ ಮೇಲೆ ಹೊರೆ ತಪ್ಪಿಸಲು ಹಾಗೂ ಶವ ಸಂಸ್ಕಾರ ವಿಳಂಬ ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ಗುಪ್ತ ಹೇಳಿದರು.
ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ದೇಹದಿಂದ ಕೊರೊನಾ ಹಬ್ಬುವುದಿಲ್ಲ. ಆದರೆ, ಪ್ಯಾಕ್ ವಿಧಾನದಲ್ಲಿ ಲೋಪವಾಗುವಂತಿಲ್ಲ ಎಂದು ಆಸ್ಪತ್ರೆಗಳಿಗೆ ನಿರ್ದೇಶನ ನೀಡಲಾಗಿದೆ. ಚಿತಾಗಾರಗಳಲ್ಲಿ ಗರಿಷ್ಠ ಜನ ಮಿತಿ ನಿಯಮ ಪಾಲಿಸಲು ಸೂಚಿಸಲಾಗಿದೆ ಎಂದು ಹೇಳಿದರು.
ಚಿತಾಗಾರದ ವಿವರ:
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !
ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು
Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ
Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್ ವ್ಯವಹಾರ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು
IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ
Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ
Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು
Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ